AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋನ್ ಬಳಸದಂತೆ ಬುದ್ಧಿವಾದ ಹೇಳಿದ್ದಕ್ಕೆ ಪ್ರಾಣ ಕಳೆದುಕೊಂಡ ಯುವತಿ

ಇತ್ತೀಚೆಗೆ ಎಷ್ಟರ ಮಟ್ಟಿಗೆ ನಮ್ಮ ಸಮಾಜ ಮೊಬೈಲ್​ನಲ್ಲಿ ಮುಳಗಿಬಿಟ್ಟಿದೆ ಅಂದರೆ, ಒಂದು ಕ್ಷಣ ಕೂಡ ಫೋನ್​ ಇಲ್ಲದೆ ಇರುವುದಿಲ್ಲ. ಹೌದು, ಅದರಲ್ಲೂ ಮಕ್ಕಳು ಫೋನ್​ ಇಲ್ಲದೆ ಊಟ ಕೂಡ ಮಾಡುವುದಿಲ್ಲ. ಅದರಂತೆ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ(Nelamangala) ತಾಲೂಕಿನ ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿಫೋನ್ ಬಳಸದಂತೆ ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಫೋನ್ ಬಳಸದಂತೆ ಬುದ್ಧಿವಾದ ಹೇಳಿದ್ದಕ್ಕೆ ಪ್ರಾಣ ಕಳೆದುಕೊಂಡ ಯುವತಿ
ಮೃತ ಯುವತಿ
ಬಿ ಮೂರ್ತಿ, ನೆಲಮಂಗಲ
| Updated By: ಕಿರಣ್ ಹನುಮಂತ್​ ಮಾದಾರ್|

Updated on:May 07, 2024 | 4:05 PM

Share

ಬೆಂಗಳೂರು ಗ್ರಾಮಾಂತರ, ಮೇ.07: ಫೋನ್ ಬಳಸದಂತೆ ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ(Nelamangala) ತಾಲೂಕಿನ ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಲಿಖಿತಾ(18) ನೇಣಿಗೆ ಶರಣಾದ ವಿದ್ಯಾರ್ಥಿ. ಸುಧಾ ಮತ್ತು ನಾರಾಯಣ ದಂಪತಿಯ ಪುತ್ರಿಯಾದ ಮೃತ ಲಿಖಿತಾ, ಪ್ಯಾರಾಮೆಡಿಕಲ್‌ ವ್ಯಾಸಂಗ ಮಾಡುತ್ತಿದ್ದರು.

ಪ್ಯಾನ್ ಗೆ ಸೀರೆ ಬಳಸಿ ನೇಣುಬಿಗಿದು ಕೊಂಡು ಆತ್ಮಹತ್ಯೆ

ಹೆತ್ತವರನ್ನ ಸಾಕುವ ಕನಸು ಕಂಡಿದ್ದ ಸುಧಾ ಹಾಗೂ ನಾರಾಯಣ ಅವರ ಮುದ್ದಿನ ಮಗಳು ಲಿಖಿತಾ ಒಳ್ಳೆಯ ವಿದ್ಯಾಬ್ಯಾಸ ಮಾಡುತ್ತಿದ್ದಳು. ಓದಿನಲ್ಲಿಯೂ ಮುಂದೆ ಇದ್ದ ಲಿಖಿತಾ, ಇತ್ತೀಚಿಗೆ ಫೋನಿನ ಗೀಳು ಹತ್ತಿಸಿಕೊಂಡಿದ್ದಳಂತೆ. ಯಾವಾಗಲೂ ಫೋನಿನಲ್ಲಿ ಮಾತನಾಡಿತ್ತಿದ್ದ ಆಕೆ, ಚಾಟಿಂಗ್, ಸ್ನ್ಯಾಪ್, ಇನ್ಸ್ಟಾ, ಫೇಸ್‌ಬುಕ್ ಎಂದು ಫೋನ್‌‌ನಲ್ಲಿ ಬ್ಯುಸಿ ಇರುತ್ತಿದ್ದಳು. ಇದನ್ನ ಗಮನಿಸಿದ್ದ ಲಿಖಿತಾ ತಂದೆ ನಾರಯಣ್ ಬೆಳಿಗ್ಗೆ ಬೈದು ಬುದ್ದಿ ಹೇಳಿದ್ದಾರೆ.

ಇದನ್ನೂ ಓದಿ:ದಾವಣಗೆರೆ: ಪತ್ನಿ ಕೊಂದು ಆತ್ಮಹತ್ಯೆ ಕಥೆ ಕಟ್ಟಿದ ಪತಿ; ವಿಷಯ ತಿಳಿದ ಮಗನಿಂದ ತಂದೆಯ ಬರ್ಬರ ಹತ್ಯೆ

ಈ ಹಿನ್ನಲೆ ಯುವತಿ ರೂಂ ಸೇರಿದ್ದರು. ಬಳಿಕ ಎರಡು ಗಂಟೆ ನಂತರ ರೂಂ ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಪ್ಯಾನ್​ಗೆ ಸೀರೆ ಬಳಸಿ ನೇಣುಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಪತ್ತೆ ಹಚ್ಚಲು ತನಿಖೆ ಕೈಗೊಂಡಿದ್ದಾರೆ. ಅದೇನೆ ಆಗಲಿ ಓದಿ ಮನೆಗೆ ಜ್ಯೋತಿ ಆಗಬೇಕಿದ್ದ ಯುವತಿ, ಆತ್ಮಹತ್ಯೆಗೆ ಶರಣಾಗಿದ್ದು ದುರಾದೃಷ್ವವೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:04 pm, Tue, 7 May 24

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ