AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಕೋಟೆ ಬ್ರಹ್ಮರಥೋತ್ಸವ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿ: ಬಿಜೆಪಿ ಹೇಳಿಕೆಗೆ ಕಾಂಗ್ರೆಸ್​ ತಿರುಗೇಟು

ಹೊಸಕೋಟೆ ಟೌನ್​ (Hoskote) ​ಅಲ್ಲಿರುವ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವ ಸಮಿತಿಗೆ ಹಿಂದೂಯೇತರ ವ್ಯಕ್ತಿಯನ್ನು ಸದಸ್ಯನಾಗಿ ನೇಮಿಸಿದ್ದ ರಾಜ್ಯ ಕಾಂಗ್ರೆಸ್​ (Congress) ಸರ್ಕಾರದ ವಿರುದ್ಧ ಬಿಜೆಪಿ (BJP) ಹರಿಹಾಯ್ದಿತ್ತು. ಈ ಹಿನ್ನಲೆ ಇದಕ್ಕೆ ಕಾಂಗ್ರೆಸ್​ ಸ್ಪಷ್ಟನೆ ನೀಡಿದ್ದು, ನಿಮ್ಮ ಯಾವ ಆಟಗಳೂ ನಡೆಯುವುದಿಲ್ಲ ಎಂದು ವಾಗ್ದಾಳಿ ನಡೆಸಿದೆ.

ಹೊಸಕೋಟೆ ಬ್ರಹ್ಮರಥೋತ್ಸವ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿ: ಬಿಜೆಪಿ ಹೇಳಿಕೆಗೆ ಕಾಂಗ್ರೆಸ್​ ತಿರುಗೇಟು
ಬಿಜೆಪಿ ಹೇಳಿಕೆಗೆ ಕಾಂಗ್ರೆಸ್​ ತಿರುಗೇಟು
ಪ್ರಸನ್ನ ಗಾಂವ್ಕರ್​
| Edited By: |

Updated on: May 08, 2024 | 4:17 PM

Share

ಬೆಂಗಳೂರು ಗ್ರಾಮಾಂತರ, ಮೇ.08: ಹೊಸಕೋಟೆ ಟೌನ್​ (Hoskote) ​ಅಲ್ಲಿರುವ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವ ಸಮಿತಿಗೆ ಹಿಂದೂಯೇತರ ವ್ಯಕ್ತಿಯನ್ನು ಸದಸ್ಯನಾಗಿ ನೇಮಿಸಿದ್ದ ರಾಜ್ಯ ಕಾಂಗ್ರೆಸ್​ (Congress) ಸರ್ಕಾರದ ವಿರುದ್ಧ ಬಿಜೆಪಿ (BJP) ಹರಿಹಾಯ್ದಿತ್ತು. ಈ ಹಿನ್ನಲೆ ಇದಕ್ಕೆ ಕಾಂಗ್ರೆಸ್​ ಸ್ಪಷ್ಟನೆ ನೀಡಿದ್ದು, ‘ಸುಳ್ಳು ಹಾಗೂ ದುರುದ್ದೇಶದ ಪೋಸ್ಟ್ ಮಾಡಿದ್ದಕ್ಕೆ ಚುನಾವಣಾ ಆಯೋಗದಿಂದ ಹಾಗೂ ಜಾಗತಿಕ ಮಟ್ಟದಲ್ಲಿ ಮುಖಭಂಗ ಅನುಭವಿಸಿದರೂ ಬಿಜೆಪಿಯ ಫೇಕ್ ಫ್ಯಾಕ್ಟರಿಗೆ ಬುದ್ದಿ ಬಂದಂತಿಲ್ಲ. ಹೊಸಕೋಟೆಯ ಅವಿಮುಕ್ತೇಶ್ವರ ಬ್ರಹ್ಮಕಲಶೋತ್ಸವ ಸಮಿತಿಗೆ ಅನ್ಯ ಧರ್ಮದ ವ್ಯಕ್ತಿಯನ್ನು ನೇಮಿಸುವುದು ಬಹಳ ಹಿಂದಿನಿಂದಲೂ ನಡೆದು ಬಂದ ಸಂಪ್ರದಾಯ, ಇದು ಹೊಸದೇನೂ ಅಲ್ಲ ಎಂದು ತಿರುಗೇಟು ಕೊಟ್ಟಿದೆ.

ಕಾಂಗ್ರೆಸ್​ ಟ್ವೀಟ್​

ಅನ್ಯ ಧರ್ಮದ ವ್ಯಕ್ತಿಯನ್ನ ನೇಮಿಸಲು ಶಿಫಾರಸು ಮಾಡಿದ್ದ ಬಿಜೆಪಿ ಶಾಸಕ ಎಂಟಿಬಿ ನಾಗರಾಜ್

2020ರಲ್ಲಿಯೂ ಅನ್ಯ ಧರ್ಮದ ವ್ಯಕ್ತಿಯನ್ನು ಸಮಿತಿಯಲ್ಲಿ ನೇಮಿಸಲಾಗಿತ್ತು, ಶಿಫಾರಸು ಮಾಡಿದ್ದು ಬಿಜೆಪಿ ಶಾಸಕ ಎಂಟಿಬಿ ನಾಗರಾಜ್, ಆಗ ಯಾರ ಸರ್ಕಾರವಿತ್ತು, ಸ್ವತಃ ಬಿಜೆಪಿ ಸರ್ಕಾರ. 2022ರಲ್ಲೂ ಅಲ್ಪಸಂಖ್ಯಾತ ವರ್ಗದ ವ್ಯಕ್ತಿಯೊಬ್ಬರನ್ನು ನೇಮಿಸಲಾಗಿತ್ತು, ಆಗಲೂ ಶಿಫಾರಸು ಮಾಡಿದ್ದು ಎಂಟಿಬಿ ನಾಗರಾಜ್, ಅಂದು ಕೂಡ ರಾಜ್ಯದಲ್ಲಿ ಇದ್ದಿದ್ದು ಬಿಜೆಪಿ ಸರ್ಕಾರ. ಬಿಜೆಪಿ ಅವರೇ ಈ ಹಿಂದೆ ನಿಮ್ಮ ಅವಧಿಯಲ್ಲಿ ನೇಮಕವಾದ ಸಮಿತಿಯ ಬಗ್ಗೆ ಉತ್ತರ ಕೊಡುವ ದಮ್ಮು ತಾಕತ್ತು ಇದೆಯೇ?. ನಿಮ್ಮ ಫೇಕ್ ಫ್ಯಾಕ್ಟರಿಯ ಬಂಡವಾಳ ಜನತೆಗೆ ಅರ್ಥವಾಗಿದೆ. ನಿಮ್ಮ ಯಾವ ಆಟಗಳೂ ನಡೆಯುವುದಿಲ್ಲ ಎಂದು ವಾಗ್ದಾಳಿ ನಡೆಸಿದೆ.

ಇದನ್ನೂ ಓದಿ:ಹೊಸಕೋಟೆ ಬ್ರಹ್ಮರಥೋತ್ಸವ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿ: ಬಿಜೆಪಿ ಆಕ್ರೋಶ

ಬಿಜೆಪಿ ಹೇಳಿದ್ದೇನು?

ಹೊಸಕೋಟೆಯ ಶ್ರೀ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮೋತ್ಸವ ಕಾರ್ಯಕ್ರಮದ ಮೇಲ್ವಿಚಾರಣೆಗೆ ಕಾಂಗ್ರೆಸ್ ‘ನವಾಜ್’ ಅವರನ್ನು ನೇಮಿಸಿದೆ. ನಮ್ಮ ದೇವಸ್ಥಾನಗಳನ್ನು ಲೂಟಿ ಮಾಡಲು ಯತ್ನಿಸಿದ ನಂತರ ಹಿಂದೂ ದ್ವೇಷಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಈಗ ಹಿಂದೂಯೇತರರನ್ನು ನೇಮಿಸುವ ಮೂಲಕ ದೇವಾಲಯಗಳು ಮತ್ತು ಅವುಗಳ ಸಂಪನ್ಮೂಲಗಳನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದೆ ಎಂದು ವಾಗ್ದಾಳಿ ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ