AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಅಮಲಿನಲ್ಲಿ ಟೋಲ್ ಅನ್ನೆ ಗುದ್ದಿಕೊಂಡು ಹೋದ ಲಾರಿ ಚಾಲಕ: ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಎಲ್ಲಾ ವಾಹನಗಳಿಂದ ಶುಲ್ಕ ವಸೂಲಿ ಮಾಡುವ ರೀತಿಯೆ ವೇಗವಾಗಿ ಬರುತ್ತಿದ್ದ ಲಾರಿ ಚಾಲಕನಿಂದಲೂ ಶುಲ್ಕ ಕೇಳಲು ಟೋಲ್ ಸಿಬ್ಬಂದಿ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಈ ವೇಳೆ ಟೋಲ್ ಪ್ಲಾಜಾನಲ್ಲಿ ನಿಲ್ಲಿಸಿ ಶುಲ್ಕ ನೀಡಿ ತೆರಳಬೇಕಿದ್ದ ಲಾರಿ ಚಾಲಕ ಟೋಲ್ ಪೋಲ್ ಅನ್ನು ಗುದ್ದಿಕೊಂಡು ರಭಸವಾಗಿ ಹೋಗಿದ್ದಾನೆ.

ಕುಡಿದ ಅಮಲಿನಲ್ಲಿ ಟೋಲ್ ಅನ್ನೆ ಗುದ್ದಿಕೊಂಡು ಹೋದ ಲಾರಿ ಚಾಲಕ: ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
ಟೋಲ್ ಅನ್ನೆ ಗುದ್ದಿಕೊಂಡು ಹೋದ ಲಾರಿ ಚಾಲಕ
TV9 Web
| Edited By: sandhya thejappa|

Updated on:Jul 31, 2021 | 2:58 PM

Share

ದೇವನಹಳ್ಳಿ: ಬೆಂಗಳೂರು- ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 07 ರಲ್ಲಿ ಆಗಮಿಸಿದ ಲಾರಿ ಚಾಲಕನೋರ್ವ ಕುಡಿದ ಅಮಲಿನಲ್ಲಿ ಲಾರಿ ನಿಲ್ಲಿಸದೆ ಟೋಲ್​ಗೆ ಗುದ್ದಿಕೊಂಡು ಹೋಗುವ ಮೂಲಕ ಅಟ್ಟಹಾಸ ಮೆರೆದಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಏರ್ ಪೋರ್ಟ್ ರಸ್ತೆಯ ಟೋಲ್​ನಲ್ಲಿ ಬೆಂಗಳೂರಿನಿಂದ ದೇವನಹಳ್ಳಿ ಕಡೆ ಖಾಲಿ ಲಾರಿಯೊಂದು ಮದ್ಯಾಹ್ನ 12 ಗಂಟೆ ಸುಮಾರಿಗೆ ಆಗಮಿಸಿದೆ. ಶುಲ್ಕ ವಸೂಲಿಗೆ ಅಡ್ಡ ಹಾಕಿದಾಗ, ಚಾಲಕ ಗಾಡಿಯನ್ನು ನಿಲ್ಲಿಸದೆ ಟೋಲ್​ಗೆ ಗುದ್ದಿಕೊಂಡು ಹೋಗಿದ್ದಾನೆ.

ಎಲ್ಲಾ ವಾಹನಗಳಿಂದ ಶುಲ್ಕ ವಸೂಲಿ ಮಾಡುವ ರೀತಿಯೆ ವೇಗವಾಗಿ ಬರುತ್ತಿದ್ದ ಲಾರಿ ಚಾಲಕನಿಂದಲೂ ಶುಲ್ಕ ಕೇಳಲು ಟೋಲ್ ಸಿಬ್ಬಂದಿ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಈ ವೇಳೆ ಟೋಲ್ ಪ್ಲಾಜಾನಲ್ಲಿ ನಿಲ್ಲಿಸಿ ಶುಲ್ಕ ನೀಡಿ ತೆರಳಬೇಕಿದ್ದ ಲಾರಿ ಚಾಲಕ ಟೋಲ್ ಪೋಲ್ ಅನ್ನು ಗುದ್ದಿಕೊಂಡು ರಭಸವಾಗಿ ಹೋಗಿದ್ದಾನೆ. ಟೋಲ್ ಪ್ಲಾಜಾ ಲೈನಿನಲ್ಲಿ ನಿಂತಿದ್ದ ಸಿಬ್ಬಂದಿ ಕೂದಲಳತೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾನೆ.

ಟೋಲ್ ಪ್ಲಾಜಾ ಗುದ್ದಿಕೊಂಡು ಹೋಗುತ್ತಿದ್ದ ಚಾಲಕನನ್ನ ಟೋಲ್ ಸಿಬ್ಬಂದಿ ದೇವನಹಳ್ಳಿ ಪಟ್ಟಣದವರೆಗೂ ಚೇಸ್ ಮಾಡಿಕೊಂಡು ಹೋಗಿ ಹಿಡಿದಿದ್ದಾರೆ. ನಂತರ ಏರ್ ಪೋರ್ಟ್ ಸಂಚಾರಿ ಪೊಲೀಸರ ವಶಕ್ಕೆ ನೀಡಿದ್ದಾರೆ. ವಾಹನಗಳ ಸಂಖ್ಯೆ ಕಡಿಮೆಯಿದ್ದ ಕಾರಣ ಹೆಚ್ಚಿನ ಅನಾಹುತವೊಂದು ತಪ್ಪಿದಂತಾಗಿದೆ. ಲಾರಿ ಚಾಲಕ ಟೋಲ್ ಪ್ಲಾಜಾ ಗುದ್ದಿಕೊಂಡು ಹೋಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಆ ದೃಶ್ಯಗಳು ಟಿವಿ9ಗೆ ಲಭ್ಯವಾಗಿದೆ.

ಇದನ್ನೂ ಓದಿ

ಬಿಎಸ್‌ ಯಡಿಯೂರಪ್ಪ, ಕುಟುಂಬದವರ ವಿರುದ್ಧ ಭ್ರಷ್ಟಾಚಾರ ಆರೋಪ: ಪಿಐಎಲ್ ಆಗಿ ಪರಿಗಣಿಸಲು ಸಾಧ್ಯವಿಲ್ಲವೆಂದ ಹೈಕೋರ್ಟ್

ಮುಂಜಾನೆ ಬಿಹಾರದ ಚೌರಾ ರೈಲ್ವೆ ಸ್ಟೇಶನ್​​ಗೆ ಮುತ್ತಿಗೆ ಹಾಕಿದ್ದ ಮಾವೋವಾದಿಗಳು; ಸುಮಾರು 2 ತಾಸು ರೈಲು ಸಂಚಾರ ಬಂದ್​

(Lorry driver hit to Toll in Devanahalli and its scene is captured on a CC camera)

Published On - 2:28 pm, Sat, 31 July 21

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!