AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದಿಂದ ಪರಿಹಾರವಾಗಿ ಬಂದ ಕೋಟಿ ಕೋಟಿ ಹಣಕ್ಕೆ ಗಲಾಟೆ; ಪತ್ನಿಯನ್ನ ಬರ್ಬರವಾಗಿ ಹತ್ಯೆಗೈದ ಪತಿ

ಆ ಸುಂದರ ಕುಟುಂಬ ಕಳೆದ ಹದಿನೇಳು ವರ್ಷದಿಂದ ಸುಖವಾಗಿ ಬಾಳುತ್ತಿದ್ದರು, ಸುಖ ಸಂಸಾರಕ್ಕೆ ಸಾಕ್ಷಿಯಾಗಿ ಮೂರು ಮಕ್ಕಳು ಕೂಡ ಇದ್ದರು. ಬಡತನದಲ್ಲಿದ್ದ ಕುಟುಂಬಕ್ಕೆ ಬಂದ ಕೋಟಿ ಕೋಟಿ ಹಣವೇ ಕುಟುಂಬ ಕಲಹಕ್ಕೆ ಕಾರಣವಾಗಿ, ಮನೆಯ ಯಜಮಾನಿಯನ್ನೆ ಗಂಡ ಬರ್ಬರವಾಗಿ ಕೊಂದು ನೀರಿನ ಸಂಪಿನಲ್ಲಿ ಹಾಕಿದ್ದಾನೆ.

ಸರ್ಕಾರದಿಂದ ಪರಿಹಾರವಾಗಿ ಬಂದ ಕೋಟಿ ಕೋಟಿ ಹಣಕ್ಕೆ ಗಲಾಟೆ; ಪತ್ನಿಯನ್ನ ಬರ್ಬರವಾಗಿ ಹತ್ಯೆಗೈದ ಪತಿ
ಹಣಕ್ಕೆ ಗಲಾಟೆ, ಪತ್ನಿಯನ್ನ ಬರ್ಬರವಾಗಿ ಹತ್ಯೆಗೈದ ಪತಿ
ಬಿ ಮೂರ್ತಿ, ನೆಲಮಂಗಲ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Apr 30, 2024 | 9:03 PM

Share

ಬೆಂಗಳೂರು ಗ್ರಾಮಾಂತರ, ಏ.30: ಬಡತನದಲ್ಲಿದ್ದ ಕುಟುಂಬಕ್ಕೆ ಬಂದ ಕೋಟ್ಯಾಂತರ ರೂಪಾಯಿ ಹಣವೇ ಕುಟುಂಬ ಕಲಹಕ್ಕೆ ಕಾರಣವಾಗಿ, ಮನೆಯ ಯಜಮಾನಿಯನ್ನ ಗಂಡ ಶ್ರೀನಿವಾಸ್ ಎಂಬಾತ ಬರ್ಬರವಾಗಿ ಕೊಂದು ನೀರಿನ ಸಂಪಿನಲ್ಲಿ ಹಾಕಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ(Nelamangala) ತಾಲ್ಲೂಕಿನ ಗೊಟ್ಟಿಗೆರೆ ಗ್ರಾಮದಲ್ಲಿ ನಡೆದಿದೆ. ಜಯಲಕ್ಷ್ಮಿ (36) ಮೃತ ಮಹಿಳೆ.

ಜಮೀನು ಸ್ವಾಧೀನ! ಸರ್ಕಾರದಿಂದ ಪರಿಹಾರವಾಗಿ ಬಂತು ಕೋಟಿ ಕೋಟಿ ಹಣ

ಹೌದು, ದಾಬಸ್‌‌ಪೇಟೆ ಕೈಗಾರಿಕಾ ಪ್ರದೇಶದಲ್ಲಿ ಈ ಕುಟುಂಬಕ್ಕೆ ಸೇರಿದ್ದ ಭೂಮಿ ಕೈಗಾರಿಕಾ ಪ್ರದೇಶಕ್ಕೆ ಭೂ ಸ್ವಾಧೀನವಾಗಿತ್ತು, ಇದರಿಂದ ಎರಡು ಕೋಟಿಗೂ ಅಧಿಕ ಹಣ ಬಂದಿತ್ತು. ಆದ್ರೆ, ಗಂಡ ಕುಡುಕನಾಗಿದ್ದ, ಎಲ್ಲಿ ಹಣವನ್ನೆಲ್ಲ ಖಾಲಿ ಮಾಡುತ್ತಾನೆ ಎಂದು ಮೃತ ಹೆಂಡತಿ ಜಯಲಕ್ಷ್ಮಿ ತನ್ನ ತವರೂರಾದ ರಾಮನಗರಕ್ಕೆ ಹಣ ಕಳುಹಿಸಿ, ತನ್ನ ಮಕ್ಕಳ ಭವಿಷ್ಯಕ್ಕಾಗಿ ಹಣ ಎತ್ತಿಡಲು ಹೇಳಿದ್ದಳಂತೆ. ಇದರಿಂದ ಮನನೊಂದ ಶ್ರೀನಿವಾಸ್ ನೆನ್ನೆ ಹೆಂಡತಿಯೊಂದಿಗೆ ಜಗಳ ತೆಗೆದು,ಸಂಜೆ ವೇಳೆಗೆ ಆಕೆಯ ತಲೆಗೆ ಹಿಂಬದಿಯಿಂದ ಬಲವಾಗಿ ಮಚ್ಚಿನಿಂದ ಹೊಡೆದು ಬಳಿಕ ಮನೆಯ ಸಂಪಿನಲ್ಲಿ ಹಾಕಿದ್ದಾನೆ.

ಇದನ್ನೂ ಓದಿ:ಸಿಐಡಿ ಕಸ್ಟಡಿ ಅಂತ್ಯ, ನೇಹಾ ಕೊಲೆಗಡುಕನಿಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

ಮಕ್ಕಳು ಬಂದು ಅಮ್ಮ ಎಲ್ಲಿ ಅಂದಾಗ ತನಗೆ ಗೊತ್ತಿಲ್ಲ ಎಂದಿದ್ದನಂತೆ. ತಡರಾತ್ರಿ ಮನೆಯ ಪಕ್ಕದಲ್ಲೇ ಗುಂಡಿ ತೆಗೆಯುತ್ತಿದ್ದದ್ದನ್ನು ಗಮನಿಸಿದ್ದ ಮಕ್ಕಳು, ಜೋರು ಮಾಡಿ ಕೇಳಿದಾಗ ತೆಂಗಿನಕಾಯಿ ಗಿಡಗಳನ್ನ ನೆಡಲು ಎಂದಿದ್ದಾನೆ. ಈ ನಡುವೆ ಸಂಪಿನ ಒಳಗೆ ನಾಯಿ ಬಿದ್ದಿದೆ. ಅದನ್ನ ತೆಗೆಯಬೇಡಿ ಎಂದಿದ್ದನ್ನು ಅನುಮಾನಿಸಿದ ಮಕ್ಕಳು, ಬಾಗಿಲು ತೆರೆದು ನೋಡಿದಾಗ ತಾಯಿ ಶವ ನೀರಿನಲ್ಲಿ ತೇಲುತ್ತಿತ್ತು. ಸದ್ಯ ಘಟನೆಗೆ ಸಂಬಂಧಿಸಿದಂತೆ ಡಾಬಸ್‌ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿ ಶ್ರೀನಿವಾಸ್‌ನನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.‌

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:01 pm, Tue, 30 April 24

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?