ನೆಲಮಂಗಲ: ಸ್ನೇಹಿತರ ಜೊತೆ ಕ್ರಿಕೆಟ್​ ಆಡುವಾಗ ಕುಸಿದುಬಿದ್ದು ಯುವಕನ ಸಾವು

ನೆಲಮಂಗಲ: ಕ್ರಿಕೆಟ್​ ಆಡುವಾಗ ಮೈದಾನದಲ್ಲಿ ಕುಸಿದುಬಿದ್ದು ವ್ಯಕ್ತಿ ಮೃತಪಟ್ಟಿರುವ ಘಟನೆ ನೆಲಮಂಗಲ ತಾಲೂಕಿನ ದೊಡ್ಡಿರಿ ಗ್ರಾಮದಲ್ಲಿ ನಡೆದಿದೆ. ಕ್ರಿಕೆಟ್​ ಆಡುವಾಗ ಏಕಾಏಕಿ ಕುಸಿದು ಬಿದ್ದು ಪ್ರಶಾಂತ್(32) ಸಾವಿಗೀಡಾಗಿದ್ದಾರೆ. ಮೂಲತಃ ಉಡುಪಿ ಜಿಲ್ಲೆ ಕಾಪು ತಾಲೂಕಿನ ಪಾಂಗಳ ನಿವಾಸಿಯಾದ ಪ್ರಶಾಂತ್, ಡಾಬಸ್‌ಪೇಟೆಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇಂದು ಸ್ನೇಹಿತರ ಜೊತೆ ಕ್ರಿಕೆಟ್ ಆಡುವಾಗ ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲಮಂಗಲ: ಸ್ನೇಹಿತರ ಜೊತೆ ಕ್ರಿಕೆಟ್​ ಆಡುವಾಗ ಕುಸಿದುಬಿದ್ದು ಯುವಕನ ಸಾವು
ಸಾಧು ಶ್ರೀನಾಥ್​

Updated on: Feb 29, 2020 | 4:12 PM

ನೆಲಮಂಗಲ: ಕ್ರಿಕೆಟ್​ ಆಡುವಾಗ ಮೈದಾನದಲ್ಲಿ ಕುಸಿದುಬಿದ್ದು ವ್ಯಕ್ತಿ ಮೃತಪಟ್ಟಿರುವ ಘಟನೆ ನೆಲಮಂಗಲ ತಾಲೂಕಿನ ದೊಡ್ಡಿರಿ ಗ್ರಾಮದಲ್ಲಿ ನಡೆದಿದೆ. ಕ್ರಿಕೆಟ್​ ಆಡುವಾಗ ಏಕಾಏಕಿ ಕುಸಿದು ಬಿದ್ದು ಪ್ರಶಾಂತ್(32) ಸಾವಿಗೀಡಾಗಿದ್ದಾರೆ.

ಮೂಲತಃ ಉಡುಪಿ ಜಿಲ್ಲೆ ಕಾಪು ತಾಲೂಕಿನ ಪಾಂಗಳ ನಿವಾಸಿಯಾದ ಪ್ರಶಾಂತ್, ಡಾಬಸ್‌ಪೇಟೆಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇಂದು ಸ್ನೇಹಿತರ ಜೊತೆ ಕ್ರಿಕೆಟ್ ಆಡುವಾಗ ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 1:32 pm, Sat, 29 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us