AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಹೆಚ್​​​​ಬಿ ಬಂಡೇಮಠ ಲೇಔಟ್​​​: ಮುಂದೆ ಸಾಗದ ಕಾಮಗಾರಿ, ಬಿಬಿಎಂಪಿ ಅಧಿಕಾರಿಗಳ ಬೇಜವಾಬ್ದಾರಿ, ನಾಗರಿಕರಿಗೆ ನಿತ್ಯ ನರಕಯಾತನೆ

KHB Bandemutt Layout : ಗುತ್ತಿಗೆದಾರ ಕಡೆಯಿಂದ ಬರುವ ಮೇಲ್ವಿಚಾರಕರನ್ನು ಏಕೆ ಇಷ್ಟು ವಿಳಂಬ ಎಂದು ಕೇಳಿದರೆ, ಇನ್ನೂ ನಮಗೆ ವರ್ಕ್ ಆರ್ಡರ್ ಕೊಟ್ಟಿಲ್ಲ. ಹೀಗಾಗಿ ನಿಧಾನವಾಗಿ ಕೆಲಸ ಮಾಡುವಂತೆ ಬಿಬಿಎಂಪಿ ಎಂಜಿನಿಯರ್ ಗಳೇ ತಿಳಿಸಿದ್ದಾರೆ ಎನ್ನುತ್ತಾರೆ.

ಕೆಹೆಚ್​​​​ಬಿ ಬಂಡೇಮಠ ಲೇಔಟ್​​​: ಮುಂದೆ ಸಾಗದ ಕಾಮಗಾರಿ, ಬಿಬಿಎಂಪಿ ಅಧಿಕಾರಿಗಳ ಬೇಜವಾಬ್ದಾರಿ, ನಾಗರಿಕರಿಗೆ ನಿತ್ಯ ನರಕಯಾತನೆ
ಕೆಹೆಚ್​​​​ಬಿ ಬಂಡೇಮಠ: ಮುಂದೆ ಸಾಗದ ಕಾಮಗಾರಿ
TV9 Web
| Edited By: ಸಾಧು ಶ್ರೀನಾಥ್​|

Updated on: May 08, 2023 | 1:31 PM

Share

ಕೆಂಗೇರಿ (Kengeri) ಬಂಡೇಮಠ ವ್ಯಾಪ್ತಿಯಲ್ಲಿರುವ (Bandemutt Layout) ಕರ್ನಾಟಕ ಹೌಸಿಂಗ್​ ಬೋರ್ಡ್​​​ (ಕೆ.ಹೆಚ್.ಬಿ -KHB) ಬಡಾವಣೆಯನ್ನು ಬೆಂಗಳೂರು ಬೃಹತ್​​ ಮಹಾನಗರ ಪಾಲಿಕೆಗೆ (ಬಿಬಿಎಂಪಿ -BBMP) ಹಸ್ತಾಂತರಿಸಿಕೊಂಡು ತಕ್ಷಣವೇ ಮೂಲಸೌಕರ್ಯ ಕಲ್ಪಿಸುವಂತೆ ಸ್ವತಃ ವಿಧಾನಸಭೆಯ ಅರ್ಜಿಗಳ ಸಮಿತಿ ಸೂಚಿಸಿ 6 ತಿಂಗಳೇ ಕಳೆದರೂ ಇಲ್ಲಿನ ನಿವಾಸಿಗಳಿಗೆ ಅಭಿವೃದ್ಧಿ ಮರೀಚಿಕೆಯಾಗಿದೆ. ವಿಧಾನಸಭೆ ಸಮಿತಿಯ ಆದೇಶದಂತೆ 10 ಕೋಟಿ ರೂಪಾಯಿ ವೆಚ್ಚದಲ್ಲಿ ಮಳೆ ನೀರು ಚರಂಡಿ, ಉದ್ಯಾನ ಮತ್ತು ರಸ್ತೆ ಮರು ಅಭಿವೃದ್ಧಿಗೆ ಟೆಂಡರ್ ಕರೆಯಲಾಗಿತ್ತು. ಮಾರ್ಚ್ 17ರಂದೇ ಟೆಂಡರ್ ತೆರೆದು, ಏಪ್ರಿಲ್ 3ರಿಂದ ಕಾಮಗಾರಿ ಆರಂಭಿಸಲಾಗಿದೆ. ಕಾಮಗಾರಿ ಆರಂಭವಾಗಿ ತಿಂಗಳಾದರೂ ಇನ್ನೂ ಒಂದೇ ಒಂದು ರಸ್ತೆಗೂ ಡಾಂಬರು ಹಾಕಿಲ್ಲ. ಮನೆಯೆಲ್ಲಾ ಧೂಳು ಮಯವಾಗಿದ್ದು, ರಸ್ತೆಯಲ್ಲಿ, ಮಣ್ಣಿನ ರಾಶಿ ಹಾಗೇ ಬಿದ್ದಿದೆ. ಜನ ಸಂಕಷ್ಟ ಅನುಭವಿಸುವಂತಾಗಿದೆ.

ಗುತ್ತಿಗೆದಾರ ಕಡೆಯಿಂದ ಬರುವ ಮೇಲ್ವಿಚಾರಕರನ್ನು ಏಕೆ ಇಷ್ಟು ವಿಳಂಬ ಎಂದು ಕೇಳಿದರೆ, ಇನ್ನೂ ನಮಗೆ ವರ್ಕ್ ಆರ್ಡರ್ ಕೊಟ್ಟಿಲ್ಲ. ಚುನಾವಣೆ ನೀತಿ ಸಂಹಿತೆ ಇದೆ. ಚುನಾವಣೆ ಮುಗಿದ ಮೇಲೆ ಕೊಡುತ್ತೇವೆ ಎಂದು ಹೇಳಿದ್ದಾರೆ. ಹೀಗಾಗಿ ನಿಧಾನವಾಗಿ ಕೆಲಸ ಮಾಡುವಂತೆ ಬಿಬಿಎಂಪಿ ಎಂಜಿನಿಯರ್ ಗಳೇ ತಿಳಿಸಿದ್ದಾರೆ ಎನ್ನುತ್ತಾರೆ.

ಬಿಬಿಎಂಪಿ ಎಂಜಿನಿಯರ್ ಗಳ ಬೇಜವಾಬ್ದಾರಿತನಕ್ಕೆ ಬಡಾವಣೆಯ ವೃದ್ಧರು, ಮಹಿಳೆಯರು, ಮಕ್ಕಳು ಬವಣೆ ಅನುಭವಿಸುವಂತಾಗಿದೆ. ಈಗ ಮಳೆಯೂ ಆರಂಭವಾಗಿದ್ದು, ಗುಂಡಿ ಬಿದ್ದಿರುವ ಎಲ್ಲ ರಸ್ತೆಗಳಲ್ಲಿ ನೀರು ನಿಂತಿದೆ. ಮಳೆ ನೀರು ಚರಂಡಿಯ ಹೂಳನ್ನು ಅರ್ಧ ಮಾತ್ರ ತೆಗೆದಿದ್ದು, ಚರಂಡಿಗಳಲ್ಲಿ ನೀರು ನಿಂತು ಸೊಳ್ಳೆಗಳ ಸಂತಾನೋತ್ಪತ್ತಿ ತಾಣವಾಗಿ ಡೆಂಘ್ಯೂ, ಚಿಕನ್ ಗುನ್ಯ ರೋಗದ ಭೀತಿ ಉಂಟಾಗಿದೆ. ಪ್ರಚಾರಕ್ಕಾಗಿ ಬಡಾವಣೆಗೆ ಬರುತ್ತಿರುವ ಇಲ್ಲಿನ ಶಾಸಕರಿಗೆ ಅಭ್ಯರ್ಥಿಗಳಿಗೆ ನಮ್ಮ ಸಂಕಷ್ಟ ಕಾಣುತ್ತಿಲ್ಲವೇ ಎಂದು ಇಲ್ಲಿನ ಜನ ಪ್ರಶ್ನಿಸುತ್ತಿದ್ದಾರೆ. ಕೆಹೆಚ್​​​​ಬಿ ಬಡಾವಣೆ ನಾಗರಿಕರ ಸಂಕಷ್ಟಕ್ಕೆ ಪರಿಹಾರವೇ ಇಲ್ಲವೇ? ಎಂದು ಕೆಹೆಚ್​​​​ಬಿ ಬಡಾವಣೆ ನಾಗರಿಕರ ವೇದಿಕೆ ಪ್ರಧಾನ ಕಾರ್ಯದರ್ಶಿ ಟಿ ಎಂ ಸತೀಶ್ ಪ್ರಶ್ನಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಾಜಕೀಯದಲ್ಲೂ ಧರ್ಮ ಇಟ್ಟುಕೊಂಡು ಕೆಲಸ ಮಾಡಬೇಕು: ಡಿಕೆಶಿ
ರಾಜಕೀಯದಲ್ಲೂ ಧರ್ಮ ಇಟ್ಟುಕೊಂಡು ಕೆಲಸ ಮಾಡಬೇಕು: ಡಿಕೆಶಿ
1 ಗಂಟೆ ಮೋಡ ಬಿತ್ತನೆಗೆ ಎಷ್ಟು ಖರ್ಚು? ವಿವರಿಸಿದ ಶಾಸಕ
1 ಗಂಟೆ ಮೋಡ ಬಿತ್ತನೆಗೆ ಎಷ್ಟು ಖರ್ಚು? ವಿವರಿಸಿದ ಶಾಸಕ
ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಮಹತ್ವದ ಬದಲಾವಣೆ
ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಮಹತ್ವದ ಬದಲಾವಣೆ
ಬೆಳಗಾವಿಯಲ್ಲಿ ಭೀಕರ ಬರದ ಛಾಯೆ: ಬರಿದಾದ ಹಿಡಕಲ್ ಡ್ಯಾಂ
ಬೆಳಗಾವಿಯಲ್ಲಿ ಭೀಕರ ಬರದ ಛಾಯೆ: ಬರಿದಾದ ಹಿಡಕಲ್ ಡ್ಯಾಂ
ಕೋಲಾರದ ಕುರುಬರಪೇಟೆಯಲ್ಲಿ ದೇಗುಲದ ಆವರಣದಲ್ಲಿ ಎಸ್​ಐಆರ್​​ ಪ್ರಕ್ರಿಯೆ!
ಕೋಲಾರದ ಕುರುಬರಪೇಟೆಯಲ್ಲಿ ದೇಗುಲದ ಆವರಣದಲ್ಲಿ ಎಸ್​ಐಆರ್​​ ಪ್ರಕ್ರಿಯೆ!
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD