AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಅಮಲಿನಲ್ಲಿ ಟೋಲ್ ಅನ್ನೆ ಗುದ್ದಿಕೊಂಡು ಹೋದ ಲಾರಿ ಚಾಲಕ: ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಎಲ್ಲಾ ವಾಹನಗಳಿಂದ ಶುಲ್ಕ ವಸೂಲಿ ಮಾಡುವ ರೀತಿಯೆ ವೇಗವಾಗಿ ಬರುತ್ತಿದ್ದ ಲಾರಿ ಚಾಲಕನಿಂದಲೂ ಶುಲ್ಕ ಕೇಳಲು ಟೋಲ್ ಸಿಬ್ಬಂದಿ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಈ ವೇಳೆ ಟೋಲ್ ಪ್ಲಾಜಾನಲ್ಲಿ ನಿಲ್ಲಿಸಿ ಶುಲ್ಕ ನೀಡಿ ತೆರಳಬೇಕಿದ್ದ ಲಾರಿ ಚಾಲಕ ಟೋಲ್ ಪೋಲ್ ಅನ್ನು ಗುದ್ದಿಕೊಂಡು ರಭಸವಾಗಿ ಹೋಗಿದ್ದಾನೆ.

ಕುಡಿದ ಅಮಲಿನಲ್ಲಿ ಟೋಲ್ ಅನ್ನೆ ಗುದ್ದಿಕೊಂಡು ಹೋದ ಲಾರಿ ಚಾಲಕ: ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
ಟೋಲ್ ಅನ್ನೆ ಗುದ್ದಿಕೊಂಡು ಹೋದ ಲಾರಿ ಚಾಲಕ
TV9 Web
| Edited By: sandhya thejappa|

Updated on:Jul 31, 2021 | 2:58 PM

Share

ದೇವನಹಳ್ಳಿ: ಬೆಂಗಳೂರು- ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 07 ರಲ್ಲಿ ಆಗಮಿಸಿದ ಲಾರಿ ಚಾಲಕನೋರ್ವ ಕುಡಿದ ಅಮಲಿನಲ್ಲಿ ಲಾರಿ ನಿಲ್ಲಿಸದೆ ಟೋಲ್​ಗೆ ಗುದ್ದಿಕೊಂಡು ಹೋಗುವ ಮೂಲಕ ಅಟ್ಟಹಾಸ ಮೆರೆದಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಏರ್ ಪೋರ್ಟ್ ರಸ್ತೆಯ ಟೋಲ್​ನಲ್ಲಿ ಬೆಂಗಳೂರಿನಿಂದ ದೇವನಹಳ್ಳಿ ಕಡೆ ಖಾಲಿ ಲಾರಿಯೊಂದು ಮದ್ಯಾಹ್ನ 12 ಗಂಟೆ ಸುಮಾರಿಗೆ ಆಗಮಿಸಿದೆ. ಶುಲ್ಕ ವಸೂಲಿಗೆ ಅಡ್ಡ ಹಾಕಿದಾಗ, ಚಾಲಕ ಗಾಡಿಯನ್ನು ನಿಲ್ಲಿಸದೆ ಟೋಲ್​ಗೆ ಗುದ್ದಿಕೊಂಡು ಹೋಗಿದ್ದಾನೆ.

ಎಲ್ಲಾ ವಾಹನಗಳಿಂದ ಶುಲ್ಕ ವಸೂಲಿ ಮಾಡುವ ರೀತಿಯೆ ವೇಗವಾಗಿ ಬರುತ್ತಿದ್ದ ಲಾರಿ ಚಾಲಕನಿಂದಲೂ ಶುಲ್ಕ ಕೇಳಲು ಟೋಲ್ ಸಿಬ್ಬಂದಿ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಈ ವೇಳೆ ಟೋಲ್ ಪ್ಲಾಜಾನಲ್ಲಿ ನಿಲ್ಲಿಸಿ ಶುಲ್ಕ ನೀಡಿ ತೆರಳಬೇಕಿದ್ದ ಲಾರಿ ಚಾಲಕ ಟೋಲ್ ಪೋಲ್ ಅನ್ನು ಗುದ್ದಿಕೊಂಡು ರಭಸವಾಗಿ ಹೋಗಿದ್ದಾನೆ. ಟೋಲ್ ಪ್ಲಾಜಾ ಲೈನಿನಲ್ಲಿ ನಿಂತಿದ್ದ ಸಿಬ್ಬಂದಿ ಕೂದಲಳತೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾನೆ.

ಟೋಲ್ ಪ್ಲಾಜಾ ಗುದ್ದಿಕೊಂಡು ಹೋಗುತ್ತಿದ್ದ ಚಾಲಕನನ್ನ ಟೋಲ್ ಸಿಬ್ಬಂದಿ ದೇವನಹಳ್ಳಿ ಪಟ್ಟಣದವರೆಗೂ ಚೇಸ್ ಮಾಡಿಕೊಂಡು ಹೋಗಿ ಹಿಡಿದಿದ್ದಾರೆ. ನಂತರ ಏರ್ ಪೋರ್ಟ್ ಸಂಚಾರಿ ಪೊಲೀಸರ ವಶಕ್ಕೆ ನೀಡಿದ್ದಾರೆ. ವಾಹನಗಳ ಸಂಖ್ಯೆ ಕಡಿಮೆಯಿದ್ದ ಕಾರಣ ಹೆಚ್ಚಿನ ಅನಾಹುತವೊಂದು ತಪ್ಪಿದಂತಾಗಿದೆ. ಲಾರಿ ಚಾಲಕ ಟೋಲ್ ಪ್ಲಾಜಾ ಗುದ್ದಿಕೊಂಡು ಹೋಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಆ ದೃಶ್ಯಗಳು ಟಿವಿ9ಗೆ ಲಭ್ಯವಾಗಿದೆ.

ಇದನ್ನೂ ಓದಿ

ಬಿಎಸ್‌ ಯಡಿಯೂರಪ್ಪ, ಕುಟುಂಬದವರ ವಿರುದ್ಧ ಭ್ರಷ್ಟಾಚಾರ ಆರೋಪ: ಪಿಐಎಲ್ ಆಗಿ ಪರಿಗಣಿಸಲು ಸಾಧ್ಯವಿಲ್ಲವೆಂದ ಹೈಕೋರ್ಟ್

ಮುಂಜಾನೆ ಬಿಹಾರದ ಚೌರಾ ರೈಲ್ವೆ ಸ್ಟೇಶನ್​​ಗೆ ಮುತ್ತಿಗೆ ಹಾಕಿದ್ದ ಮಾವೋವಾದಿಗಳು; ಸುಮಾರು 2 ತಾಸು ರೈಲು ಸಂಚಾರ ಬಂದ್​

(Lorry driver hit to Toll in Devanahalli and its scene is captured on a CC camera)

Published On - 2:28 pm, Sat, 31 July 21

Follow Us
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ