ನೆಲಮಂಗಲ ಟೌನ್‌ನಲ್ಲಿ ಸಿಕ್ಕಸಿಕ್ಕವರ ಮೇಲೆ ಹುಚ್ಚು ನಾಯಿ ದಾಳಿ; 12 ಮಂದಿಗೆ ಗಾಯ

ಜನರ ಮೇಲೆ ಹುಚ್ಚು ನಾಯಿ ದಾಳಿ ನಡೆಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್​ನಲ್ಲಿ ನಡೆದಿದ್ದು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ನೆಲಮಂಗಲ ಟೌನ್‌ನಲ್ಲಿ ಸಿಕ್ಕಸಿಕ್ಕವರ ಮೇಲೆ ಹುಚ್ಚು ನಾಯಿ ದಾಳಿ; 12 ಮಂದಿಗೆ ಗಾಯ
ನೆಲಮಂಗಲದಲ್ಲಿ ಜನರ ಮೇಲೆ ದಾಳಿ ಮಾಡಿದ ಹುಚ್ಚು ನಾಯಿ
Edited By: Rakesh Nayak Manchi

Updated on: Nov 24, 2023 | 10:12 PM

ನೆಲಮಂಗಲ, ನ.24: ಸಿಕ್ಕಸಿಕ್ಕವರ ಮೇಲೆ ಹುಚ್ಚು ನಾಯಿ ದಾಳಿ ನಡೆಸಿದ ಘಟನೆ ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್​ನಲ್ಲಿ ನಡೆದಿದೆ. ಹುಚ್ಚು ನಾಯಿ ಕಡಿತಕ್ಕೆ 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ನೆಲಮಂಗಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಹುಚ್ಚು ನಾಯಿ ದಾಳಿಯಿಂದ ಪರಮೇಶ್, ಚೌಡಪ್ಪ, ಕೃಷ್ಣ, ಚೌಡರೆಡ್ಡಿ, ಮೊಹಮ್ಮದ್‌, ಕಿಶೋರ್‌, ರಾಧಾ, ತನ್ವೀರ್‌ ಸೇರಿದಂತೆ 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ನೆಲಮಂಗಲ ಟೌನ್ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಜನನಿಬಿಡ ಚೆನ್ನೈ ರಸ್ತೆಯಲ್ಲಿ ಒಂದು ಗಂಟೆಯೊಳಗೆ 29 ಜನರಿಗೆ ಕಚ್ಚಿದ ಬೀದಿನಾಯಿ

ಅಲ್ಲದೆ, ಇನ್ಸ್‌ಪೆಕ್ಟರ್ ಶಶಿಧರ್ ನೇತೃತ್ವದಲ್ಲಿ ನಾಯಿ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸಲಾಗಿದೆ. ಅಲ್ಲದೆ, ಸ್ಪೆಷಲ್ ಡಾಗ್ ಟೇಮ್ ಆಗಮಿಸುವಷ್ಟರಲ್ಲಿ ಸ್ಥಿಮಿತ ಕಳೆದುಕೊಂಡ ಸಾರ್ವಜನಿಕರು, ನೆಲಮಂಗಲ ಟಿಬಿ ಬಸ್ ನಿಲ್ದಾಣದ ಬಳಿ ಪತ್ತೆಯಾದ ಹುಚ್ಚು ನಾಯಿಯನ್ನು ಹೊಡೆದು ಕೊಂದು ಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:10 pm, Fri, 24 November 23

ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
Follow Us