ಅಯ್ಯೋ ಶಿವನೇ! ಮನೆ ಹೊರಗಡೆ ನಿಂತು ವಿದ್ಯುತ್​ ಬಿಲ್​ ಕೇಳಿದ್ದಕ್ಕೆ ಮೀಟರ್​ ರೀಡರ್​ ಮೇಲೆ ಹಲ್ಲೆ

ಮನೆ ಹೊರಗಡೆ ನಿಂತು ವಿದ್ಯುತ್​ ಬಿಲ್​ ಕೇಳಿದ್ದಕ್ಕೆ ಬೆಸ್ಕಾಂ ಮೀಟರ್ ರೀಡರ್ ಮೇಲೆ ಹಲ್ಲೆ ಮಾಡಿರುವ ಘಟನೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ನಡೆದಿದೆ. ಮನೆ ಹೊರಗಡೆ ನಿಂತ ಕೇಳುತ್ತೀಯಾ ಎಂದು ಹಲ್ಲೆ ಮಾಡಲಾಗಿದೆ. ಇನ್ನು ನಾಯಿ ಭಯದಿಂದ ಹೊರಗಡೆ ನಿಂತು ಕೇಳಿದ್ದೇನೆ ಎಂದು ಸಿಬ್ಬಂದಿ ಆರೋಪಿಸಿದ್ದಾರೆ.

ಅಯ್ಯೋ ಶಿವನೇ! ಮನೆ ಹೊರಗಡೆ ನಿಂತು ವಿದ್ಯುತ್​ ಬಿಲ್​ ಕೇಳಿದ್ದಕ್ಕೆ ಮೀಟರ್​ ರೀಡರ್​ ಮೇಲೆ ಹಲ್ಲೆ
ಬೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ
Edited By:

Updated on: Aug 28, 2023 | 4:07 PM

ವಿಜಯಪುರ, (ಆಗಸ್ಟ್ 28): ಕೆಲವರು ಬೇರೆಯವರ ಮನೆಗೆ ಒಳಗೆ ಹೋಗಲು ಒಂದು ಕ್ಷಣ ಹಿಂದೆ-ಮುಂದೆ ನೋಡುತ್ತಾರೆ. ಯಾಕಂದ್ರೆ ನಾಯಿ ಭಯ. ಇದರಿಂದ ಮನೆ ಹೊರಗಡೆ ನಿಂತ ಕೂಗುತ್ತಾರೆ. ಅದರಂತೆ ವಿಜಯಪುರದಲ್ಲಿ ಮನೆ ಹೊರಗಡೆ ನಿಂತು ವಿದ್ಯುತ್​ ಬಿಲ್ (electricity bill)​ ಕೇಳಿದ್ದಕ್ಕೆ ಮೀಟರ್ ರೀಡರ್ ಮೇಲೆ ಹಲ್ಲೆಯಾಗಿರುವ ಘಟನೆ ದೇವನಹಳ್ಳಿ (Devenahalli) ತಾಲೂಕಿನ ವಿಜಯಪುರ ಪಟ್ಟಣದಲ್ಲಿ ನಡೆದಿದೆ. ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಚನ್ನರಾಯಪ್ಪ ಬಡಾವಣೆಯ ಶಿವಮೂರ್ತಿ ಎಂಬುವವರ ಮನೆ ಬಳಿ ವಿದ್ಯುತ್​ ಬಾಕಿ ಬಿಲ್ ಕೇಳಲು ಬೆಸ್ಕಾಂ ಮೀಟರ್ ರೀಡರ್​ ತೌಸೀಪ್ ಹೋಗಿದ್ದರು. ಈ ವೇಳೆ ಶಿವಮೂರ್ತಿ ಎನ್ನುವರು ಮನೆಯಿಂದ ಆಚೆ ನಿಂತು ಬಿಲ್ ಕೇಳುತ್ತೀಯಾ ಎಂದು ಬೆಸ್ಕಾಂ ಸಿಬ್ಬಂದಿ ತೌಸೀಪ್ ಮೇಲೆ ಹಲ್ಲೆ ಮಾಡಿದ್ದಾರೆ.

ಮನೆಯೊಳಗೆ ಹೋಗದೇ ಹೊರಗಡೆ ನಿಂತು ವಿದ್ಯುತ್​ ಬಿಲ್​ ಕೇಳಿದ್ದಾನೆ. ಇದರಿಂದ ಮನೆ ಮಾಲೀಕ ಕೋಪಗೊಂಡು ಮೀಟರ್​ ರೀಡರ್​ ಮೇಲೆ ಹಲ್ಲೆ ಮಾಡಿದ್ದಾನೆ ತಫೀಕ್​ ಆರೋಪಿಸಿದ್ದಾರೆ. 2 ತಿಂಗಳ 3700 ರೂಪಾಯಿ ವಿದ್ಯುತ್​ ಬಿಲ್ ಪಾವತಿ ಬಾಕಿ ಇತ್ತು. ಹೀಗಾಗಿ ಕೇಳಲು ಹೋಗಿದ್ದೆ, ಆದ್ರೆ, ಮನೆಯ ಬಳಿ ನಾಯಿ ಇದ್ದಿದ್ದನ್ನ ಕಂಡು ಹೊರಗಡೆ ನಿಂತು ಬಿಲ್ ಕೇಳಿದ್ದಕ್ಕೆ ಹಲ್ಲೆ ಮಾಡಿದ್ದಾರೆ ಎಂದು ತೌಸೀಪ್ ಆರೋಪಿಸಿದ್ದು, ಈ ಬಗ್ಗೆ ವಿಜಯಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ಗೃಹ ಜ್ಯೋತಿ ಯೊಜನೆಯಡಿ ವಿದ್ಯುತ್​ ನಿಗಮಗಳಿಗೆ ಹಣ ಬಿಡುಗಡೆ ಮಾಡಿದ ಸರ್ಕಾರ: ಯಾವ ನಿಗಮಕ್ಕೆ ಎಷ್ಟು ಸಿಕ್ತು?

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us