Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ವಿದೇಶಿ ಡ್ರಗ್​ ಪೆಡ್ಲರ್ ಬಂಧನ; 4 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ

ರಾಜ್ಯ ರಾಜಧಾನಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ. ಕಳೆದ ಜನವರಿಯಲ್ಲಿ 7 ಜನ ಡ್ರಗ್​ ಪೆಡ್ಲರ್​ಗಳನ್ನು ಬಂಧಿಸಲಾಗಿತ್ತು. ಇದೀಗ ನೈಜಿರಿಯಾ ಮೂಲದ ವ್ಯಕ್ತಿಯೋರ್ವನನ್ನು ಬಂಧಿಸಿ, ಆತನಿಂದ ಬರೊಬ್ಬರಿ 4 ಕೋಟಿ ಮೌಲ್ಯದ 4ಕೆಜಿ NDMA ಕ್ರಿಸ್ಟಲ್​ನ್ನು ಜಪ್ತಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ವಿದೇಶಿ ಡ್ರಗ್​ ಪೆಡ್ಲರ್ ಬಂಧನ; 4 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ
ವಿದೇಶಿ ಡ್ರಗ್​ ಪೆಡ್ಲರ್​ ಬಂಧನ
Follow us
ಬಿ ಮೂರ್ತಿ, ನೆಲಮಂಗಲ
| Updated By: ಕಿರಣ್ ಹನುಮಂತ್​ ಮಾದಾರ್

Updated on:Apr 19, 2024 | 3:10 PM

ಬೆಂಗಳೂರು, ಏ.19: ಬೆಂಗಳೂರಿನ ಶೆಟ್ಟಿಹಳ್ಳಿಯಲ್ಲಿ ಸಿಸಿಬಿ ಪೊಲೀಸರು(CCB Police) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿದೇಶಿ ಡ್ರಗ್​ ಪೆಡ್ಲರ್​ನ್ನು ಬಂಧಿಸಿದ್ದಾರೆ. ನೈಜಿರಿಯಾ ಮೂಲದ ಅಕ್ರಮ ವಾಸಿ ಹೆನ್ರಿ ಚುಕ್ವುಮೆಕಾ ಎಂಬಾತ ಬಂಧಿತ ಆರೋಪಿ. ಇತನಿಂದ ಬರೊಬ್ಬರಿ 4 ಕೋಟಿ ಮೌಲ್ಯದ 4ಕೆಜಿ NDMA ಕ್ರಿಸ್ಟಲ್​ನ್ನು ಜಪ್ತಿ ಮಾಡಿದ್ದಾರೆ. ಸಿಸಿಬಿ ಪಿಎಸ್ಐ ಕೇಶವಮೂರ್ತಿ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ಆರೋಪಿ ಪ್ರತಿಷ್ಟಿತ ಕಾಲೇಜ್​ ಹಾಗೂ ಐಟಿಬಿಟಿ ಸಿಬ್ಬಂದಿಗಳಿಗೆ ಹೆಚ್ಚಿನ ಹಣಕ್ಕೆ ಡ್ರಗ್​ ಮಾರುತ್ತಿದ್ದ. ಈ ಕುರಿತು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಸರಗಳ್ಳತನ ಮಾಡ್ತಿದ್ದ ಆರೋಪಿಗಳ ಬಂಧನ

ಬೆಂಗಳೂರು: ಸರಗಳ್ಳತನ ಮತ್ತು ಮನೆಗಳ್ಳತನ ಮಾಡುತ್ತಿದ್ದ ಆರು ಮಂದಿಯನ್ನ ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ.  ಅಕಾಶ್, ನಾಗೇಶ್, ಪ್ರಸನ್ನ, ಪುನೀತ್, ಶಿವಲಿಂಗ ಮತ್ತು ಪ್ರತಾಪ್​ ಬಂಧಿತರು. ಇವರಿಂದ 10.82 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದು, ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಬೆಂಗಳೂರು: ಏಳು ಜನ ಡ್ರಗ್​​​​​ ಪೆಡ್ಲರ್​​ಗಳನ್ನ ಬಂಧಿಸಿದ ಸಿಸಿಬಿ ಪೊಲೀಸರು

ರಾತ್ರಿ ವೇಳೆ ಸ್ಪೀಡ್‌ ಬ್ರೇಕರ್‌ ಕಾಣದೆ ಆಟೋ ಪಲ್ಟಿ, ಹಲವರಿಗೆ ಗಾಯ

ಚಿತ್ರದುರ್ಗ: ರಾತ್ರಿ ವೇಳೆ ಸ್ಪೀಡ್​​ ಬ್ರೇಕರ್​ ಕಾಣದೇ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಹಲವರಿಗೆ ಗಾಯವಾದ ಘಟನೆ ಚಿತ್ರದುರ್ಗ‌ದ ಕಣಿವೆ ಆಂಜನೇಯ ದೇಗುಲ‌ ಬಳಿ‌ ನಡೆದಿದೆ. ಹೆದ್ದಾರಿಯಲ್ಲಿ ಅವೈಜ್ಞಾನಿಕ ದಿಢೀರ್ ಸ್ಪೀಡ್ ಬ್ರೇಕರ್ ಅಳವಡಿಸಿದ್ದಾರೆ ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ. ಈ ಕುರಿತು ಚಿತ್ರದುರ್ಗ ಸಂಚಾರಿ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:58 pm, Fri, 19 April 24

ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ