AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಡಳಿತಾರೂಢ ಬಿಜೆಪಿಯ ಜನಸ್ಪಂದನ ಸಮಾವೇಶಕ್ಕೆ ಬಂದಿದ್ದ ವೃದ್ಧ ಹೃದಯಾಘಾತಕ್ಕೆ ಬಲಿ

ದೊಡ್ಡಬಳ್ಳಾಪುರದ ಸಮಾವೇಶದ ಸ್ಥಳದಲ್ಲಿ ವೃದ್ಧನಿಗೆ ಹೃದಯಾಘಾತವಾಗಿತ್ತು. ದೊಡ್ಡಬಳ್ಳಾಪುರ ಸರ್ಕಾರಿ‌ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ವೃದ್ಧ ಮೃತಪಟ್ಟಿದ್ದಾರೆ.

ಆಡಳಿತಾರೂಢ ಬಿಜೆಪಿಯ ಜನಸ್ಪಂದನ ಸಮಾವೇಶಕ್ಕೆ ಬಂದಿದ್ದ ವೃದ್ಧ ಹೃದಯಾಘಾತಕ್ಕೆ ಬಲಿ
ಜನಸ್ಪಂದನ ಸಮಾವೇಶಕ್ಕೆ ಬಂದಿದ್ದ ವೃದ್ಧ ಹೃದಯಾಘಾತಕ್ಕೆ ಬಲಿ
TV9 Web
| Edited By: |

Updated on:Sep 10, 2022 | 10:06 PM

Share

ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿ ಸರ್ಕಾರದ ಜನಸ್ಪಂದನಾ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದ್ದು ಜನಸ್ಪಂದನ ಸಮಾವೇಶಕ್ಕೆ ಬಂದಿದ್ದ ವೃದ್ಧ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ದೊಡ್ಡಬಳ್ಳಾಪುರದ ಸಮಾವೇಶದ ಸ್ಥಳದಲ್ಲಿ ವೃದ್ಧನಿಗೆ ಹೃದಯಾಘಾತವಾಗಿತ್ತು. ದೊಡ್ಡಬಳ್ಳಾಪುರ ಸರ್ಕಾರಿ‌ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ವೃದ್ಧ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ವೃದ್ಧ ಸಿದ್ದಲಿಂಗಪ್ಪ ಕೊನೆಯುಸಿರೆಳೆದಿದ್ದಾರೆ. ತುಮಕೂರು ಮೂಲದ 70 ವರ್ಷದ ವೃದ್ಧ ಸಿದ್ದಲಿಂಗಪ್ಪ ಮೃತ ವ್ಯಕ್ತಿ.

ಇನ್ನು ಮೃತನ ಮನೆಗೆ ತುಮಕೂರು ನಗರ ಶಾಸಕ ಜಿಬಿ ಜ್ಯೋತಿ ಗಣೇಶ್ ಭೇಟಿ ನೀಡಿದ್ದಾರೆ. ಮೃತನ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ವೈಯಕ್ತಿಕವಾಗಿ 25 ಸಾವಿರ ಹಣ ಸಹಾಯ ಮಾಡಿದ್ದಾರೆ.

ಅಮ್ಮನ ಕಳೆದುಕೊಂಡು ಕಣ್ಣೀರು ಹಾಕ್ತಿರುವ ಪುಟ್ಟ ಬಾಲಕ ಮನ್ವಂತ್!

ದೊಡ್ಡಬಳ್ಳಾಪುರ: ಪಕ್ಕದ ತಾಲೂಕಿನಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ಬೃಹತ್ ಸಮಾವೇಶ ನಡೆಯುತ್ತಿದೆ ಎಂದು ನೆರೆಯ ತಾಲೂದು ಚಿಕ್ಕಬಳ್ಳಾಪುರದ ದಂಪತಿ ತಮ್ಮ ಪುಟ್ಟ ಕಂದಮ್ಮನ್ನೂ ಕರೆದುಕೊಂಡು ಸಮಾವೇಶಕ್ಕೆ ಬಂದಿದ್ದಾರೆ. ಆದರೆ ಅಲ್ಲೊಂದು ಎಡವಟ್ಟು ನಡೆದಿದೆ. ಅದು ಹೇಗೋ ಆ ಜನಜಂಗುಳಿಯಲ್ಲಿ ಕಂದಮ್ಮ ಅಮ್ಮಅಪ್ಪನಿಂದ ದೂರವಾಗಿದೆ. ಇದೀಗ ಕಂದ ಅಮ್ಮನಿಗಾಗಿ ಹಂಬಲಿಸ್ತಿದೆ

ಸಮಾವೇಶದ ಜನಸ್ತೋಮದಲ್ಲಿ ಅಮ್ಮನ ಕಳೆದುಕೊಂಡು ಕಣ್ಣೀರುಹಾಕಿ ಕಾಯ್ತಿರೋ ಮನ್ವಂತ್, ರಾಧಾ ಮತ್ತು ವೀರಜ್ ದಂಪತಿಯ ಪುತ್ರ. ಚಿಕ್ಕಬಳ್ಳಾಪುರ ಮೂಲದ ಬಾಲಕ ಮನ್ವಂತ್ ವಯಸ್ಸು ಇನ್ನೂ 7 ವರ್ಷ. ಊಟದ ಕೌಂಟರ್ ಬಳಿ ಬಂದ ವೇಳೆ ಅಮ್ಮನಿಂದ ತಪ್ಪಿಸಿಕೊಂಡ ಬಾಲಕ ಮನ್ವಂತ್ ಕಣ್ಣೀರು ಹಾಕುತ್ತಾ ಕಾಯ್ತಿದಾನೆ.

ತಾಜಾ ಮಾಹಿತಿ ಪ್ರಕಾರ ಮಗುವನ್ನು ಅವರ ಊರಿನ ಮಹಿಳೆಯೊಬ್ಬರು ಜೋಪಾನವಾಗಿ ತಮ್ಮ ಜೊತೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.

ವಿದ್ಯುತ್ ತಂತಿ ಸ್ಪರ್ಶಿಸಿ ಕುರಿಗಾಹಿಯ ಮಗು ಸಾವು

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತೆನ್ನಿಹಳ್ಳಿ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಕುರಿಗಾಹಿಯ ಮಗು ಮೃತಪಟ್ಟ ಘಟನೆ ನಡೆದಿದೆ. ಭಾಗ್ಯಶ್ರೀ ಲಾಯಪ್ಪ ಹೂವಣ್ಣನವರ (5) ಮೃತ ಬಾಲಕಿ. ತೆನ್ನಿಹಳ್ಳಿ ಗ್ರಾಮದ ಹೊರ ಭಾಗದಲ್ಲಿ ಕುರಿ ಮೇಯಿಸಲು ತಂದೆ ಲಾಯಪ್ಪನೊಂದಿಗೆ ಮೃತ ಬಾಲಕಿ ಹೋಗಿದ್ದಳು. ಈ ವೇಳೆ ಆಕಸ್ಮಿಕವಾಗಿ ವಿದ್ಯುತ್ ಕಂಬದ ತಂತಿ ಸ್ಪರ್ಶಿಸಿ ಬಾಲಕಿ ಮೃತಪಟ್ಟಿದ್ದಾಳೆ.

ಪ್ರಮುಖ ಸುದ್ದಿಗಳನ್ನೂ ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:02 pm, Sat, 10 September 22

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ