AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ದಿಲ್ಲದೆ 2ನೇ ಮದುವೆ: ತಾಳಿ ಕಟ್ಟೋ ಟೈಮಿಗೆ ಮೊದಲ ಹೆಂಡ್ತಿ ಎಂಟ್ರಿ, ಮುಂದೇನಾಯ್ತು?

ವಿವಾಹಿತ ಪುರುಷ ಅಥವಾ ಸ್ತ್ರೀ ಎರಡನೇ ಮದುವೆಯಾಗಬೇಕಾದರೆ, ಮೊದಲು ಸಂಗಾತಿಯು ಮರಣ ಹೊಂದಿರಬೇಕು. ಸಂಗಾತಿ ಮರಣ ಹೊಂದಿದ್ದರೆ ಮಾತ್ರ ಎರಡನೇ ಮದುವೆಯಾಗುವ ಅವಕಾಶವಿರುತ್ತದೆ. ಇನ್ನು ಪುರುಷ, ಎರಡನೇ ವಿವಾಹವಾಗಬೇಕಾದರೆ ಮೊದಲ ಕಾನೂನು ಪ್ರಕರವಾಗಿ ವಿಚ್ಛೇದನ ನೀಡೇಕು. ಆದ್ರೆ, ಇಲ್ಲೋರ್ವ ವ್ಯಕ್ತಿ, ಮೊದಲ ಪತ್ನಿಗೆ ವಿಚ್ಛೇದನ ನೀಡದೇ ಎರಡನೇ ಮದ್ವೆ ಮಾಡಿಕೊಳ್ಳಲು ಹೋಗಿ ಸಿಕ್ಕಿಬಿದ್ದಿದ್ದಾನೆ.

ಸದ್ದಿಲ್ಲದೆ 2ನೇ ಮದುವೆ: ತಾಳಿ ಕಟ್ಟೋ ಟೈಮಿಗೆ ಮೊದಲ ಹೆಂಡ್ತಿ ಎಂಟ್ರಿ, ಮುಂದೇನಾಯ್ತು?
ಮೊದಲ ಮದ್ವೆಯ ಫೋಟೋ
ನವೀನ್ ಕುಮಾರ್ ಟಿ
| Edited By: |

Updated on: Mar 25, 2026 | 6:43 PM

Share

ಬೆಂಗಳೂರು (ಮಾರ್ಚ್ 25): ಮೊದಲ ಹೆಂಡ್ತಿ ಬದುಕಿರುವಾಗಲೇ, ವಿಚ್ಛೇದನವನ್ನೂ ಕೊಡದೆ ಎರಡನೇ ಮದುವೆಯಾಗಲು (Second Marriage) ಹೋಗಿದ್ದ ಪತಿರಾಯನಿಗೆ ಮೊದಲ ಪತ್ನಿ ಮಂಟಪದಲ್ಲೇ ಶಾಕ್ ಕೊಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ (Kodagurki Village) ಮುನೇಶ್ವರ ದೇಗುಲದ ಬಳಿ ಸುರೇಶ್ ಎಂಬಾತ ಕದ್ದು ಮುಚ್ಚಿ ಎರಡನೇ ಮದುವೆಯಾಗುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾನೆ. ಹೌದು…ವಿಚ್ಚೇದನ ನೀಡದೆ ಮತ್ತೊಂದು ವಿವಾಹವಾಗುತ್ತಿರುವ ವಿಚಾರ ತಿಳಿದು ಮೊದಲ ಪತ್ನಿ ಪೊಲೀಸರ ಜೊತೆಯಲ್ಲೇ ಆಗಮಿಸಿ ಮದುವೆ ನಿಲ್ಲಿಸಿದ್ದಾಳೆ.

19 ವರ್ಷಗಳ ಹಿಂದೆಯೇ ಚಿಕ್ಕಬಳ್ಳಾಪುರ ಮಂಚೇನಹಳ್ಳಿ ಗ್ರಾಮದ ನಾಗಮಣಿ ಎಂಬಾಕೆಯನ್ನ ಆಂಧ್ರ ಮೂಲದ ಕದರಿ ಎಂಬ ಗ್ರಾಮಕ್ಕೆ ಸೇರಿದ್ದ ಸುರೇಶ್ ಮದುವೆಯಾಗಿದ್ದ. ಈ ದಂಪತಿ ಇಬ್ಬರು ಮಕ್ಕಳು ಕೂಡ ಇದ್ದಾರಂತೆ. ಮದುವೆಯಾಗಿ ಹತ್ತಾರು ವರ್ಷ ಸಂಸಾರ ಮಾಡಿದ ಸುರೇಶ್​ ಮೊದಲ ಪತ್ನಿಯನ್ನ ಬಿಟ್ಟು 2ನೇ ಮದುವೆಯಾಗಲು ಮುಂದಾಗಿದ್ದ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಮುನೇಶ್ವರ ದೇಗುಲದ ಬಳಿ ಸುರೇಶ್​ ಎಂಬಾತನ ಎರಡನೇ ಮದುವೆ ಕೂಡ ನಡೆದಿತ್ತು. ಇನ್ನೇನು ತಾಳಿ ಕಟ್ಟೋ ಸಮಯಕ್ಕೆ ಸರಿಯಾಗಿ ಬಂದ ನಾಗಮಣಿ ಮದುವೆ ನಿಲ್ಲಿಸಿದ್ದಾರೆ.

ಇದನ್ನೂ ನೋಡಿ: ಪ್ರೇಯಸಿ ಮದ್ವೆ ಮಂಟಪಕ್ಕೆ ಬರುವಷ್ಟರಲ್ಲೇ ಬೇರೊಂದು ಯುವತಿಗೆ ತಾಳಿಕಟ್ಟಿದ್ದ ಪ್ರಿಯಕರ ಅರೆಸ್ಟ್

ಇನ್ನೂ ಪೊಲೀಸರ ಸಮೇತ ಮೊದಲ ಪತ್ನಿ ಎಂಟ್ರಿಕೊಡುತ್ತಿದ್ದಂತೆಯೇ ಗಂಡ ಕಕ್ಕಾಬಿಕ್ಕಿಯಾಗಿದ್ದಾರೆ. ಮೊದಲನೆ ಪತ್ನಿಗೆ ವಿಚ್ಚೇಧನ ನೀಡದೆ ಎರಡನೆ ಮದುವೆಯಾಗುವುದು ತಪ್ಪು ಎಂದು ಬುದ್ದಿವಾದ ಹೇಳಿದ್ದು ಮದುವೆಯನ್ನ ನಿಲ್ಲಿಸಿದ್ದು, ಸಿಂಗಾರಗೊಂಡು ಮದುವೆಗೆ ಸಿದ್ದವಾಗಿ ಕುಳಿತಿದ್ದ ಸುರೇಶ್ ನನ್ನ ಪೊಲೀಸರ ವಶಕ್ಕೆ ಪಡೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್‌ನ ಬುಶೆಹ್ರ್ ಪರಮಾಣು ಸ್ಥಾವರದ ಮೇಲೆ ಕ್ಷಿಪಣಿ ದಾಳಿ
ಇರಾನ್‌ನ ಬುಶೆಹ್ರ್ ಪರಮಾಣು ಸ್ಥಾವರದ ಮೇಲೆ ಕ್ಷಿಪಣಿ ದಾಳಿ
ಕತೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಸ್ಪಷ್ಟನೆ: ನಟ ಹೇಳಿದ್ದೇನು?
ಕತೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಸ್ಪಷ್ಟನೆ: ನಟ ಹೇಳಿದ್ದೇನು?
Video: ಟೆಕ್ ಸ್ಯಾವಿ ಮಂಗನ ಸೆಲ್ಫೀ ಕ್ರೇಜ್! ವಿಡಿಯೋ ವೈರಲ್
Video: ಟೆಕ್ ಸ್ಯಾವಿ ಮಂಗನ ಸೆಲ್ಫೀ ಕ್ರೇಜ್! ವಿಡಿಯೋ ವೈರಲ್
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ