AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಸ್ ಪುಲ್ಲಿಂಗ್ ದಂಧೆಕೋರನಿಗೆ ಶಾಕ್: ಕಾರು ಅಡ್ಡಗಟ್ಟಿ ಬರೋಬ್ಬರಿ 1.9 ಕೋಟಿ ರೂ ದರೋಡೆ

ಕಾರು ಅಡ್ಡಗಟ್ಟಿ ಹಲ್ಲೆ ಮಾಡಿ ಬರೋಬ್ಬರಿ 1.09 ಕೋಟಿ ಹಣವನ್ನು 7 ಜನ ದುಷ್ಕರ್ಮಿಗಳು ದರೋಡೆ ಮಾಡಿರುವಂತಹ ಘಟನೆ ಬೆಂಗಳೂರಿನ ಯಲಹಂಕದಿಂದ ಹಣ ಪಡೆದು ವಾಪಸ್ ವೇಳೆ ನಡೆದಿದೆ. ಸದ್ಯ ಬೆಂಗಳೂರಿನ ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದರೋಡೆಕೋರರ ಪತ್ತೆಗೆ ಜಾಲ ಬೀಸಿದ್ದಾರೆ.

ರೈಸ್ ಪುಲ್ಲಿಂಗ್ ದಂಧೆಕೋರನಿಗೆ ಶಾಕ್: ಕಾರು ಅಡ್ಡಗಟ್ಟಿ ಬರೋಬ್ಬರಿ 1.9 ಕೋಟಿ ರೂ ದರೋಡೆ
ದರೋಡೆ ನಡೆದ ಸ್ಥಳ, ಪೊಲೀಸ್ ಠಾಣೆImage Credit source: tv9 kannada
ಗಂಗಾಧರ​ ಬ. ಸಾಬೋಜಿ
|

Updated on: Jun 17, 2026 | 10:10 PM

Share

ನೆಲಮಂಗಲ, ಜೂನ್​ 17: ಬೆಂಗಳೂರು ಹೊರವಲಯದಲ್ಲಿ ಸಿನಿಮಾ ಶೈಲಿಯ ದರೋಡೆ (robbery) ಪ್ರಕರಣವೊಂದು ಬೆಳಕಿಗೆ ಬಂದಿದೆ. ಯಲಹಂಕದಿಂದ ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯನ್ನ ಅಡ್ಡಗಟ್ಟಿದ 7 ಜನ ಮುಸುಕುದಾರಿಗಳ ಗ್ಯಾಂಗ್, ಬಿಯರ್ ಬಾಟಲಿ ಹಾಗೂ ಚಾಕುವಿನಿಂದ ಹಲ್ಲೆ ನಡೆಸಿ ಬರೋಬ್ಬರಿ 1 ಕೋಟಿ 9 ಲಕ್ಷ ರೂ ನಗ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯ ಉತ್ತರ ತಾಲೂಕಿನ ಕುದರಗೆರೆ ಕಾಲೋನಿಯ ಗಣೇಶ ದೇವಾಲಯದ ಬಳಿ ನಡೆದಿದೆ.

ಮುಖ್ಯಾಂಶಗಳು

  • ಕಾರು ಅಡ್ಡಗಟ್ಟಿ ಹಲ್ಲೆ ನಡೆಸಿ 1.09 ಕೋಟಿ ಹಣ ದರೋಡೆ
  • ರಾತ್ರಿ 11 ಗಂಟೆಗೆ 7 ಜನ ದುಷ್ಕರ್ಮಿಗಳಿಂದ ಕೃತ್ಯ
  • ಬೆಂಗಳೂರಿನ ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕಾರು ಅಡ್ಡಗಟ್ಟಿ 7 ಜನ ದುಷ್ಕರ್ಮಿಗಳಿಂದ ದರೋಡೆ

ಆ್ಯಂಟಿಕ್ ವಸ್ತುಗಳ ಮಾರಾಟ ವ್ಯಾಪಾರ ಮಾಡಿಕೊಂಡಿದ್ದ ಶಿವಶಂಕರ್ ಎಂಬಾತನ ಕಾರನ್ನು ಅಡ್ಡಗಟ್ಟಿದ 7 ಜನ ಮುಸುಕುದಾರಿಗಳ ತಂಡ ಶಿವಶಂಕರ್ ಹಾಗೂ ಚಾಲಕನಿಗೆ ಥಳಿಸಿ ಬರೋಬ್ಬರಿ 1 ಕೋಟಿ 9 ಲಕ್ಷ ಹಣವನ್ನ ದರೋಡೆ ಮಾಡಿ ಎಸ್ಕೇಪ್ ಆಗಿದ್ದಾರೆ. ಈ ಘಟನೆ ಕಳೆದ ಸೋಮವಾರ ರಾತ್ರಿ ಸುಮಾರು 11 ಗಂಟೆಯಲ್ಲಿ ನಡೆದಿದ್ದು, ದರೋಡೆಗೊಳಗಾದ ಹಣ ಶಿವಶಂಕರ್​​​​ನದ್ದೇ ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಳೂರು ಏರ್​ಪೋರ್ಟ್​ನಲ್ಲಿ ಕಸ್ಟಮ್ಸ್ ಭರ್ಜರಿ ಬೇಟೆ: 13.14 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ, 6 ಮಂದಿಯ ಬಂಧನ

ಕೋಟ್ಯಂತರ ರೂ ಹಣ ಕಳೆದುಕೊಂಡ ಶಿವಶಂಕರ್ ಹಿನ್ನೆಲೆ ನೋಡುವುದಾದರೆ, ಈ ಹಿಂದೆ ಈತ ರೈಸ್ ಪುಲ್ಲಿಂಗ್ ದಂಧೆಯಲ್ಲಿ ಹಣ ಕಳೆದುಕೊಂಡಿದ್ದ. ಬೆಂಗಳೂರು ನಗರದ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಕೇಸ್ ದಾಖಲಾಗಿದ್ದು, ಜೈಲಿಗೂ ಹೋಗಿ ಬಂದಿದ್ದಾನೆ. ರೈಸ್ ಪುಲ್ಲಿಂಗ್​​ನಲ್ಲಿ ಹಣ ಕಳೆದುಕೊಂಡಿದ್ದರಿಂದ ಹೊಸ ವ್ಯಾಪಾರ ಮಾಡಲು ಮುಂದಾಗಿದ್ದ ಶಿವಶಂಕರ್ ಇತ್ತೀಚೆಗೆ ಆಂಧ್ರ ಮೂಲದ ಮೊಹಮ್ಮದ್ ಪರ್ವೇಜ್ ಹಾಗೂ ಜಿಪ್ಸನ್, ಹೈದರಾಬಾದ್ ಮೂಲದ ಸಲೀಂ ಪ್ಲ್ಯಾನ್​ ಮಾಡಿದ್ದರು.

1.09 ಕೋಟಿ ರೂ. ದರೋಡೆ

ಸೋಮವಾರ ರಾತ್ರಿ ಸಲೀಂನಿಂದ ಪೀಣ್ಯಾ ಬಳಿ 35 ಲಕ್ಷ ರೂ ಪಡೆದು ತನ್ನ ಮನೆಯಲ್ಲಿ ಇಟ್ಟಿದ್ದ ಶಿವಶಂಕರ್, ಬಳಿಕ ಪರ್ವೇಜ್ ಹಾಗೂ ಜಿಪ್ಸನ್‌ನನ್ನು ಭೇಟಿಯಾಗಲು ಯಲಹಂಕಕ್ಕೆ ತೆರಳಿದ್ದನು. ಅಲ್ಲಿ ಅವರಿಂದ 74 ಲಕ್ಷ ರೂ ಹಣವನ್ನು ಪಡೆದು ಕಾರಿನಲ್ಲಿ ವಾಪಸ್ ಬರುತ್ತಿದ್ದಾಗ ದರೋಡೆಕೋರರು ಅಟ್ಯಾಕ್ ಮಾಡಿದ್ದಾರೆ. ಕಾರಿನಲ್ಲಿದ್ದ 74 ಲಕ್ಷ ರೂ ದೋಚಿದ್ದಲ್ಲದೆ, ತಮ್ಮೆನಹಳ್ಳಿಯ ಮನೆಯಲ್ಲಿದ್ದ 35 ಲಕ್ಷ ರೂ ಹಣವನ್ನು ತರಿಸಿಕೊಂಡು ಒಟ್ಟು 1.09 ಕೋಟಿ ರೂ. ದೋಚಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ಡ್ರಗ್ಸ್ ಬೇಟೆ: 5.67 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ, ಕೊಕೇನ್ ಜಪ್ತಿ, ಉಗಾಂಡಾ ಮಹಿಳೆ ಸೇರಿ ಮೂವರ ಬಂಧನ

ಘಟನೆಗೆ ಸಂಬಂಧಿಸಿದಂತೆ ಸದ್ಯ ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಹಲ್ಲೆ ನಡೆಸಿ ಕೋಟ್ಯಂತರ ಹಣದೊಂದಿಗೆ ಪರಾರಿಯಾಗಿರುವ ಆ 7 ಜನ ಮುಸುಕುದಾರಿ ದರೋಡೆಕೋರರ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ.

ವರದಿ: ಮಂಜುನಾಥ್ ಟಿವಿನೈನ್ ನೆಲಮಂಗಲ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ