AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಗ್ರಾಮಾಂತರ: ಅತ್ತಿಗೆ ಕಿರುಕುಳಕ್ಕೆ ಬೇಸತ್ತ ಮೈದುನ ನೇಣುಬಿಗಿದುಕೊಂಡು ಆತ್ಮಹತ್ಯೆ

ನೆಲಮಂಗಲದ ಅರಿಶಿನಕುಂಟೆಯಲ್ಲಿ(Arasinakunte) ಅತ್ತಿಗೆಯ ಕಿರುಕುಳಕ್ಕೆ ಬೇಸತ್ತು ಮನೆಯ ಕೊಠಡಿಯಲ್ಲಿ ನೇಣುಬಿಗಿದುಕೊಂಡು ಮೈದುನ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸಾವಿಗೆ ಕಾರಣರಾದ ಭಾಗ್ಯಮ್ಮ ಹಾಗೂ ದಿಲೀಪ್ ಎಂಬುವವರ ಮೇಲೆ ದೂರು ದಾಖಲಾಗಿದ್ದು, ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರು ಗ್ರಾಮಾಂತರ: ಅತ್ತಿಗೆ ಕಿರುಕುಳಕ್ಕೆ ಬೇಸತ್ತ ಮೈದುನ ನೇಣುಬಿಗಿದುಕೊಂಡು ಆತ್ಮಹತ್ಯೆ
ಮೃತ ರ್ದುದೈವಿ
ಬಿ ಮೂರ್ತಿ, ನೆಲಮಂಗಲ
| Edited By: |

Updated on:Apr 18, 2024 | 5:18 PM

Share

ಬೆಂಗಳೂರು ಗ್ರಾಮಾಂತರ, ಏ.18: ಅತ್ತಿಗೆಯ ಕಿರುಕುಳಕ್ಕೆ ಬೇಸತ್ತು ಮನೆಯ ಕೊಠಡಿಯಲ್ಲಿ ನೇಣುಬಿಗಿದುಕೊಂಡು ಮೈದುನ ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಲಮಂಗಲದ ಅರಿಶಿನಕುಂಟೆಯಲ್ಲಿ(Arasinakunte) ನಡೆದಿದೆ. ನಾಗರಾಜು(35) ಮೃತ ರ್ದುದೈವಿ. ಇನ್ನು ಘಟನೆ ಕುರಿತು ಸೊಸೆ ಭಾಗ್ಯಮ್ಮ ವಿರುದ್ಧ ಮೃತನ ತಂದೆ-ತಾಯಿ ನೆಲಮಂಗಲ ಟೌನ್ ಪೊಲೀಸ್‌ ಠಾಣೆಗೆ ಕಿರುಕುಳದ ದೂರು ನೀಡಿದ್ದಾರೆ.

ಇನ್ನು 2 ವರ್ಷದ ಹಿಂದೆ ಅರಿಶಿನಕುಂಟೆಯಲ್ಲಿ ಮನೆ ಕಟ್ಟಿಸುವಾಗ ಮೇಸ್ತ್ರಿಯಾಗಿ ಬಂದಿದ್ದ ದಿಲೀಪ್​ ಜೊತೆ ಸಲುಗೆಯಿಂದ ಇದ್ದ ಅತ್ತಿಗೆಯನ್ನ ಮೃತ ನಾಗರಾಜ್ ಪ್ರಶ್ನೆ ಮಾಡಿದ್ದ. ಈ ವಿಷಯವಾಗಿ ಮನೆ ಬಿಟ್ಟು ಹೋಗುವಂತೆ ದಂಡ ಪಿಂಡ ಎಂದು ಭಾಗ್ಯಮ್ಮ ಹೀಯಾಳಿಸಿದ್ದಳು. ಇದರಿಂದ ಮನನೊಂದ ನಾಗರಾಜು, ವೇಲ್ ಬಳಸಿ ರೂಂನ ಪ್ಯಾನ್​ಗೆ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾವಿಗೆ ಕಾರಣರಾದ ಭಾಗ್ಯಮ್ಮ ಹಾಗೂ ದಿಲೀಪ್ ಮೇಲೆ ದೂರು ದಾಖಲು ಮಾಡಿದ್ದು, ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

ಇದನ್ನೂ ಓದಿ:ಶಿವಮೊಗ್ಗ: ಮಕ್ಕಳಾಗಿಲ್ಲ ಎಂದು ಕಿರುಕುಳ; ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣು

ಕರಡಿ ದಾಳಿಗೊಳಗಾಗಿದ್ದ ವೃದ್ಧ ಚಿಕಿತ್ಸೆ ಫಲಿಸದೆ ಸಾವು

ಕೊಪ್ಪಳ: ಕೊಪ್ಪಳದಲ್ಲಿ ಕರಡಿ ದಾಳಿಗೊಳಗಾಗಿದ್ದ ವೃದ್ಧ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ನಡೆದಿದೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಚೆನ್ನಪ್ಪ ಮಡಿವಾಳರ್(74) ಕೊನೆಯುಸಿರೆಳೆದಿದ್ದಾರೆ. ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ರಾಂಪುರದಲ್ಲಿ ಕರಡಿ ದಾಳಿ ಮಾಡಿತ್ತು. ಗ್ರಾಮದ ಆಂಜನೇಯ ದೇವಸ್ಥಾನಕ್ಕೆ ನುಗ್ಗಿದ್ದ ಕರಡಿ ಸೆರೆಹಿಡಿದಿದ್ದರು. ಈ ಹಿಂದೆ ತಪ್ಪಿಸಿಕೊಂಡು ಬಂದಿದ್ದ ಕರಡಿ ವೃದ್ಧ ಚೆನ್ನಪ್ಪ ಮೇಲೆ ದಾಳಿ ಮಾಡಿತ್ತು. ಗಾಯಾಳು ಚೆನ್ನಪ್ಪ ಮಡಿವಾಳರ್​ರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು.ಇಂದು ಚಿಕಿತ್ಸೆ ಫಲಿಸದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:25 pm, Thu, 18 April 24

Follow Us
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?