AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಷದ ಹಿಂದೆ ಮದುವೆ ಮನೆಯಲ್ಲಿ ಬಳೆ ಶಾಸ್ತ್ರಕ್ಕೆ ತೊಡಿಸಿದ್ದ ಬಳೆ: ಹಣ ಕೇಳಿದಕ್ಕೆ ಮಹಿಳೆ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು

ಮದುವೆ ಮನೆಯಲ್ಲಿ ಬಳೆ ಶಾಸ್ತ್ರದ ವೇಳೆ ತೊಡಿಸಿದ ಬಳೆ ಹಣ ಕೇಳಿದಕ್ಕೆ ಸಂತೋಷ್ ಎಂಬುವವರು ಮಹಿಳೆ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಪದ್ಮಮ್ಮ(50) ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವರ್ಷದ ಹಿಂದೆ ಮದುವೆ ಮನೆಯಲ್ಲಿ ಬಳೆ ಶಾಸ್ತ್ರಕ್ಕೆ ತೊಡಿಸಿದ್ದ ಬಳೆ: ಹಣ ಕೇಳಿದಕ್ಕೆ ಮಹಿಳೆ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Dec 29, 2021 | 12:28 PM

Share

ಬೆಂಗಳೂರು: ಮದುವೆ ಮನೆಯಲ್ಲಿ ತೊಡಿಸಿದ ಬಳೆ ಬಿಲ್ಲು ಕೇಳಿದ್ದಕ್ಕೆ ಮಹಿಳೆಗೆ ಹಲ್ಲೆ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತೋಣಚಿನಕುಪ್ಪೆ ಗ್ರಾಮದಲ್ಲಿ ನಡೆದಿದೆ. ನೆಲಮಂಗಲ ತಾಲೂಕಿನ ತೋಣಚಿನಕುಪ್ಪೆ ಗ್ರಾಮದ ಸಂತೋಷ್ ಹಲ್ಲೆ ಮಾಡಿರುವುದಾಗಿ ಆರೋಪ ಕೇಳಿ ಬಂದಿದೆ.

ಮದುವೆ ಮನೆಯಲ್ಲಿ ಬಳೆ ಶಾಸ್ತ್ರದ ವೇಳೆ ತೊಡಿಸಿದ ಬಳೆ ಹಣ ಕೇಳಿದಕ್ಕೆ ಸಂತೋಷ್ ಎಂಬುವವರು ಮಹಿಳೆ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಪದ್ಮಮ್ಮ(50) ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದುವರೆ ವರ್ಷದ ಹಿಂದೆ ಪದ್ಮಮ್ಮ ಮನೆಯ ಪಕ್ಕದ ಮನೆಯಲ್ಲಿರುವ ಸಂತೋಷ್ ಮದುವೆ ಸಂದರ್ಭದಲ್ಲಿ, ಪದ್ಮಮ್ಮ ಮದುವೆ ಹೆಣ್ಣಿಗೆ ಹಾಗೂ ಮದುವೆಗೆ ಬಂದವರಿಗೆ ಬಳೆ ಶಾಸ್ತ್ರದ ವೇಳೆ ಬಳೆ ತೊಡಿಸಿದ್ದರು. ಒಟ್ಟು 3ಸಾವಿರದ ಬಿಲ್ ಆಗಿತ್ತು. ಮದುವೆ ದಿನವೇ ಒಂದು ಸಾವಿರ ಹಣ ಕೊಟ್ಟು ಉಳಿದ ಹಣ ಕೊಡುವುದಾಗಿ ಹೇಳಿ ಸುಮ್ಮನಾಗಿದ್ರು. ಹೀಗಾಗಿ ಉಳಿದ 2 ಸಾವಿರ ಹಣಕ್ಕಾಗಿ ಪದ್ಮಮ್ಮ ಆಗಾಗಾ ಸಂತೋಷ್ ಬಳಿ ಕೇಳುತ್ತಿದ್ದರು. ಆದ್ರೆ ಕೊಡುವುದಾಗಿ ಕೇಳಿ ಸಂತೋಷ್ ಸುಮ್ಮನಾಗಿದ್ದ.

ಅದರಂತೆ ಎರಡು ದಿನ ಹಿಂದೆ ರಾತ್ರಿ 9 ಗಂಟೆ ಸುಮಾರಿಗೆ ಪದ್ಮಮ್ಮ ಮತ್ತೆ ಸಂತೋಷ್ ಬಳಿ ಬಾಕಿ ಹಣ ಕೊಡುವುದಾಗಿ ಕೇಳಿದ್ದಾರೆ. ಖರ್ಚುಗೆ ಹಣವಿಲ್ಲ ಸ್ವಲ್ಪ ಹಣವಾದ್ರು ಕೊಡಿ ಅಂತ ಕೇಳಿದ್ದಕ್ಕೆ ಸಂತೋಷ್, ಜನರೆದುರು ಮರ್ಯಾದೆ ಹೋಯಿತೆಂದು ರೊಟ್ಟಿ ಹೆಂಚಿನಿಂದ ಹಲ್ಲೆ ಮಾಡಿದ್ದಾರೆ ಎಂದು ಪದ್ಮಮ್ಮ ದೂರು ದಾಖಲಿಸಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Puneeth Rajkumar: ಪುನೀತ್ ನಿವಾಸಕ್ಕೆ ಪ್ರಭಾಸ್ ಭೇಟಿ; ಕುಟುಂಬದವರಿಗೆ ಸಾಂತ್ವನ ಹೇಳಿದ ನಟ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ