ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭರ್ಜರಿ ಬೇಟೆ: 30 ಕೋಟಿ ರೂ. ಮೌಲ್ಯದ ಕೊಕೇನ್ ಪತ್ತೆ

ಬೆಂಗಳೂರು, ( ಜುಲೈ 14): ವಿದೇಶದಿಂದ ಅಕ್ರಮವಾಗಿ ಕೋಟಿ ಕೋಟಿ ರೂಪಾಯಿ ಮೌಲ್ಯದ ಕೊಕೇನ್​ ಸಾಗಿಸುತ್ತಿದ್ದ ಸ್ಮಗ್ಲರ್​ನನ್ನು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಕೀನ್ಯಾ ಮೂಲದ ಒದಿಹಾಂಬೋ ಮಾರ್ಗನ್ ಬೈರನ್​ ಎನ್ನುವ ವ್ಯಕ್ತಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಡೆದು ಲಗೇಜ್ ಬ್ಯಾಗ್ ಪರಿಶೀಲನೆ ವೇಳೆ ಅಕ್ರಮವಾಗಿ ತಂದಿದ್ದ ಮೂರು ಕೆ.ಜಿ. ಕೊಕೇನ್ ಪತ್ತೆಯಾಗಿದೆ. ಬರೋಬ್ಬರಿ 30 ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯ ಇದಾಗಿದೆ. ಈ ಸ್ಮಗ್ಲರ್ ದೋಹಾದಿಂದ ಬೆಂಗಳೂರಿಗೆ ಇಂಡಿಗೋ 6ಇ1302 ವಿಮಾನದಲ್ಲಿ […]

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭರ್ಜರಿ ಬೇಟೆ: 30 ಕೋಟಿ ರೂ. ಮೌಲ್ಯದ ಕೊಕೇನ್ ಪತ್ತೆ
ಬೆಂಗಳೂರು ವಿಮಾನ ನಿಲ್ದಾಣ
Edited By:

Updated on: Jul 14, 2024 | 4:01 PM

ಬೆಂಗಳೂರು, ( ಜುಲೈ 14): ವಿದೇಶದಿಂದ ಅಕ್ರಮವಾಗಿ ಕೋಟಿ ಕೋಟಿ ರೂಪಾಯಿ ಮೌಲ್ಯದ ಕೊಕೇನ್​ ಸಾಗಿಸುತ್ತಿದ್ದ ಸ್ಮಗ್ಲರ್​ನನ್ನು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಕೀನ್ಯಾ ಮೂಲದ ಒದಿಹಾಂಬೋ ಮಾರ್ಗನ್ ಬೈರನ್​ ಎನ್ನುವ ವ್ಯಕ್ತಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಡೆದು ಲಗೇಜ್ ಬ್ಯಾಗ್ ಪರಿಶೀಲನೆ ವೇಳೆ ಅಕ್ರಮವಾಗಿ ತಂದಿದ್ದ ಮೂರು ಕೆ.ಜಿ. ಕೊಕೇನ್ ಪತ್ತೆಯಾಗಿದೆ. ಬರೋಬ್ಬರಿ 30 ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯ ಇದಾಗಿದೆ.

ಈ ಸ್ಮಗ್ಲರ್ ದೋಹಾದಿಂದ ಬೆಂಗಳೂರಿಗೆ ಇಂಡಿಗೋ 6ಇ1302 ವಿಮಾನದಲ್ಲಿ ಬಂದಿದ್ದ. ಲಗೇಜ್ ಬ್ಯಾಗ್ ಚೆಕಿಂಗ್ ವೇಳೆ ಡಿ.ಆರ್.ಐ ತಂಡದ ಕಾರ್ಯಚರಣೆಯ ವೇಳೆ ಈ ಬಾರೀ ಮೌಲ್ಯದ ಕೊಕೇನ್ ಪತ್ತೆಯಾಗಿದೆ. ಕೊಕೇನ್ ಸಮೇತ ಆರೋಪಿಯನ್ನ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಇದನ್ನೂ ಒದಿ: ಶೇ.15ರಿಂದ 20ರಷ್ಟು KSRTC ಬಸ್​ ಟಿಕೆಟ್​​ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ -ಎಸ್.ಆರ್.ಶ್ರೀನಿವಾಸ್

ವಿಮಾನ ವಿಳಂಬ ಪ್ರಯಾಣಿಕರ ಪರದಾಟ

ನಿನ್ನೆ(ಜುಲೈ 13) ರಾತ್ರಿ ಬೆಂಗಳೂರಿಗೆ ಬರಬೇಕಿದ್ದ ವಿಮಾನ ವಿಳಂಬವಾಗಿದ್ದರಿಂದ ಪ್ರಯಾಣಿಕರು ಆಕ್ರೋಶಗೊಂಡಿದ್ದು, ಏರ್ ಇಂಡಿಯಾ ಎಕ್ಸಪ್ರೆಸ್ ಏರಲೈನ್ಸ್ ವಿರುದ್ಧ ಕಿಡಿಕಾರಿದ್ದಾರೆ. ಶನಿವಾರ ಸಂಜೆ 5:55ಕ್ಕೆ ಜೈಪುರದಿಂದ ಹೊರಟು 10:40 ಕ್ಕೆ ಬೆಂಗಳೂರು ತಲುಪಬೇಕಿದ್ದ ವಿಮಾನ ವಿಳಂಬವಾಗಿದೆ. ಬೆಂಗಳೂರು ಮೂಲದ ಒಟ್ಟು 40 ಪ್ರಯಾಣಿಕರು ಜೈಪುರದಲ್ಲಿ ವಿಮಾನ ಹತ್ತಿದ್ದಾರೆ. ಆದ್ರೆ, ಏರ್ ಇಂಡಿಯಾ ಎಕ್ಸ್​​ಪ್ರೆಸ್ ವಿಮಾನ ಟೇಕಾಫ್ ಆಗಿಲ್ಲ.ಇದರಿಂದ ಪ್ರಯಾಣಿಕರು ರಾತ್ರಿಯಲ್ಲ ಜೈಪುರ ವಿಮಾನ ನಿಲ್ದಾಣದಲ್ಲೇ ಕಾಲಕಳೆದಿದ್ದಾರೆ. ಕೊನೆಗೆ ಪ್ರಯಾಣಿಕರ ಆಕ್ರೋಶದ ಕಟ್ಟೆ ಹೊಡೆದಿದ್ದು, ಏರ್​ಲೈನ್ಸ್​ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ.

ಬಳಿಕ ಪ್ರಯಾಣಿಕರನ್ನು ಕೂಡಲೇ ಮುಂಬೈ ಏರ್ ಪೋರ್ಟ್ ತಲುಪಿಸಲಾಗಿದೆ. ಆದರೆ ಇದೀಗ ಏರ್​ಲೈನ್ಸ್ ಸಿಬ್ಬಂದಿ ಮಾತ್ರ ವಿಮಾನ ನಾಳೆ (ಜುಲೈ 15) ಬೆಳಗ್ಗೆ ವಿಮಾನ ಬರುತ್ತೆ ಎಂದು ಹೇಳಿದ್ದಾರೆ. ಇದರಿಂದ ಪ್ರಯಣಿಕರು ಮತ್ತಷ್ಟು ಆಕ್ರೋಶಗೊಂಡಿದ್ದಾರೆ. ನಾಳೆವರೆಗೂ ವಿಮಾನ ನಿಲ್ದಾಣದಲ್ಲೇ ಇದ್ದರೆ ಉದ್ಯೋಗ, ಶಾಲಾ-ಕಾಲೇಜು ಹೇಗೆ ಎಂದು ಗರಂ ಆಗಿದ್ದು, ಮುಂಬೈನಿಂದ ಬೆಂಗಳೂರಿಗೆ ಬೇರೆ ವಿಮಾನದ ವ್ಯವಸ್ಥೆ ಮಾಡುವಂತೆ ಪಟ್ಟು ಹಿಡಿದಿದ್ದಾರೆ. ಸಾವಿರಾರು ರುಪಾಯಿ ಹಣ ಕಟ್ಟಿಸಿಕೊಂಡರೂ ಸಮರ್ಪಕ ಸೇವೆ ಕೊಡುತ್ತಿಲ್ಲ ಎಂದು ಏರ್ ಇಂಡಿಯಾ ಎಕ್ಸ್​ಪ್ರೆಸ್ ಏರಲೈನ್ಸ್ ವಿರುದ್ಧ ಆರೋಪಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:41 pm, Sun, 14 July 24

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us