AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ದಾಖಲೆ ನೀಡಿ ಸಾಲ ಪಡೆಯುವ ಖದೀಮರು: ಲೋನ್​​ ನೀಡಿದ 3 ಬ್ಯಾಂಕ್​ ಮ್ಯಾನೇಜರ್​ಗಳ​ ಬಂಧನ

ಸರಿಯಾಗಿ ಪರಿಶೀಲಿಸದೆ ನಕಲಿ ಭೂ ದಾಖಲೆಗಳನ್ನು ಹೊಂದಿದ್ದವರಿಗೆ ಸಾಲ ನೀಡಿದ್ದ ಮೂವರು ಬ್ಯಾಂಕ್​ ಮ್ಯಾನೆಜರ್​​ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ​ಐಸಿಐಸಿಐ ಹೋಮ್ ಫೈನಾನ್ಸ್ ಕಂಪನಿಯ ಸೇಲ್ಸ್ ಮ್ಯಾನೇಜರ್ ರಾಕೇಶ್ , ಸೆಂಟ್ ಮಾರ್ಕ್ಸ್ ರಸ್ತೆಯ ಎಸ್​ಬಿಐ ಬ್ಯಾಂಕ್​ನ ಎಜಿಎಂ ಮುರುಳಿಧರ್, ಬೆಂಗಳೂರು ಜಿಲ್ಲಾ ಕೋ ಅಪರೇಟಿವ್ ಬ್ಯಾಂಕ್​​ನ ಮಲ್ಲಿಕಾರ್ಜುನ ಬಂಧಿತ ಆರೋಪಿಗಳು.

ನಕಲಿ ದಾಖಲೆ ನೀಡಿ ಸಾಲ ಪಡೆಯುವ ಖದೀಮರು: ಲೋನ್​​ ನೀಡಿದ 3 ಬ್ಯಾಂಕ್​ ಮ್ಯಾನೇಜರ್​ಗಳ​ ಬಂಧನ
ಬಂಧನ (ಸಾಂದರ್ಭಿಕ ಚಿತ್ರ)
ರಾಚಪ್ಪಾಜಿ ನಾಯ್ಕ್
| Edited By: |

Updated on:Jan 19, 2024 | 7:04 PM

Share

ಬೆಂಗಳೂರು, ಜನವರಿ 19: ಸರಿಯಾಗಿ ಪರಿಶೀಲಿಸದೆ ನಕಲಿ ಭೂ ದಾಖಲೆಗಳನ್ನು (Fake Documents) ಹೊಂದಿದ್ದವರಿಗೆ ಸಾಲ (Loan) ನೀಡಿದ್ದ ಮೂವರು ಬ್ಯಾಂಕ್​ ಮ್ಯಾನೆಜರ್​​ಗಳನ್ನು (Bank Manager) ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ​ಐಸಿಐಸಿಐ ಹೋಮ್ ಫೈನಾನ್ಸ್ ಕಂಪನಿಯ ಸೇಲ್ಸ್ ಮ್ಯಾನೇಜರ್ ರಾಕೇಶ್  , ಸೆಂಟ್ ಮಾರ್ಕ್ಸ್ ರಸ್ತೆಯ ಎಸ್​ಬಿಐ ಬ್ಯಾಂಕ್​ನ ಎಜಿಎಂ ಮುರುಳಿಧರ್, ಬೆಂಗಳೂರು ಜಿಲ್ಲಾ ಕೋ ಅಪರೇಟಿವ್ ಬ್ಯಾಂಕ್​​ನ ಮಲ್ಲಿಕಾರ್ಜುನ ಬಂಧಿತ ಆರೋಪಿಗಳು.

ಬ್ಯಾಂಕ್ ಮ್ಯಾನೇಜರ್ ಬಂಧನಕ್ಕೆ ಕಾರಣ ಏನು..?

ಜಮೀನು ಮಾರಲು ಮಾಲಿಕರು ಬ್ರೋಕರ್​ಗಳಿಗೆ ದಾಖಲೆಗಳನ್ನು ನೀಡುತ್ತಾರೆ. ಈ ದಾಖಲೆಗಳ ಮೂಲಕ ನಿಮ್ಮ ಹೆಸರಿನಲ್ಲಿ ಬ್ಯಾಂಕ್​ಗಳಲ್ಲಿ ಅಕೌಂಟ್​ ಸೃಷ್ಟಿಸಿ, ಸಾಲ ಪಡೆಯುತ್ತಾರೆ. ಈ ರೀತಿ ನಕಲಿ ಹಲವು ಸಲ ದಾಖಲೆ ನೀಡಿದ್ದಾರೆ. ಆದರೆ ಸಾಲ ನೀಡುವಾಗ ದಾಖಲೆಗಳನ್ನ ಸರಿಯಾದ ಪರಿಶೀಲನೆ ಮಾಡಿಲ್ಲ. ಲೋನ್ ಅಪ್ರೂವ್ ಆದ ಸ್ವತ್ತಿನಲ್ಲಿ ಲೋನ್ ಅಪ್ರೂವ್ ಆಗಿರುವ ಇಸಿ ಪಡೆದುಕೊಳ್ಳಬೇಕು ಆದರೆ ಇಲ್ಲಿ ಪಡೆದುಕೊಂಡಿಲ್ಲ. ಸುಮಾರು ನಾಲ್ಕೂವರೆ ಕೋಟಿ‌ ರೂ. ಸಾಲ ಇದೇ ರೀತಿ ಅಪ್ರೂವ್ ಮಾಡಿದ್ದರು.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಮೈಸೂರಿನ ರೈತ 19 ಲಕ್ಷದ ಸಾಲ ತೀರಿಸಿದ್ದರೂ ಮನೆ ಹರಾಜಿಗೆ ಹಾಕಿದ ಗ್ರಾಮೀಣ ಬ್ಯಾಂಕ್‌?

ಸದ್ಯ ಸಿಸಿಬಿ ಪೊಲೀಸರು ಮೂವರು ಬ್ಯಾಂಕ್ ಮ್ಯಾನೇಜರ್​ಗಳನ್ನು ಬಂಧಸಿದ್ದಾರೆ. ಈ ಹಿಂದೆ ಪುಟ್ಟೇನಹಳ್ಳಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಐದು ಆರೋಪಿಗಳನ್ನು ಸಿಸಿಬಿ ಬಂಧಿಸಲಾಗಿತ್ತು. ಇದೇ ಪ್ರಕರಣದಲ್ಲಿ ತನಿಖೆ ಮುಂದುವರೆಸಿ ಮತ್ತೆ ಮೂವರು ಬ್ಯಾಂಕ್ ಮ್ಯಾನೇಜರ್​ಗಳನ್ನು ಸಿಸಿಬಿ ಅಧಿಕಾರಿಗಳು ಅರೆಸ್ಟ್​ ಮಾಡಿದ್ದಾರೆ. ಇವರನ್ನು ಬಂಧಿಸಿ ತನಿಖೆ ಮುಂದುವರೆಸಿದಾಗ ಬ್ಯಾಂಕ್ ಮ್ಯಾನೇಜರ್​ಗಳ ಕಳ್ಳಾಟ ಬಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:20 am, Fri, 19 January 24

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ