AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ದಿಲ್ಲದೆ 2ನೇ ಮದುವೆ: ತಾಳಿ ಕಟ್ಟೋ ಟೈಮಿಗೆ ಮೊದಲ ಹೆಂಡ್ತಿ ಎಂಟ್ರಿ, ಮುಂದೇನಾಯ್ತು?

ವಿವಾಹಿತ ಪುರುಷ ಅಥವಾ ಸ್ತ್ರೀ ಎರಡನೇ ಮದುವೆಯಾಗಬೇಕಾದರೆ, ಮೊದಲು ಸಂಗಾತಿಯು ಮರಣ ಹೊಂದಿರಬೇಕು. ಸಂಗಾತಿ ಮರಣ ಹೊಂದಿದ್ದರೆ ಮಾತ್ರ ಎರಡನೇ ಮದುವೆಯಾಗುವ ಅವಕಾಶವಿರುತ್ತದೆ. ಇನ್ನು ಪುರುಷ, ಎರಡನೇ ವಿವಾಹವಾಗಬೇಕಾದರೆ ಮೊದಲ ಕಾನೂನು ಪ್ರಕರವಾಗಿ ವಿಚ್ಛೇದನ ನೀಡೇಕು. ಆದ್ರೆ, ಇಲ್ಲೋರ್ವ ವ್ಯಕ್ತಿ, ಮೊದಲ ಪತ್ನಿಗೆ ವಿಚ್ಛೇದನ ನೀಡದೇ ಎರಡನೇ ಮದ್ವೆ ಮಾಡಿಕೊಳ್ಳಲು ಹೋಗಿ ಸಿಕ್ಕಿಬಿದ್ದಿದ್ದಾನೆ.

ಸದ್ದಿಲ್ಲದೆ 2ನೇ ಮದುವೆ: ತಾಳಿ ಕಟ್ಟೋ ಟೈಮಿಗೆ ಮೊದಲ ಹೆಂಡ್ತಿ ಎಂಟ್ರಿ, ಮುಂದೇನಾಯ್ತು?
ಮೊದಲ ಮದ್ವೆಯ ಫೋಟೋ
ನವೀನ್ ಕುಮಾರ್ ಟಿ
| Edited By: |

Updated on: Mar 25, 2026 | 6:43 PM

Share

ಬೆಂಗಳೂರು (ಮಾರ್ಚ್ 25): ಮೊದಲ ಹೆಂಡ್ತಿ ಬದುಕಿರುವಾಗಲೇ, ವಿಚ್ಛೇದನವನ್ನೂ ಕೊಡದೆ ಎರಡನೇ ಮದುವೆಯಾಗಲು (Second Marriage) ಹೋಗಿದ್ದ ಪತಿರಾಯನಿಗೆ ಮೊದಲ ಪತ್ನಿ ಮಂಟಪದಲ್ಲೇ ಶಾಕ್ ಕೊಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ (Kodagurki Village) ಮುನೇಶ್ವರ ದೇಗುಲದ ಬಳಿ ಸುರೇಶ್ ಎಂಬಾತ ಕದ್ದು ಮುಚ್ಚಿ ಎರಡನೇ ಮದುವೆಯಾಗುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾನೆ. ಹೌದು…ವಿಚ್ಚೇದನ ನೀಡದೆ ಮತ್ತೊಂದು ವಿವಾಹವಾಗುತ್ತಿರುವ ವಿಚಾರ ತಿಳಿದು ಮೊದಲ ಪತ್ನಿ ಪೊಲೀಸರ ಜೊತೆಯಲ್ಲೇ ಆಗಮಿಸಿ ಮದುವೆ ನಿಲ್ಲಿಸಿದ್ದಾಳೆ.

19 ವರ್ಷಗಳ ಹಿಂದೆಯೇ ಚಿಕ್ಕಬಳ್ಳಾಪುರ ಮಂಚೇನಹಳ್ಳಿ ಗ್ರಾಮದ ನಾಗಮಣಿ ಎಂಬಾಕೆಯನ್ನ ಆಂಧ್ರ ಮೂಲದ ಕದರಿ ಎಂಬ ಗ್ರಾಮಕ್ಕೆ ಸೇರಿದ್ದ ಸುರೇಶ್ ಮದುವೆಯಾಗಿದ್ದ. ಈ ದಂಪತಿ ಇಬ್ಬರು ಮಕ್ಕಳು ಕೂಡ ಇದ್ದಾರಂತೆ. ಮದುವೆಯಾಗಿ ಹತ್ತಾರು ವರ್ಷ ಸಂಸಾರ ಮಾಡಿದ ಸುರೇಶ್​ ಮೊದಲ ಪತ್ನಿಯನ್ನ ಬಿಟ್ಟು 2ನೇ ಮದುವೆಯಾಗಲು ಮುಂದಾಗಿದ್ದ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಮುನೇಶ್ವರ ದೇಗುಲದ ಬಳಿ ಸುರೇಶ್​ ಎಂಬಾತನ ಎರಡನೇ ಮದುವೆ ಕೂಡ ನಡೆದಿತ್ತು. ಇನ್ನೇನು ತಾಳಿ ಕಟ್ಟೋ ಸಮಯಕ್ಕೆ ಸರಿಯಾಗಿ ಬಂದ ನಾಗಮಣಿ ಮದುವೆ ನಿಲ್ಲಿಸಿದ್ದಾರೆ.

ಇದನ್ನೂ ನೋಡಿ: ಪ್ರೇಯಸಿ ಮದ್ವೆ ಮಂಟಪಕ್ಕೆ ಬರುವಷ್ಟರಲ್ಲೇ ಬೇರೊಂದು ಯುವತಿಗೆ ತಾಳಿಕಟ್ಟಿದ್ದ ಪ್ರಿಯಕರ ಅರೆಸ್ಟ್

ಇನ್ನೂ ಪೊಲೀಸರ ಸಮೇತ ಮೊದಲ ಪತ್ನಿ ಎಂಟ್ರಿಕೊಡುತ್ತಿದ್ದಂತೆಯೇ ಗಂಡ ಕಕ್ಕಾಬಿಕ್ಕಿಯಾಗಿದ್ದಾರೆ. ಮೊದಲನೆ ಪತ್ನಿಗೆ ವಿಚ್ಚೇಧನ ನೀಡದೆ ಎರಡನೆ ಮದುವೆಯಾಗುವುದು ತಪ್ಪು ಎಂದು ಬುದ್ದಿವಾದ ಹೇಳಿದ್ದು ಮದುವೆಯನ್ನ ನಿಲ್ಲಿಸಿದ್ದು, ಸಿಂಗಾರಗೊಂಡು ಮದುವೆಗೆ ಸಿದ್ದವಾಗಿ ಕುಳಿತಿದ್ದ ಸುರೇಶ್ ನನ್ನ ಪೊಲೀಸರ ವಶಕ್ಕೆ ಪಡೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ