AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರುತ್ತಿದ್ದ ವಿಮಾನದಲ್ಲಿ ಧೂಮಪಾನ ಮಾಡಿದ ಪ್ರಯಾಣಿಕ: ಕೆಂಪೇಗೌಡ ಏರ್ಪೋಟ್ ಪೊಲೀಸರಿಂದ ಬಂಧನ

ಚಲಿಸುತ್ತಿದ್ದ ವಿಮಾನದ ಶೌಚಾಲಯದಲ್ಲಿ ಸಿಗರೇಟ್‌ ಸೇದಿ ಆತಂಕ ಸೃಷ್ಟಿಸಿದ್ದ ಪ್ರಯಾಣಿಕ ಪ್ರವೀಣ್ ಕುಮಾರ್​ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಹಾರುತ್ತಿದ್ದ ವಿಮಾನದಲ್ಲಿ ಧೂಮಪಾನ ಮಾಡಿದ ಪ್ರಯಾಣಿಕ: ಕೆಂಪೇಗೌಡ ಏರ್ಪೋಟ್ ಪೊಲೀಸರಿಂದ ಬಂಧನ
ಪ್ರವೀಣ್ ಕುಮಾರ್‌ ಬಂಧನ
ಗಂಗಾಧರ​ ಬ. ಸಾಬೋಜಿ
|

Updated on: May 16, 2023 | 9:10 PM

Share

ದೇವನಹಳ್ಳಿ: ಚಲಿಸುತ್ತಿದ್ದ ವಿಮಾನದ ಶೌಚಾಲಯದಲ್ಲಿ ಸಿಗರೇಟ್‌ (smoking) ಸೇದಿ  ಆತಂಕ ಸೃಷ್ಟಿಸಿದ್ದ ಪ್ರಯಾಣಿಕನ್ನು ಪೊಲೀಸರು ಬಂಧಿಸಿದ್ದಾರೆ. ಪ್ರವೀಣ್ ಕುಮಾರ್​ ಬಂಧಿತ ಆರೋಪಿ. ಅಹಮದಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ. ಆಕಾಶ್‌ ಏರ್‌ ವಿಮಾನದಲ್ಲಿ ಆರೋಪಿ ನಿಯಮ ಉಲ್ಲಂಘಿಸಿದ್ದಾನೆ. ಕೆಐಎಬಿಯಲ್ಲಿ ಪ್ರವೀಣ್‌ ಕುಮಾರ್‌ನನ್ನು ಬಂಧಿಸಿ ಏರ್‌ಪೋರ್ಟ್‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಅಸ್ಸಾಂನಿಂದ ಬೆಂಗಳೂರಿಗೆ ಬರುತ್ತಿದ್ದ ಪ್ರಯಾಣಿಕ ಶೇಹರಿ ಚೌದರಿ ಎಂಬಾತ ವಿಮಾನದ ಶೌಚಾಲಯದಲ್ಲಿ ಸಿಗರೇಟ್ ಸೇದಿ ಆತಂಕ ಸೃಷ್ಟಿಸಿದ್ದ. 6E 716 ಇಂಡಿಗೂ ವಿಮಾನದಲ್ಲಿ ಮಧ್ಯರಾತ್ರಿ 01:30 ರ ವೇಳೆ ಈ ಘಟನೆ ನಡೆದಿತ್ತು.

ಸಿಗರೇಟ್ ಸೇದಿದ ಪ್ರಯಾಣಿಕ 

ವಿಮಾನದ ಶೌಚಾಲಯದಲ್ಲಿ ಹೊಗೆ ಮತ್ತು ವಾಸನೆ ಬಂದ ಹಿನ್ನೆಲೆ ವಿಮಾನದ ಸಿಬ್ಬಂದಿ ಪರಿಶೀಲನೆ ನಡೆಸಿದ್ದರು. ಈ‌ ವೇಳೆ ಪ್ರಯಾಣಿಕ ಸಿಗರೇಟ್ ಸೇದಿರುವುದು ಬೆಳಕಿಗೆ ಬಂದಿತ್ತು. ಹೀಗಾಗಿ ಬೆಂಗಳೂರಿಗೆ ಬಂದ ಕೂಡಲೆ ಏರ್ಲೈನ್ಸ್ ಸಿಬ್ಬಂದಿ‌ ಪ್ರಯಾಣಿಕನನ್ನ ಭದ್ರತಾ ಪಡೆಗೆ ನೀಡಿದ್ದರು. ಪ್ರಯಾಣಿಕನ ವಿರುದ್ದ ಪ್ರಕರಣ ದಾಖಲಿಸಿಕೊಂಡು ಏರ್ಪೋಟ್ ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ವಿಮಾನದಲ್ಲಿ ಪ್ರಯಾಣದ ವೇಳೆ ಸಿಗರೇಟ್ ಸೇದಿದ ಭೂಪ; ಫ್ಲೈಟ್​ ಲ್ಯಾಂಡ್​ ಆಗುತ್ತಿದ್ದಂತೆಯೇ ಅರೆಸ್ಟ್

ಏರ್ಪೋಟ್​ಗಳಲ್ಲಿ ಭದ್ರತಾ ಪಡೆಯ ನಿರ್ಲಕ್ಷ್ಯದಿಂದ ಪದೇ ಪದೇ ಫ್ಲೈಟ್​ಗಳಲ್ಲಿ ಧೂಮಫಾನ ಪ್ರಕರಣ ಪತ್ತೆಯಾಗುತ್ತಿದ್ದು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. ಆಕಾಶದಲ್ಲಿ ಹಾರುವ ವೇಳೆ ಧೂಮಪಾನದಿಂದ ಅಗ್ನಿ ಅವಾಂತರವಾದರೆ ಯಾರು ಹೊಣೆ ಎನ್ನುವ ಆತಂಕ ಎದುರಾಗಿದೆ.

ಮಾ. 5ರಂದು ವಿಮಾನದಲ್ಲಿ ಸಿಗರೇಟ್ ಸೇದಿ ಆತಂಕ ಸೃಷ್ಟಿಸಿದ್ದ ಯುವತಿ

ಮಾ. 5ರಂದು ರಾತ್ರಿ 9.50ಕ್ಕೆ ಕೋಲ್ಕತ್ತಾದಿಂದ ಹೊರಟಿದ್ದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಪ್ರಿಯಾಂಕ ಎಂಬ ಯುವತಿ ಇಂಡಿಗೋ 6E716 ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡಿದ್ದಳು.

ಇದನ್ನೂ ಓದಿ: ರಸ್ತೆ ಅಪಘಾತ ಹೆಚ್ಚಳ: ಜೀವ ರಕ್ಷಣೆಗಾಗಿ ಮಹತ್ವದ ಹೆಜ್ಜೆ ಇಟ್ಟ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ

ವಿಮಾನ ಬೆಂಗಳೂರಿಗೆ ಲ್ಯಾಂಡ್ ಆಗುವ ಅರ್ಧ ಗಂಟೆ ಮುನ್ನ ಸಿಗರೇಟ್ ಸೇದಿದ್ದಳು. ಶೌಚಾಲಯ ಬಾಗಿಲು ತೆಗಿಸಿದಾಗ ಡಸ್ಟ್ ಬಿನ್​ನಲ್ಲಿ ಸಿಗರೇಟ್ ತುಂಡು ಪತ್ತೆಯಾಗಿತ್ತು. ಸಿಗರೇಟ್ ಕಂಡು ತಕ್ಷಣ ಸಿಬ್ಬಂದಿ ಡಸ್ಟ್ ಬಿನ್​ಗೆ ನೀರು ಸುರಿದಿದ್ದರು. ಬಳಿಕ ಫ್ಲೈಟ್ ಲ್ಯಾಂಡ್ ಆಗುತ್ತಿದ್ದಂತೆ ಯುವತಿಯನ್ನು ವಶಕ್ಕೆ ಪಡೆಯಲಾಗಿತ್ತು.

ಈ ವೇಳೆ ಕೆಲಕಾಲ ಜನರಲ್ಲಿ ಆತಂಕ ಸೃಷ್ಟಿಯಾಗಿತ್ತು. ಇತರರ ಜೀವ ಮತ್ತು ವೈಯಕ್ತಿಕ ಸುರಕ್ಷತೆಗೆ ಅಪಾಯ ಆರೋಪದಡಿ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!