AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆರಿಗೆ ಮಾಡಿಸಲು ಲಂಚ: ಮಲ್ಲಸಂದ್ರ ಹೆರಿಗೆ ಆಸ್ಪತ್ರೆ ಫೋನ್​ಪೇ ನರ್ಸ್ ಅರೆಸ್ಟ್!

ಆರ್ಥಿಕವಾಗಿ ಹಿಂದೂಳಿದವರು, ಬಡವರಿಗೆ ಅಂತಾನೆ ಈ ಸರ್ಕಾರಿ ಆಸ್ಪತ್ರೆಗಳು ಇವೆ. ಅವರಿಗೆ ಖಾಸಗಿ ಆಸ್ಪತ್ರೆಯ ಚಿಕಿತ್ಸೆ ವೆಚ್ಚ ಭರಸಿಲು ಕಷ್ಟವಾಗುತ್ತಿರುವುದರಿಂದ ಜನರು ಸರ್ಕಾರಿ ಆಸ್ಪತ್ರಗೆ ಬರುತ್ತಾರೆ. ಆದ್ರೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಭಷ್ಟ್ರಾಚಾರ ತಾಂಡವವಾಡುತ್ತಿದೆ. ಅದರಂತೆ ಇಲ್ಲೋರ್ವ ನರ್ಸ್​, ಹರಿಗೆ ಮಾಡಿಸಲು ಫೋನ್​ಪೇ ಮೂಲಕ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾಳೆ.

ಹೆರಿಗೆ ಮಾಡಿಸಲು ಲಂಚ: ಮಲ್ಲಸಂದ್ರ ಹೆರಿಗೆ ಆಸ್ಪತ್ರೆ ಫೋನ್​ಪೇ ನರ್ಸ್ ಅರೆಸ್ಟ್!
ಮಲ್ಲಸಂದ್ರ ಹೆರಿಗೆ ಆಸ್ಪತ್ರೆಯ ನರ್ಸ್​ ಗಂಗಲಕ್ಷ್ಮೀ
ಬಿ ಮೂರ್ತಿ, ನೆಲಮಂಗಲ
| Edited By: |

Updated on:Dec 21, 2024 | 8:42 PM

Share

ಬೆಂಗಳೂರು, (ಡಿಸೆಂಬರ್ 21): ಟಿ.ದಾಸರಹಳ್ಳಿಯ ಮಲ್ಲಸಂದ್ರ ಹೆರಿಗೆ ಆಸ್ಪತ್ರೆ ನರ್ಸ್​ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್‌ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಹೆರಿಗೆ ಮಾಡಿಸಲು ಲಂಚ ಪಡೆಯುತ್ತಿದ್ದ ಮಲ್ಲಸಂದ್ರ ಹೆರಿಗೆ ಆಸ್ಪತ್ರೆಯ ನರ್ಸ್​ ಗಂಗಲಕ್ಷ್ಮೀ ಸಿಕ್ಕಿದ್ದಿದ್ದಾರೆ. ಬೆಂಗಳೂರಿನ ಟಿ.ದಾಸರಹಳ್ಳಿಯ ಮಲ್ಲಸಂದ್ರ ಆಸ್ಪತ್ರೆಗೆ ಬಂದಿದ್ದ ಬಾಗಲಗುಂಟೆಯ ಕಮಲಮ್ಮ ಬಳಿ 6,500 ರೂಪಾಯಿ ಬೇಡಿಕೆ ಇಟ್ಟಿದ್ದಾರೆ. ಈ ಪೈಕಿ 5000 ಫೋನ್​ಪೇ ಮೂಲಕ ಪಡೆದುಕೊಂಡಿದ್ದಾರೆ.

ಹೆರಿಗೆ ಮಾಡಿಸಲು ಬಾಗಲಗುಂಟೆಯ ಕಮಲಮ್ಮ ಎಂಬುವರಿಂದ ಲಂಚ ಪಡೆಯುತ್ತಿರುವಾಗಲೇ ನರ್ಸ್ ಗಂಗಲಕ್ಷ್ಮಿ ರೆಡ್​ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾಳೆ. ಬಳಿಕ ಲೋಕಾಯಕ್ತ ಪೊಲೀಸರು ಗಂಗಾಲಕ್ಷ್ಮೀಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಈಕೆಯ ಕರ್ಮಕಾಂಡ ಬಗೆದಷ್ಟು ಬಯಲಾಗುತ್ತಿದೆ.

ಇದನ್ನೂ ಓದಿ: ನೆಲಮಂಗಲ: ಕೆಜಿಗಟ್ಟಲೆ ಚಿನ್ನ ಕೊಂಡೊಯ್ದು ಆಭರಣ ಅಂಗಡಿ ಮಾಲೀಕರಿಗೇ ಧಮ್ಕಿ ಹಾಕಿದ ಮಹಿಳೆ!

ಸಾರ್ವಜನಿಕ ಹೆರಿಗೆ ಆಸ್ಪತ್ರೆಯನ್ನ ಸ್ವಂತ ಆಸ್ಪತ್ರೆಯನ್ನಾಗಿ ಮಾಡಿಕೊಂಡಿದ್ದ ನರ್ಸ್ ಗಂಗಲಕ್ಷ್ಮೀ ಮೇಲಿನ ಆರೋಪ ಇದೇನು ಮೊದಲಲ್ಲ. ಈಕೆ ಭ್ರೂಣ ಹತ್ಯೆ ಕೇಸ್ ನಲ್ಲೂ ಭಾಗಿಯಾಗಿರುವ ಅರೋಪ ಕೇಳಿಬಂದಿದೆ. ಈಕೆಯ ಪತಿ ಕೆಂಪೇಗೌಡ ನಿವೃತ್ತ ಪೊಲೀಸ್ ಅಧಿಕಾರಿ. ಹೀಗಾಗಿ ಈಕೆ ಏನು ಮಾಡಿದರೂ ಸಹ ನಡೆದುಕೊಂಡು ಹೋಗುತ್ತಿದೆ. ಆಸ್ಪತ್ರೆಯಲ್ಲಿ ಈಕೆ ಹೇಳಿದ್ದೆ ಅಂತಿಮ.

ಸತತ ನಾಲ್ಕು ಬಾರಿ ಈಕೆಯ ಮೇಲೆ ಗಂಭೀರ ಸ್ವರೂಪದ ಅರೋಪಗಳು ಇದ್ದರೂ ಸಹ ಇಲಾಖೆಯ ಕೆಲ ಅಧಿಕಾರಿಗಳಿಗೆ ಹಣ ಕೊಟ್ಟು ಸಾಕಷ್ಟು ವರ್ಷದಿಂದ ಒಂದೇ ಆಸ್ಪತ್ರೆಯಲ್ಲಿ ಠಿಕಾಣಿಹೂಡಿದ್ದಾಳೆ. ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಣೆ ಮಾಡುವ ಡಾಕ್ಟರ್ ಕೂಡ ಈ ನರ್ಸ್ ಹೇಳಿದ ರೀತಿಯಲ್ಲಿ ಕೆಲಸ ಮಾಡಬೇಕಿತ್ತು. ಈ ಹಿಂದೆಯೂ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಗಂಭೀರ ಪ್ರಕರಣದ ಕೇಸ್​ಗಳು ದಾಖಲಾಗಿದ್ದರೂ ಯಾವುದೇ ಕ್ರಮವಾಗಿಲ್ಲ. ಹೀಗಾಗಿ ನರ್ಸ್ ಗಂಗಾಲಕ್ಷ್ಮೀ ಆಡಿದ್ದೇ ಆಟವಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:31 am, Sat, 21 December 24

Follow Us
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು