ಡೆಹ್ರಾಡೂನ್​​ನಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತಂದ ಕೃಷ್ಣ ಬೈರೇಗೌಡ

ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ಚಾರಣಿಗರು ಉತ್ತರಾಖಂಡದ  ಸಹಸ್ತ್ರತಲ್‌ನಲ್ಲಿ ಅಪಾಯಕ್ಕೆ ಸಿಲುಕಿದ್ದು, ಆ ಪೈಕಿ 9 ಮಂದಿ ಮೃತಪಟ್ಟಿದ್ದರು. ಬದುಕುಳಿದ 13 ಜನ ಕನ್ನಡಿಗರನ್ನು ರಾಜ್ಯದ ಕಂದಾಯ ಸಚಿವ ಕೃಷ್ಣ ಭೈರೇಗೌಡ (Krishna Byre Gowda)ಅವರು ಡೆಹ್ರಾಡೂನ್​​ನಿಂದ ಸುರಕ್ಷಿತವಾಗಿ ಬೆಂಗಳೂರಿಗೆ ಕರೆತಂದಿದ್ದಾರೆ.

ಡೆಹ್ರಾಡೂನ್​​ನಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತಂದ ಕೃಷ್ಣ ಬೈರೇಗೌಡ
ಕೃಷ್ಣ ಬೈರೇಗೌಡ
Edited By:

Updated on: Jun 06, 2024 | 10:29 PM

ಬೆಂಗಳೂರು ಗ್ರಾಮಾಂತರ, ಜೂ.06: ಉತ್ತರಾಖಂಡ್​ಗೆ (Uttarakhand) ಚಾರಣಕ್ಕೆಂದು ರಾಜ್ಯದ 21 ಜನರು ತೆರಳಿದ್ದರು. ಈ ವೇಳೆ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ಚಾರಣಿಗರು ಉತ್ತರಾಖಂಡದ  ಸಹಸ್ತ್ರತಲ್‌ನಲ್ಲಿ ಅಪಾಯಕ್ಕೆ ಸಿಲುಕಿದ್ದು, ಆ ಪೈಕಿ 9 ಮಂದಿ ಮೃತಪಟ್ಟಿದ್ದರು. ಬಳಿಕ ಬದುಕುಳಿದವರ ರಕ್ಷಣೆಗಾಗಿ ತುರ್ತು ಕಾರ್ಯಾಚರಣೆ ನಡೆಸಿ, ಮೃತಪಟ್ಟ ಕನ್ನಡಿಗರ ಶವಗಳನ್ನು ಬೆಂಗಳೂರಿಗೆ ತರುವ ಬಗ್ಗೆ ಉತ್ತರಾಖಂಡ ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ವಿಪತ್ತು ನಿರ್ವಹಣಾ ಇಲಾಖೆ ಕಾರ್ಯದರ್ಶಿ ಜೊತೆ ರಾಜ್ಯದ ಕಂದಾಯ ಸಚಿವ ಕೃಷ್ಣ ಭೈರೇಗೌಡ (Krishna Byre Gowda)ಅವರು ​ಮಾತುಕತೆ ನಡೆಸಿ, ಇದೀಗ ಕೃಷ್ಣಬೈರೇಗೌಡ ಅವರು ಡೆಹ್ರಾಡೂನ್​​ನಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತಂದಿದ್ದಾರೆ.

ಇಂಡಿಗೋ ವಿಮಾನದಲ್ಲಿ ಆಗಮಿಸಿದ 13 ಜನ ಕನ್ನಡಿಗರು

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಚಿವ ಕೃಷ್ಣಬೈರೆಗೌಡ ಜೊತೆ ಇಂಡಿಗೋ ವಿಮಾನದಲ್ಲಿ 13 ಜನ ಕನ್ನಡಿಗರು ಆಗಮಿಸಿದ್ದಾರೆ. ಏರ್ಪೋರ್ಟ್​ನಲ್ಲಿ ಸ್ವಾಗತಕೋರಲು ಕುಟುಂಬಸ್ಥರು ಸಹ ಆಗಮಿಸಿದ್ದಾರೆ.

ಇದನ್ನೂ ಓದಿ:ಉತ್ತರಾಖಂಡ್​ ಚಾರಣ: ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಿಷ್ಟು

ಡೆಹ್ರಾಡೂನ್ ನಿಂದ ಬೆಂಗಳೂರಿಗೆ ವಾಪಸ್ ಬಂದವರ ಹೆಸರು

  1. ಸೌಮ್ಯಾ ಕನಲೆ- 36 ವರ್ಷ
  2. ವಿನಯ್ MK, 49 ವರ್ಷ
  3. ಶಿವಜ್ಯೋತಿ- 46 ವರ್ಷ
  4. ಸುಧಾಕರ್‌, 64 ವರ್ಷ
  5. ಸ್ಮೃತಿ, 41 ವರ್ಷ
  6. ಶೀನಾ ಲಕ್ಷ್ಮಿ, 48 ವರ್ಷ
  7. ಮಧುಕಿರಣ್ ರೆಡ್ಡಿ- 52 ವರ್ಷ
  8. ಜಯಪ್ರಕಾಶ್- 61 ವರ್ಷ
  9. ಭರತ್- 53 ವರ್ಷ
  10. ಅನಿಲ್ ಭಟ್ಟ್- 52 ವರ್ಷ
  11. ವಿವೇಕ್ ಶ್ರೀಧರ್- 42 ವರ್ಷ
  12. ರಿತಿಕ್ ಜಿಂದಾಲ್
  13. ನವೀನ್ A

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us