AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ghati Subramanya News: ಘಾಟಿ ಸುಬ್ರಹ್ಮಣ್ಯದ ರಾಷ್ಟ್ರೋತ್ಥಾನ ಗೋಶಾಲೆ ಹಸುಗಳ ಮೇಲೆ ಚಿರತೆ ದಾಳಿ

ಘಾಟಿ ಕ್ಷೇತ್ರದ ಗೋಶಾಲೆಗೆ ಹೊಂದಿಕೊಂಡಂತೆ ಇರುವ ಮಾಕಳಿ ದುರ್ಗದ ಬೆಟ್ಟಸಾಲು ಸೇರಿದಂತೆ ವಿವಿಧೆಡೆ ಚಿರತೆಯ ಹಾವಳಿ ಕಾಣಿಸಿಕೊಂಡಿದೆ.

Ghati Subramanya News: ಘಾಟಿ ಸುಬ್ರಹ್ಮಣ್ಯದ ರಾಷ್ಟ್ರೋತ್ಥಾನ ಗೋಶಾಲೆ ಹಸುಗಳ ಮೇಲೆ ಚಿರತೆ ದಾಳಿ
ಘಾಟಿ ಕ್ಷೇತ್ರದ ಸುತ್ತಮುತ್ತಲ ಗುಡ್ಡಗಳಲ್ಲಿ ಚಿರತೆ ಹಸುಗಳ ಮೇಲೆ ದಾಳಿ ಮಾಡಿದೆ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Aug 31, 2022 | 8:03 PM

ಬೆಂಗಳೂರು: ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರತಿಸಿದ್ಧ ತೀರ್ಥಯಾತ್ರಾ ಸ್ಥಳ ಘಾಟಿ ಸುಬ್ರಹ್ಮಣ್ಯ (Ghati Subramanya) ಕ್ಷೇತ್ರಕ್ಕೆ ಹೊಂದಿಕೊಂಡಂತೆ ಇರುವ ರಾಷ್ಟ್ರೋತ್ಥಾನ ಗೋಶಾಲೆಯ (Rashtrothana Goshale) ಹಸುಗಳ ಮೇಲೆ ಚಿರತೆಯೊಂದು ಬುಧವಾರ ದಾಳಿ ಮಾಡಿದೆ (Leopard Attack). ದಾಳಿಯಿಂದ ಎರಡು ಹಸುಗಳಿಗೆ ಗಂಭೀರ ಗಾಯಗಳಾಗಿವೆ. ಒಂದು ಹಸು ನಾಪತ್ತೆಯಾಗಿದ್ದು, ಅದನ್ನು ಹುಡುಕಲು ಸಿಬ್ಬಂದಿ ಪ್ರಯತ್ನಿಸುತ್ತಿದ್ದಾರೆ.

ಗೋಶಾಲೆಯ ‘ಬೃಂದಾವನ’ ಪ್ರದೇಶದಲ್ಲಿ ಹಸುಗಳು ಮೇಯುತ್ತಿದ್ದಾಗ ಚಿರತೆ ದಾಳಿ ಮಾಡಿದೆ ಎಂದು ಗೋಪಾಲಕರು ತಿಳಿಸಿದ್ದಾರೆ. ಚಿರತೆಯ ಏಟಿನಿಂದ ಒಂದು ಹಸು ನಿತ್ರಾಣಗೊಂಡು ಕುಸಿಯಿತು. ಮತ್ತೊಂದು ಹಸು ತಪ್ಪಿಸಿಕೊಂಡು ಓಡಿತು. ಸಿಬ್ಬಂದಿ ತಕ್ಷಣ ಹಸುಗಳನ್ನು ಸುರಕ್ಷಿತ ಸ್ಥಳಕ್ಕೆ ಹೊಡೆದು ಕಾಪಾಡಿದರು. ಒಂದು ಗೋವಿನ ಹೊಟ್ಟೆಗೆ ತೀವ್ರ ಪೆಟ್ಟು ಬಿದ್ದ ಕಾರಣ ಅದನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಯಿತು ಎಂದು ರಾಷ್ಟ್ರೋತ್ಥಾನ ಸಂಸ್ಥೆಯ ಕಾರ್ಯದರ್ಶಿ ದಿನೇಶ ಹೆಗಡೆ ತಿಳಿಸಿದರು.

ಘಾಟಿ ಕ್ಷೇತ್ರದ ಗೋಶಾಲೆಗೆ ಹೊಂದಿಕೊಂಡಂತೆ ಇರುವ ಮಾಕಳಿ ದುರ್ಗದ ಬೆಟ್ಟಸಾಲು ಸೇರಿದಂತೆ ವಿವಿಧೆಡೆ ಚಿರತೆಯ ಹಾವಳಿ ಕಾಣಿಸಿಕೊಂಡಿದೆ. ಇತ್ತೀಚೆಗಷ್ಟೇ ಮಾಕಳಿ ಸಮೀಪ ಚಿರತೆಯೊಂದು ರೈಲಿಗೆ ಸಿಕ್ಕಿ ಸಾವನ್ನಪ್ಪಿತ್ತು.

ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್
ಉಗ್ರರ ದಾಳಿ ಬಳಿಕ ಪಹಲ್ಗಾಮ್​ನ ಬೇತಾಬ್ ಕಣಿವೆ ಪ್ರವಾಸಿಗರಿಗೆ ಓಪನ್
ಉಗ್ರರ ದಾಳಿ ಬಳಿಕ ಪಹಲ್ಗಾಮ್​ನ ಬೇತಾಬ್ ಕಣಿವೆ ಪ್ರವಾಸಿಗರಿಗೆ ಓಪನ್
ಶಿವಣ್ಣ ಬಗ್ಗೆ ಅವಹೇಳನಕಾರಿ ಮಾತು: ಮಡೆನೂರು ಮನು ವಿರುದ್ಧ ಚೇಂಬರ್ ಕ್ರಮ
ಶಿವಣ್ಣ ಬಗ್ಗೆ ಅವಹೇಳನಕಾರಿ ಮಾತು: ಮಡೆನೂರು ಮನು ವಿರುದ್ಧ ಚೇಂಬರ್ ಕ್ರಮ