AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭರ್ಜರಿ ಬೇಟೆ: 30 ಕೋಟಿ ರೂ. ಮೌಲ್ಯದ ಕೊಕೇನ್ ಪತ್ತೆ

ಬೆಂಗಳೂರು, ( ಜುಲೈ 14): ವಿದೇಶದಿಂದ ಅಕ್ರಮವಾಗಿ ಕೋಟಿ ಕೋಟಿ ರೂಪಾಯಿ ಮೌಲ್ಯದ ಕೊಕೇನ್​ ಸಾಗಿಸುತ್ತಿದ್ದ ಸ್ಮಗ್ಲರ್​ನನ್ನು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಕೀನ್ಯಾ ಮೂಲದ ಒದಿಹಾಂಬೋ ಮಾರ್ಗನ್ ಬೈರನ್​ ಎನ್ನುವ ವ್ಯಕ್ತಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಡೆದು ಲಗೇಜ್ ಬ್ಯಾಗ್ ಪರಿಶೀಲನೆ ವೇಳೆ ಅಕ್ರಮವಾಗಿ ತಂದಿದ್ದ ಮೂರು ಕೆ.ಜಿ. ಕೊಕೇನ್ ಪತ್ತೆಯಾಗಿದೆ. ಬರೋಬ್ಬರಿ 30 ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯ ಇದಾಗಿದೆ. ಈ ಸ್ಮಗ್ಲರ್ ದೋಹಾದಿಂದ ಬೆಂಗಳೂರಿಗೆ ಇಂಡಿಗೋ 6ಇ1302 ವಿಮಾನದಲ್ಲಿ […]

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭರ್ಜರಿ ಬೇಟೆ: 30 ಕೋಟಿ ರೂ. ಮೌಲ್ಯದ ಕೊಕೇನ್ ಪತ್ತೆ
ಬೆಂಗಳೂರು ವಿಮಾನ ನಿಲ್ದಾಣ
Follow us
ನವೀನ್ ಕುಮಾರ್ ಟಿ
| Updated By: ರಮೇಶ್ ಬಿ. ಜವಳಗೇರಾ

Updated on:Jul 14, 2024 | 4:01 PM

ಬೆಂಗಳೂರು, ( ಜುಲೈ 14): ವಿದೇಶದಿಂದ ಅಕ್ರಮವಾಗಿ ಕೋಟಿ ಕೋಟಿ ರೂಪಾಯಿ ಮೌಲ್ಯದ ಕೊಕೇನ್​ ಸಾಗಿಸುತ್ತಿದ್ದ ಸ್ಮಗ್ಲರ್​ನನ್ನು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಕೀನ್ಯಾ ಮೂಲದ ಒದಿಹಾಂಬೋ ಮಾರ್ಗನ್ ಬೈರನ್​ ಎನ್ನುವ ವ್ಯಕ್ತಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಡೆದು ಲಗೇಜ್ ಬ್ಯಾಗ್ ಪರಿಶೀಲನೆ ವೇಳೆ ಅಕ್ರಮವಾಗಿ ತಂದಿದ್ದ ಮೂರು ಕೆ.ಜಿ. ಕೊಕೇನ್ ಪತ್ತೆಯಾಗಿದೆ. ಬರೋಬ್ಬರಿ 30 ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯ ಇದಾಗಿದೆ.

ಈ ಸ್ಮಗ್ಲರ್ ದೋಹಾದಿಂದ ಬೆಂಗಳೂರಿಗೆ ಇಂಡಿಗೋ 6ಇ1302 ವಿಮಾನದಲ್ಲಿ ಬಂದಿದ್ದ. ಲಗೇಜ್ ಬ್ಯಾಗ್ ಚೆಕಿಂಗ್ ವೇಳೆ ಡಿ.ಆರ್.ಐ ತಂಡದ ಕಾರ್ಯಚರಣೆಯ ವೇಳೆ ಈ ಬಾರೀ ಮೌಲ್ಯದ ಕೊಕೇನ್ ಪತ್ತೆಯಾಗಿದೆ. ಕೊಕೇನ್ ಸಮೇತ ಆರೋಪಿಯನ್ನ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಇದನ್ನೂ ಒದಿ: ಶೇ.15ರಿಂದ 20ರಷ್ಟು KSRTC ಬಸ್​ ಟಿಕೆಟ್​​ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ -ಎಸ್.ಆರ್.ಶ್ರೀನಿವಾಸ್

ವಿಮಾನ ವಿಳಂಬ ಪ್ರಯಾಣಿಕರ ಪರದಾಟ

ನಿನ್ನೆ(ಜುಲೈ 13) ರಾತ್ರಿ ಬೆಂಗಳೂರಿಗೆ ಬರಬೇಕಿದ್ದ ವಿಮಾನ ವಿಳಂಬವಾಗಿದ್ದರಿಂದ ಪ್ರಯಾಣಿಕರು ಆಕ್ರೋಶಗೊಂಡಿದ್ದು, ಏರ್ ಇಂಡಿಯಾ ಎಕ್ಸಪ್ರೆಸ್ ಏರಲೈನ್ಸ್ ವಿರುದ್ಧ ಕಿಡಿಕಾರಿದ್ದಾರೆ. ಶನಿವಾರ ಸಂಜೆ 5:55ಕ್ಕೆ ಜೈಪುರದಿಂದ ಹೊರಟು 10:40 ಕ್ಕೆ ಬೆಂಗಳೂರು ತಲುಪಬೇಕಿದ್ದ ವಿಮಾನ ವಿಳಂಬವಾಗಿದೆ. ಬೆಂಗಳೂರು ಮೂಲದ ಒಟ್ಟು 40 ಪ್ರಯಾಣಿಕರು ಜೈಪುರದಲ್ಲಿ ವಿಮಾನ ಹತ್ತಿದ್ದಾರೆ. ಆದ್ರೆ, ಏರ್ ಇಂಡಿಯಾ ಎಕ್ಸ್​​ಪ್ರೆಸ್ ವಿಮಾನ ಟೇಕಾಫ್ ಆಗಿಲ್ಲ.ಇದರಿಂದ ಪ್ರಯಾಣಿಕರು ರಾತ್ರಿಯಲ್ಲ ಜೈಪುರ ವಿಮಾನ ನಿಲ್ದಾಣದಲ್ಲೇ ಕಾಲಕಳೆದಿದ್ದಾರೆ. ಕೊನೆಗೆ ಪ್ರಯಾಣಿಕರ ಆಕ್ರೋಶದ ಕಟ್ಟೆ ಹೊಡೆದಿದ್ದು, ಏರ್​ಲೈನ್ಸ್​ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ.

ಬಳಿಕ ಪ್ರಯಾಣಿಕರನ್ನು ಕೂಡಲೇ ಮುಂಬೈ ಏರ್ ಪೋರ್ಟ್ ತಲುಪಿಸಲಾಗಿದೆ. ಆದರೆ ಇದೀಗ ಏರ್​ಲೈನ್ಸ್ ಸಿಬ್ಬಂದಿ ಮಾತ್ರ ವಿಮಾನ ನಾಳೆ (ಜುಲೈ 15) ಬೆಳಗ್ಗೆ ವಿಮಾನ ಬರುತ್ತೆ ಎಂದು ಹೇಳಿದ್ದಾರೆ. ಇದರಿಂದ ಪ್ರಯಣಿಕರು ಮತ್ತಷ್ಟು ಆಕ್ರೋಶಗೊಂಡಿದ್ದಾರೆ. ನಾಳೆವರೆಗೂ ವಿಮಾನ ನಿಲ್ದಾಣದಲ್ಲೇ ಇದ್ದರೆ ಉದ್ಯೋಗ, ಶಾಲಾ-ಕಾಲೇಜು ಹೇಗೆ ಎಂದು ಗರಂ ಆಗಿದ್ದು, ಮುಂಬೈನಿಂದ ಬೆಂಗಳೂರಿಗೆ ಬೇರೆ ವಿಮಾನದ ವ್ಯವಸ್ಥೆ ಮಾಡುವಂತೆ ಪಟ್ಟು ಹಿಡಿದಿದ್ದಾರೆ. ಸಾವಿರಾರು ರುಪಾಯಿ ಹಣ ಕಟ್ಟಿಸಿಕೊಂಡರೂ ಸಮರ್ಪಕ ಸೇವೆ ಕೊಡುತ್ತಿಲ್ಲ ಎಂದು ಏರ್ ಇಂಡಿಯಾ ಎಕ್ಸ್​ಪ್ರೆಸ್ ಏರಲೈನ್ಸ್ ವಿರುದ್ಧ ಆರೋಪಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:41 pm, Sun, 14 July 24

ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ