AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಕೋಟೆ ಬ್ರಹ್ಮರಥೋತ್ಸವ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿ: ಬಿಜೆಪಿ ಹೇಳಿಕೆಗೆ ಕಾಂಗ್ರೆಸ್​ ತಿರುಗೇಟು

ಹೊಸಕೋಟೆ ಟೌನ್​ (Hoskote) ​ಅಲ್ಲಿರುವ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವ ಸಮಿತಿಗೆ ಹಿಂದೂಯೇತರ ವ್ಯಕ್ತಿಯನ್ನು ಸದಸ್ಯನಾಗಿ ನೇಮಿಸಿದ್ದ ರಾಜ್ಯ ಕಾಂಗ್ರೆಸ್​ (Congress) ಸರ್ಕಾರದ ವಿರುದ್ಧ ಬಿಜೆಪಿ (BJP) ಹರಿಹಾಯ್ದಿತ್ತು. ಈ ಹಿನ್ನಲೆ ಇದಕ್ಕೆ ಕಾಂಗ್ರೆಸ್​ ಸ್ಪಷ್ಟನೆ ನೀಡಿದ್ದು, ನಿಮ್ಮ ಯಾವ ಆಟಗಳೂ ನಡೆಯುವುದಿಲ್ಲ ಎಂದು ವಾಗ್ದಾಳಿ ನಡೆಸಿದೆ.

ಹೊಸಕೋಟೆ ಬ್ರಹ್ಮರಥೋತ್ಸವ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿ: ಬಿಜೆಪಿ ಹೇಳಿಕೆಗೆ ಕಾಂಗ್ರೆಸ್​ ತಿರುಗೇಟು
ಬಿಜೆಪಿ ಹೇಳಿಕೆಗೆ ಕಾಂಗ್ರೆಸ್​ ತಿರುಗೇಟು
ಪ್ರಸನ್ನ ಗಾಂವ್ಕರ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on: May 08, 2024 | 4:17 PM

Share

ಬೆಂಗಳೂರು ಗ್ರಾಮಾಂತರ, ಮೇ.08: ಹೊಸಕೋಟೆ ಟೌನ್​ (Hoskote) ​ಅಲ್ಲಿರುವ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವ ಸಮಿತಿಗೆ ಹಿಂದೂಯೇತರ ವ್ಯಕ್ತಿಯನ್ನು ಸದಸ್ಯನಾಗಿ ನೇಮಿಸಿದ್ದ ರಾಜ್ಯ ಕಾಂಗ್ರೆಸ್​ (Congress) ಸರ್ಕಾರದ ವಿರುದ್ಧ ಬಿಜೆಪಿ (BJP) ಹರಿಹಾಯ್ದಿತ್ತು. ಈ ಹಿನ್ನಲೆ ಇದಕ್ಕೆ ಕಾಂಗ್ರೆಸ್​ ಸ್ಪಷ್ಟನೆ ನೀಡಿದ್ದು, ‘ಸುಳ್ಳು ಹಾಗೂ ದುರುದ್ದೇಶದ ಪೋಸ್ಟ್ ಮಾಡಿದ್ದಕ್ಕೆ ಚುನಾವಣಾ ಆಯೋಗದಿಂದ ಹಾಗೂ ಜಾಗತಿಕ ಮಟ್ಟದಲ್ಲಿ ಮುಖಭಂಗ ಅನುಭವಿಸಿದರೂ ಬಿಜೆಪಿಯ ಫೇಕ್ ಫ್ಯಾಕ್ಟರಿಗೆ ಬುದ್ದಿ ಬಂದಂತಿಲ್ಲ. ಹೊಸಕೋಟೆಯ ಅವಿಮುಕ್ತೇಶ್ವರ ಬ್ರಹ್ಮಕಲಶೋತ್ಸವ ಸಮಿತಿಗೆ ಅನ್ಯ ಧರ್ಮದ ವ್ಯಕ್ತಿಯನ್ನು ನೇಮಿಸುವುದು ಬಹಳ ಹಿಂದಿನಿಂದಲೂ ನಡೆದು ಬಂದ ಸಂಪ್ರದಾಯ, ಇದು ಹೊಸದೇನೂ ಅಲ್ಲ ಎಂದು ತಿರುಗೇಟು ಕೊಟ್ಟಿದೆ.

ಕಾಂಗ್ರೆಸ್​ ಟ್ವೀಟ್​

ಅನ್ಯ ಧರ್ಮದ ವ್ಯಕ್ತಿಯನ್ನ ನೇಮಿಸಲು ಶಿಫಾರಸು ಮಾಡಿದ್ದ ಬಿಜೆಪಿ ಶಾಸಕ ಎಂಟಿಬಿ ನಾಗರಾಜ್

2020ರಲ್ಲಿಯೂ ಅನ್ಯ ಧರ್ಮದ ವ್ಯಕ್ತಿಯನ್ನು ಸಮಿತಿಯಲ್ಲಿ ನೇಮಿಸಲಾಗಿತ್ತು, ಶಿಫಾರಸು ಮಾಡಿದ್ದು ಬಿಜೆಪಿ ಶಾಸಕ ಎಂಟಿಬಿ ನಾಗರಾಜ್, ಆಗ ಯಾರ ಸರ್ಕಾರವಿತ್ತು, ಸ್ವತಃ ಬಿಜೆಪಿ ಸರ್ಕಾರ. 2022ರಲ್ಲೂ ಅಲ್ಪಸಂಖ್ಯಾತ ವರ್ಗದ ವ್ಯಕ್ತಿಯೊಬ್ಬರನ್ನು ನೇಮಿಸಲಾಗಿತ್ತು, ಆಗಲೂ ಶಿಫಾರಸು ಮಾಡಿದ್ದು ಎಂಟಿಬಿ ನಾಗರಾಜ್, ಅಂದು ಕೂಡ ರಾಜ್ಯದಲ್ಲಿ ಇದ್ದಿದ್ದು ಬಿಜೆಪಿ ಸರ್ಕಾರ. ಬಿಜೆಪಿ ಅವರೇ ಈ ಹಿಂದೆ ನಿಮ್ಮ ಅವಧಿಯಲ್ಲಿ ನೇಮಕವಾದ ಸಮಿತಿಯ ಬಗ್ಗೆ ಉತ್ತರ ಕೊಡುವ ದಮ್ಮು ತಾಕತ್ತು ಇದೆಯೇ?. ನಿಮ್ಮ ಫೇಕ್ ಫ್ಯಾಕ್ಟರಿಯ ಬಂಡವಾಳ ಜನತೆಗೆ ಅರ್ಥವಾಗಿದೆ. ನಿಮ್ಮ ಯಾವ ಆಟಗಳೂ ನಡೆಯುವುದಿಲ್ಲ ಎಂದು ವಾಗ್ದಾಳಿ ನಡೆಸಿದೆ.

ಇದನ್ನೂ ಓದಿ:ಹೊಸಕೋಟೆ ಬ್ರಹ್ಮರಥೋತ್ಸವ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿ: ಬಿಜೆಪಿ ಆಕ್ರೋಶ

ಬಿಜೆಪಿ ಹೇಳಿದ್ದೇನು?

ಹೊಸಕೋಟೆಯ ಶ್ರೀ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮೋತ್ಸವ ಕಾರ್ಯಕ್ರಮದ ಮೇಲ್ವಿಚಾರಣೆಗೆ ಕಾಂಗ್ರೆಸ್ ‘ನವಾಜ್’ ಅವರನ್ನು ನೇಮಿಸಿದೆ. ನಮ್ಮ ದೇವಸ್ಥಾನಗಳನ್ನು ಲೂಟಿ ಮಾಡಲು ಯತ್ನಿಸಿದ ನಂತರ ಹಿಂದೂ ದ್ವೇಷಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಈಗ ಹಿಂದೂಯೇತರರನ್ನು ನೇಮಿಸುವ ಮೂಲಕ ದೇವಾಲಯಗಳು ಮತ್ತು ಅವುಗಳ ಸಂಪನ್ಮೂಲಗಳನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದೆ ಎಂದು ವಾಗ್ದಾಳಿ ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ