AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಸುರೇಶ್​ಗೆ ಗುಂಡಿಕ್ಕಬೇಕು; ಕಾನೂನು ಮೀರಿ ನಡೆಯುವವರಿಗೆ ಖಡಕ್​ ಎಚ್ಚರಿಕೆ ಕೊಟ್ಟ ಗೃಹ ಸಚಿವ

ದೇಶದ್ರೋಹಿ ಹೇಳಿಕೆ ನೀಡಿದ ಸಂಸದ  ಡಿಕೆ ಸುರೇಶ್​ಗೆ  ಗುಂಡಿಕ್ಕಬೇಕು ಎಂಬ ಮಾಜಿ ಸಚಿವ ಕೆಎಸ್​ ಈಶ್ವರಪ್ಪ(KS Eshwarappa) ಹೇಳಿಕೆ ವಿರುದ್ದ ಕಾನೂನು ಸಚಿವ ಹೆಚ್​ಕೆ ಪಾಟೀಲ್ ಗುಡುಗಿದ್ದರು. ಇದೀಗ ‘ಮಾಜಿ ಸಚಿವ  ಈಶ್ವರಪ್ಪ ವಿರುದ್ಧ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕಿಡಿಕಾರಿದ್ದಾರೆ.

ಡಿಕೆ ಸುರೇಶ್​ಗೆ ಗುಂಡಿಕ್ಕಬೇಕು; ಕಾನೂನು ಮೀರಿ ನಡೆಯುವವರಿಗೆ ಖಡಕ್​ ಎಚ್ಚರಿಕೆ ಕೊಟ್ಟ ಗೃಹ ಸಚಿವ
ಜಿ. ಪರಮೇಶ್ವರ್​
ಬಿ ಮೂರ್ತಿ, ನೆಲಮಂಗಲ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Feb 09, 2024 | 3:23 PM

Share

ಬೆಂಗಳೂರು, ಫೆ.09: ದಾವಣಗೆರೆ ನಗರದಲ್ಲಿ ನಡೆದಿದ್ದ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ‘ದೇಶ ವಿಭಜನೆಯ ಹೇಳಿಕೆ ಕೊಡುವವರನ್ನು ಗುಂಡಿಕ್ಕಿ ಕೊಲ್ಲಬೇಕು’ ಎಂಬ ಹೇಳಿಕೆ ಕೆಎಸ್​.ಈಶ್ವರಪ್ಪ(KS Eshwarappa) ನೀಡಿದ್ದರು. ಇದರ ವಿರುದ್ಧ ಕಾಂಗ್ರೆಸ್​ ನಾಯಕರು ವಾಗ್ದಾಳಿ ನಡೆಸಿದ್ದರು. ಅದರಂತೆ ಇದೀಗ ಪೇಟೆಯಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ (DR. G Parameshwara) ‘ ಈಶ್ವರಪ್ಪಗೆ ಪ್ರತ್ಯೇಕ ಕಾನೂನು ಮಾಡಲು ಹೇಳಿ, ಈ ಕಾನೂನು ಮೀರಿ ಯಾರು ಕೂಡ ವರ್ತಿಸಬಾರದು ಎಂದು ಕಿಡಿಕಾರಿದ್ದಾರೆ.

ಕೋಮುಸೌಹಾರ್ದತೆ ಕದಡುವವರನ್ನು ನೋಡಿ ಸುಮ್ಮನೆ ಕೂರಲ್ಲ

ಇನ್ನು ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ಐಆರ್ ವಿಚಾರ ‘ಕೋಮುಸೌಹಾರ್ದತೆ ಕದಡುವವರನ್ನು ನೋಡಿ ಸುಮ್ಮನೆ ಕೂರಲ್ಲ. ಅಂತವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು. ಚಕ್ರವರ್ತಿ ಸೂಲಿಬೆಲೆ ಅಷ್ಟೇ ಅಲ್ಲ, ಯಾರೇ ಈ ರೀತಿ ಹೇಳಿಕೆ ಕೊಟ್ಟರೂ , ಅಂಥವರ ವಿರುದ್ಧ ನಮ್ಮ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದರು.

ಇದನ್ನೂ ಓದಿ:ಡಿಕೆ ಸುರೇಶ್​ಗೆ ಗುಂಡಿಕ್ಕಬೇಕು: ಈಶ್ವರಪ್ಪ ಹೇಳಿಕೆಗೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಎಚ್​ಕೆ ಪಾಟೀಲ್

ಇದೇ ವೇಳೆ ಹುಕ್ಕಾ ಬಾರ್​ಗಳಲ್ಲಿ ಡ್ರಗ್ಸ್​ ಸಪ್ಲೈ ಮಾಡುತ್ತಾರೆ ಎಂಬುದು ಸಾಭೀತಾಗಿದೆ. ಈ ಹಿನ್ನಲೆ ರಾಜ್ಯದಲ್ಲಿ ಹುಕ್ಕಾ ಬಾರ್​ಗಳನ್ನು ನಮ್ಮ ಸರ್ಕಾರ ನಿಷೇಧಿಸಿದೆ. ಈ ಮುಖಾಂತರ ಆರೋಗ್ಯ ಇಲಾಖೆ ಉತ್ತಮ ನಿರ್ಧಾರ ತೆಗೆದುಕೊಂಡಿದೆ ಎಂದರು. ಜೊತೆಗೆ ಎಡಿಜಿಪಿ ಪ್ರತಾಪ್ ರೆಡ್ಡಿ ಸ್ವಯಂನಿವೃತ್ತಿಗೆ ಅರ್ಜಿ ಸಲ್ಲಿಕೆ ವಿಚಾರ, ‘ಅದು ಪ್ರತಾಪ್ ರೆಡ್ಡಿ ವೈಯಕ್ತಿಕ ವಿಚಾರ, ಆ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:16 pm, Fri, 9 February 24

Follow Us
ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು