AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆರಿಗೆ ಮಾಡಿಸಲು ಲಂಚ: ಮಲ್ಲಸಂದ್ರ ಹೆರಿಗೆ ಆಸ್ಪತ್ರೆ ಫೋನ್​ಪೇ ನರ್ಸ್ ಅರೆಸ್ಟ್!

ಆರ್ಥಿಕವಾಗಿ ಹಿಂದೂಳಿದವರು, ಬಡವರಿಗೆ ಅಂತಾನೆ ಈ ಸರ್ಕಾರಿ ಆಸ್ಪತ್ರೆಗಳು ಇವೆ. ಅವರಿಗೆ ಖಾಸಗಿ ಆಸ್ಪತ್ರೆಯ ಚಿಕಿತ್ಸೆ ವೆಚ್ಚ ಭರಸಿಲು ಕಷ್ಟವಾಗುತ್ತಿರುವುದರಿಂದ ಜನರು ಸರ್ಕಾರಿ ಆಸ್ಪತ್ರಗೆ ಬರುತ್ತಾರೆ. ಆದ್ರೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಭಷ್ಟ್ರಾಚಾರ ತಾಂಡವವಾಡುತ್ತಿದೆ. ಅದರಂತೆ ಇಲ್ಲೋರ್ವ ನರ್ಸ್​, ಹರಿಗೆ ಮಾಡಿಸಲು ಫೋನ್​ಪೇ ಮೂಲಕ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾಳೆ.

ಹೆರಿಗೆ ಮಾಡಿಸಲು ಲಂಚ: ಮಲ್ಲಸಂದ್ರ ಹೆರಿಗೆ ಆಸ್ಪತ್ರೆ ಫೋನ್​ಪೇ ನರ್ಸ್ ಅರೆಸ್ಟ್!
ಮಲ್ಲಸಂದ್ರ ಹೆರಿಗೆ ಆಸ್ಪತ್ರೆಯ ನರ್ಸ್​ ಗಂಗಲಕ್ಷ್ಮೀ
ಬಿ ಮೂರ್ತಿ, ನೆಲಮಂಗಲ
| Edited By: |

Updated on:Dec 21, 2024 | 8:42 PM

Share

ಬೆಂಗಳೂರು, (ಡಿಸೆಂಬರ್ 21): ಟಿ.ದಾಸರಹಳ್ಳಿಯ ಮಲ್ಲಸಂದ್ರ ಹೆರಿಗೆ ಆಸ್ಪತ್ರೆ ನರ್ಸ್​ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್‌ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಹೆರಿಗೆ ಮಾಡಿಸಲು ಲಂಚ ಪಡೆಯುತ್ತಿದ್ದ ಮಲ್ಲಸಂದ್ರ ಹೆರಿಗೆ ಆಸ್ಪತ್ರೆಯ ನರ್ಸ್​ ಗಂಗಲಕ್ಷ್ಮೀ ಸಿಕ್ಕಿದ್ದಿದ್ದಾರೆ. ಬೆಂಗಳೂರಿನ ಟಿ.ದಾಸರಹಳ್ಳಿಯ ಮಲ್ಲಸಂದ್ರ ಆಸ್ಪತ್ರೆಗೆ ಬಂದಿದ್ದ ಬಾಗಲಗುಂಟೆಯ ಕಮಲಮ್ಮ ಬಳಿ 6,500 ರೂಪಾಯಿ ಬೇಡಿಕೆ ಇಟ್ಟಿದ್ದಾರೆ. ಈ ಪೈಕಿ 5000 ಫೋನ್​ಪೇ ಮೂಲಕ ಪಡೆದುಕೊಂಡಿದ್ದಾರೆ.

ಹೆರಿಗೆ ಮಾಡಿಸಲು ಬಾಗಲಗುಂಟೆಯ ಕಮಲಮ್ಮ ಎಂಬುವರಿಂದ ಲಂಚ ಪಡೆಯುತ್ತಿರುವಾಗಲೇ ನರ್ಸ್ ಗಂಗಲಕ್ಷ್ಮಿ ರೆಡ್​ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾಳೆ. ಬಳಿಕ ಲೋಕಾಯಕ್ತ ಪೊಲೀಸರು ಗಂಗಾಲಕ್ಷ್ಮೀಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಈಕೆಯ ಕರ್ಮಕಾಂಡ ಬಗೆದಷ್ಟು ಬಯಲಾಗುತ್ತಿದೆ.

ಇದನ್ನೂ ಓದಿ: ನೆಲಮಂಗಲ: ಕೆಜಿಗಟ್ಟಲೆ ಚಿನ್ನ ಕೊಂಡೊಯ್ದು ಆಭರಣ ಅಂಗಡಿ ಮಾಲೀಕರಿಗೇ ಧಮ್ಕಿ ಹಾಕಿದ ಮಹಿಳೆ!

ಸಾರ್ವಜನಿಕ ಹೆರಿಗೆ ಆಸ್ಪತ್ರೆಯನ್ನ ಸ್ವಂತ ಆಸ್ಪತ್ರೆಯನ್ನಾಗಿ ಮಾಡಿಕೊಂಡಿದ್ದ ನರ್ಸ್ ಗಂಗಲಕ್ಷ್ಮೀ ಮೇಲಿನ ಆರೋಪ ಇದೇನು ಮೊದಲಲ್ಲ. ಈಕೆ ಭ್ರೂಣ ಹತ್ಯೆ ಕೇಸ್ ನಲ್ಲೂ ಭಾಗಿಯಾಗಿರುವ ಅರೋಪ ಕೇಳಿಬಂದಿದೆ. ಈಕೆಯ ಪತಿ ಕೆಂಪೇಗೌಡ ನಿವೃತ್ತ ಪೊಲೀಸ್ ಅಧಿಕಾರಿ. ಹೀಗಾಗಿ ಈಕೆ ಏನು ಮಾಡಿದರೂ ಸಹ ನಡೆದುಕೊಂಡು ಹೋಗುತ್ತಿದೆ. ಆಸ್ಪತ್ರೆಯಲ್ಲಿ ಈಕೆ ಹೇಳಿದ್ದೆ ಅಂತಿಮ.

ಸತತ ನಾಲ್ಕು ಬಾರಿ ಈಕೆಯ ಮೇಲೆ ಗಂಭೀರ ಸ್ವರೂಪದ ಅರೋಪಗಳು ಇದ್ದರೂ ಸಹ ಇಲಾಖೆಯ ಕೆಲ ಅಧಿಕಾರಿಗಳಿಗೆ ಹಣ ಕೊಟ್ಟು ಸಾಕಷ್ಟು ವರ್ಷದಿಂದ ಒಂದೇ ಆಸ್ಪತ್ರೆಯಲ್ಲಿ ಠಿಕಾಣಿಹೂಡಿದ್ದಾಳೆ. ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಣೆ ಮಾಡುವ ಡಾಕ್ಟರ್ ಕೂಡ ಈ ನರ್ಸ್ ಹೇಳಿದ ರೀತಿಯಲ್ಲಿ ಕೆಲಸ ಮಾಡಬೇಕಿತ್ತು. ಈ ಹಿಂದೆಯೂ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಗಂಭೀರ ಪ್ರಕರಣದ ಕೇಸ್​ಗಳು ದಾಖಲಾಗಿದ್ದರೂ ಯಾವುದೇ ಕ್ರಮವಾಗಿಲ್ಲ. ಹೀಗಾಗಿ ನರ್ಸ್ ಗಂಗಾಲಕ್ಷ್ಮೀ ಆಡಿದ್ದೇ ಆಟವಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:31 am, Sat, 21 December 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್