AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ವಿದೇಶಿ ಡ್ರಗ್​ ಪೆಡ್ಲರ್ ಬಂಧನ; 4 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ

ರಾಜ್ಯ ರಾಜಧಾನಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ. ಕಳೆದ ಜನವರಿಯಲ್ಲಿ 7 ಜನ ಡ್ರಗ್​ ಪೆಡ್ಲರ್​ಗಳನ್ನು ಬಂಧಿಸಲಾಗಿತ್ತು. ಇದೀಗ ನೈಜಿರಿಯಾ ಮೂಲದ ವ್ಯಕ್ತಿಯೋರ್ವನನ್ನು ಬಂಧಿಸಿ, ಆತನಿಂದ ಬರೊಬ್ಬರಿ 4 ಕೋಟಿ ಮೌಲ್ಯದ 4ಕೆಜಿ NDMA ಕ್ರಿಸ್ಟಲ್​ನ್ನು ಜಪ್ತಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ವಿದೇಶಿ ಡ್ರಗ್​ ಪೆಡ್ಲರ್ ಬಂಧನ; 4 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ
ವಿದೇಶಿ ಡ್ರಗ್​ ಪೆಡ್ಲರ್​ ಬಂಧನ
ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ| Edited By: ಕಿರಣ್ ಹನುಮಂತ್​ ಮಾದಾರ್|

Updated on:Apr 19, 2024 | 3:10 PM

Share

ಬೆಂಗಳೂರು, ಏ.19: ಬೆಂಗಳೂರಿನ ಶೆಟ್ಟಿಹಳ್ಳಿಯಲ್ಲಿ ಸಿಸಿಬಿ ಪೊಲೀಸರು(CCB Police) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿದೇಶಿ ಡ್ರಗ್​ ಪೆಡ್ಲರ್​ನ್ನು ಬಂಧಿಸಿದ್ದಾರೆ. ನೈಜಿರಿಯಾ ಮೂಲದ ಅಕ್ರಮ ವಾಸಿ ಹೆನ್ರಿ ಚುಕ್ವುಮೆಕಾ ಎಂಬಾತ ಬಂಧಿತ ಆರೋಪಿ. ಇತನಿಂದ ಬರೊಬ್ಬರಿ 4 ಕೋಟಿ ಮೌಲ್ಯದ 4ಕೆಜಿ NDMA ಕ್ರಿಸ್ಟಲ್​ನ್ನು ಜಪ್ತಿ ಮಾಡಿದ್ದಾರೆ. ಸಿಸಿಬಿ ಪಿಎಸ್ಐ ಕೇಶವಮೂರ್ತಿ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ಆರೋಪಿ ಪ್ರತಿಷ್ಟಿತ ಕಾಲೇಜ್​ ಹಾಗೂ ಐಟಿಬಿಟಿ ಸಿಬ್ಬಂದಿಗಳಿಗೆ ಹೆಚ್ಚಿನ ಹಣಕ್ಕೆ ಡ್ರಗ್​ ಮಾರುತ್ತಿದ್ದ. ಈ ಕುರಿತು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಸರಗಳ್ಳತನ ಮಾಡ್ತಿದ್ದ ಆರೋಪಿಗಳ ಬಂಧನ

ಬೆಂಗಳೂರು: ಸರಗಳ್ಳತನ ಮತ್ತು ಮನೆಗಳ್ಳತನ ಮಾಡುತ್ತಿದ್ದ ಆರು ಮಂದಿಯನ್ನ ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ.  ಅಕಾಶ್, ನಾಗೇಶ್, ಪ್ರಸನ್ನ, ಪುನೀತ್, ಶಿವಲಿಂಗ ಮತ್ತು ಪ್ರತಾಪ್​ ಬಂಧಿತರು. ಇವರಿಂದ 10.82 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದು, ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಬೆಂಗಳೂರು: ಏಳು ಜನ ಡ್ರಗ್​​​​​ ಪೆಡ್ಲರ್​​ಗಳನ್ನ ಬಂಧಿಸಿದ ಸಿಸಿಬಿ ಪೊಲೀಸರು

ರಾತ್ರಿ ವೇಳೆ ಸ್ಪೀಡ್‌ ಬ್ರೇಕರ್‌ ಕಾಣದೆ ಆಟೋ ಪಲ್ಟಿ, ಹಲವರಿಗೆ ಗಾಯ

ಚಿತ್ರದುರ್ಗ: ರಾತ್ರಿ ವೇಳೆ ಸ್ಪೀಡ್​​ ಬ್ರೇಕರ್​ ಕಾಣದೇ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಹಲವರಿಗೆ ಗಾಯವಾದ ಘಟನೆ ಚಿತ್ರದುರ್ಗ‌ದ ಕಣಿವೆ ಆಂಜನೇಯ ದೇಗುಲ‌ ಬಳಿ‌ ನಡೆದಿದೆ. ಹೆದ್ದಾರಿಯಲ್ಲಿ ಅವೈಜ್ಞಾನಿಕ ದಿಢೀರ್ ಸ್ಪೀಡ್ ಬ್ರೇಕರ್ ಅಳವಡಿಸಿದ್ದಾರೆ ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ. ಈ ಕುರಿತು ಚಿತ್ರದುರ್ಗ ಸಂಚಾರಿ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:58 pm, Fri, 19 April 24

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ