ಫೋನ್ ಬಳಸದಂತೆ ಬುದ್ಧಿವಾದ ಹೇಳಿದ್ದಕ್ಕೆ ಪ್ರಾಣ ಕಳೆದುಕೊಂಡ ಯುವತಿ

ಇತ್ತೀಚೆಗೆ ಎಷ್ಟರ ಮಟ್ಟಿಗೆ ನಮ್ಮ ಸಮಾಜ ಮೊಬೈಲ್​ನಲ್ಲಿ ಮುಳಗಿಬಿಟ್ಟಿದೆ ಅಂದರೆ, ಒಂದು ಕ್ಷಣ ಕೂಡ ಫೋನ್​ ಇಲ್ಲದೆ ಇರುವುದಿಲ್ಲ. ಹೌದು, ಅದರಲ್ಲೂ ಮಕ್ಕಳು ಫೋನ್​ ಇಲ್ಲದೆ ಊಟ ಕೂಡ ಮಾಡುವುದಿಲ್ಲ. ಅದರಂತೆ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ(Nelamangala) ತಾಲೂಕಿನ ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿಫೋನ್ ಬಳಸದಂತೆ ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಫೋನ್ ಬಳಸದಂತೆ ಬುದ್ಧಿವಾದ ಹೇಳಿದ್ದಕ್ಕೆ ಪ್ರಾಣ ಕಳೆದುಕೊಂಡ ಯುವತಿ
ಮೃತ ಯುವತಿ
Edited By: ಕಿರಣ್ ಹನುಮಂತ್​ ಮಾದಾರ್

Updated on: May 07, 2024 | 4:05 PM

ಬೆಂಗಳೂರು ಗ್ರಾಮಾಂತರ, ಮೇ.07: ಫೋನ್ ಬಳಸದಂತೆ ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ(Nelamangala) ತಾಲೂಕಿನ ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಲಿಖಿತಾ(18) ನೇಣಿಗೆ ಶರಣಾದ ವಿದ್ಯಾರ್ಥಿ. ಸುಧಾ ಮತ್ತು ನಾರಾಯಣ ದಂಪತಿಯ ಪುತ್ರಿಯಾದ ಮೃತ ಲಿಖಿತಾ, ಪ್ಯಾರಾಮೆಡಿಕಲ್‌ ವ್ಯಾಸಂಗ ಮಾಡುತ್ತಿದ್ದರು.

ಪ್ಯಾನ್ ಗೆ ಸೀರೆ ಬಳಸಿ ನೇಣುಬಿಗಿದು ಕೊಂಡು ಆತ್ಮಹತ್ಯೆ

ಹೆತ್ತವರನ್ನ ಸಾಕುವ ಕನಸು ಕಂಡಿದ್ದ ಸುಧಾ ಹಾಗೂ ನಾರಾಯಣ ಅವರ ಮುದ್ದಿನ ಮಗಳು ಲಿಖಿತಾ ಒಳ್ಳೆಯ ವಿದ್ಯಾಬ್ಯಾಸ ಮಾಡುತ್ತಿದ್ದಳು. ಓದಿನಲ್ಲಿಯೂ ಮುಂದೆ ಇದ್ದ ಲಿಖಿತಾ, ಇತ್ತೀಚಿಗೆ ಫೋನಿನ ಗೀಳು ಹತ್ತಿಸಿಕೊಂಡಿದ್ದಳಂತೆ. ಯಾವಾಗಲೂ ಫೋನಿನಲ್ಲಿ ಮಾತನಾಡಿತ್ತಿದ್ದ ಆಕೆ, ಚಾಟಿಂಗ್, ಸ್ನ್ಯಾಪ್, ಇನ್ಸ್ಟಾ, ಫೇಸ್‌ಬುಕ್ ಎಂದು ಫೋನ್‌‌ನಲ್ಲಿ ಬ್ಯುಸಿ ಇರುತ್ತಿದ್ದಳು. ಇದನ್ನ ಗಮನಿಸಿದ್ದ ಲಿಖಿತಾ ತಂದೆ ನಾರಯಣ್ ಬೆಳಿಗ್ಗೆ ಬೈದು ಬುದ್ದಿ ಹೇಳಿದ್ದಾರೆ.

ಇದನ್ನೂ ಓದಿ:ದಾವಣಗೆರೆ: ಪತ್ನಿ ಕೊಂದು ಆತ್ಮಹತ್ಯೆ ಕಥೆ ಕಟ್ಟಿದ ಪತಿ; ವಿಷಯ ತಿಳಿದ ಮಗನಿಂದ ತಂದೆಯ ಬರ್ಬರ ಹತ್ಯೆ

ಈ ಹಿನ್ನಲೆ ಯುವತಿ ರೂಂ ಸೇರಿದ್ದರು. ಬಳಿಕ ಎರಡು ಗಂಟೆ ನಂತರ ರೂಂ ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಪ್ಯಾನ್​ಗೆ ಸೀರೆ ಬಳಸಿ ನೇಣುಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಪತ್ತೆ ಹಚ್ಚಲು ತನಿಖೆ ಕೈಗೊಂಡಿದ್ದಾರೆ. ಅದೇನೆ ಆಗಲಿ ಓದಿ ಮನೆಗೆ ಜ್ಯೋತಿ ಆಗಬೇಕಿದ್ದ ಯುವತಿ, ಆತ್ಮಹತ್ಯೆಗೆ ಶರಣಾಗಿದ್ದು ದುರಾದೃಷ್ವವೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:04 pm, Tue, 7 May 24

ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
Follow Us