AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷಾಂತರ ರೂ. ಮೌಲ್ಯದ ಸೀಬೆ ತೋಟ ನಾಶ ಮಾಡಿದ ಬಿಡಿಎ ಅಧಿಕಾರಿಗಳು: ನೋಟಿಸ್ ಬಂದಿಲ್ಲ, ಬಿಡಿಗಾಸು ಕೊಟ್ಟಿಲ್ಲ, ರೈತರು ಆರೋಪ

ರೈತರು ಬೆಳೆದಿದ್ದ ಲಕ್ಷಾಂತರ ಮೌಲ್ಯದ ಸೀಬೆ ತೋಟವನ್ನು ಬಿಡಿಎ ಅಧಿಕಾರಿಗಳು ನಾಶ ಮಾಡಿರುವಂತಹ ಘಟನೆ ಟಿ. ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಷ್ಮೀಪುರ ಹಾಗೂ ಸೋಮಶೆಟ್ಟಹಳ್ಳಿಯಲ್ಲಿ ನಡೆದಿದೆ.

ಲಕ್ಷಾಂತರ ರೂ. ಮೌಲ್ಯದ ಸೀಬೆ ತೋಟ ನಾಶ ಮಾಡಿದ ಬಿಡಿಎ ಅಧಿಕಾರಿಗಳು: ನೋಟಿಸ್ ಬಂದಿಲ್ಲ, ಬಿಡಿಗಾಸು ಕೊಟ್ಟಿಲ್ಲ, ರೈತರು ಆರೋಪ
ಸೀಬೆ ತೋಟ ನಾಶ
ಗಂಗಾಧರ​ ಬ. ಸಾಬೋಜಿ
|

Updated on:Feb 24, 2023 | 5:34 PM

Share

ನೆಲಮಂಗಲ: ರೈತರು ಬೆಳೆದಿದ್ದ ಲಕ್ಷಾಂತರ ಮೌಲ್ಯದ ಸೀಬೆ ತೋಟ (Guava plantation) ವನ್ನು ಬಿಡಿಎ ಅಧಿಕಾರಿಗಳು ನಾಶ ಮಾಡಿರುವಂತಹ ಘಟನೆ ಟಿ. ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಷ್ಮೀಪುರ ಹಾಗೂ ಸೋಮಶೆಟ್ಟಹಳ್ಳಿಯಲ್ಲಿ ನಡೆದಿದೆ. ಶಿವರಾಮ್ ಕಾರಂತ ಬಡಾವಣೆಯ ಭೂಮಿ ವಶಕ್ಕೆ ಪಡೆಯಲು ಬಿಡಿಎ ಅಧಿಕಾರಿಗಳು ಮುಂದಾಗಿದ್ದಾರೆ. ಯಾವುದೇ ನೋಟಿಸ್ ನೀಡದೆ, ಸುಪ್ರೀಂ ಕೋರ್ಟ್ ಆದೇಶ ಇದೆ ಎಂದು ಹೇಳಿ ಜೆಸಿಬಿಗಳ ಮೂಲಕ ಸೀಬೆ ಮರಗಳನ್ನು ನಾಶ ಮಾಡಿದ್ದಾರೆ. ಇತ್ತ ತೋಟ ಕಳೆದುಕೊಂಡ ರೈತರು ಅಧಿಕಾರಿಗಳ ನಡೆಗೆ ಹಿಡಿಶಾಪ ಹಾಕುತ್ತಿದ್ದಾರೆ. ನಮಗೆ ಯಾವುದೇ ನೋಟಿಸ್ ಬಂದಿಲ್ಲ, ಬಿಡಿಗಾಸು ಪರಿಹಾರ ಕೊಟ್ಟಿಲ್ಲ ಎಂದು ರೈತರು ಆರೋಪಿಸುತ್ತಿದ್ದಾರೆ. ಪರಿಹಾರ ನೀಡಿ ಭೂಮಿ ವಶ ಪಡಿಸಿಕೊಳ್ಳುವಂತೆ ರೈತರು ಆಗ್ರಹಿಸುತ್ತಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ತೋರಿಸಿ ತೆರವು ಕಾರ್ಯಾಚರಣೆ ಮಾಡುವಂತೆ ಆಗ್ರಹಿಸಿದ ಕೆಲ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಪೊಲೀಸರ ಬಿಗಿ ಭದ್ರತೆಯಲ್ಲಿ ಬಿಡಿಎ ಅಧಿಕಾರಿಗಳು ತೆರವು ಕಾರ್ಯಚರಣೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ: Doddaballapura: ದೇವಾಲಯಕ್ಕೆ ಮಾಂಸದ ಹಾರ ತಂದುಕೊಟ್ಟ ಕಿಡಿಗೇಡಿಗಳು, ಗರ್ಭಗುಡಿ ಸೇರುವ ಮುನ್ನವೇ ಬಯಲಿಗೆ ಬಂತು ಹಾರದ ಅಸಲಿಯತ್ತು

ಹೊಲಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಬಿಳಿ ಜೋಳ ಸುಟ್ಟು ಕರಕಲು  

ಗದಗ: ಕಿಡಿಗೇಡಿಗಳು ಹೊಲಕ್ಕೆ ಬೆಂಕಿ ಹಚ್ಚಿದ ಪರಿಣಾಮ ಅಪಾರ ಪ್ರಮಾಣದ ಬಿಳಿ ಜೋಳ ಸುಟ್ಟು ಕರಕಲಾಗಿರುವಂತಹ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದಲ್ಲಿ ನಡೆದಿದೆ. ಶಂಕ್ರಪ್ಪ, ಬಸಪ್ಪ, ಈರಪ್ಪ, ರಾಮಣ್ಣ ಕೊತಂಬರಿ ಎಂಬ ಸಹೋದರರಿಗೆ ಸೇರಿದ ಜಮೀನು. ಕಿಡಿಗೇಡಿಗಳಿಂದ ಪಕ್ಕದ ಪಾಳುಬಿದ್ದ ಜಮೀನಿಗೆ ಬೆಂಕಿ ಹಚ್ಚಿದ್ದು, ಅಲ್ಲಿಂದ ಬಿಳಿ ಜೋಳದ ಹೊಲಕ್ಕೆ ಬೆಂಕಿ ತಗುಲಿರೋ ಶಂಕೆ ವ್ಯಕ್ತವಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದು ರೈತರು ಕಂಗಾಲಾಗಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಇದನ್ನೂಓದಿ: ಜನ ಮರುಳೋ ಜಾತ್ರೆ ಮರುಳೋ: ಅಮಾವಾಸ್ಯೆ ದಿನ 300 ವರ್ಷ ಹಳೆಯ ಮರಕ್ಕೆ ಹರಕೆ ಕಟ್ಟಿ ಮಹಿಳೆಯರಿಂದ ಪ್ರದಕ್ಷಿಣೆ

ಆಕಸ್ಮಿಕ ಅಗ್ನಿ ಅವಘಡ-2 ಮೊಬೈಲ್ ಅಂಗಡಿಗಳು ಬೆಂಕಿಗಾಹುತಿ

ದೇವನಹಳ್ಳಿ: ಆಕಸ್ಮಿಕವಾಗಿ ಬೆಂಕಿ ತಗುಲಿ ಎರಡು ಮೊಬೈಲ್ ಅಂಗಡಿಗಳು ಬೆಂಕಿಗೆ ಆಹುತಿಯಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಬಸ್ ನಿಲ್ದಾಣದಲ್ಲಿ ನಡೆದಿದೆ. ಕೆಎಸ್​​ಆರ್​ಟಿಸಿ ಕಚೇರಿಯಲ್ಲಿನ ಎರಡು ಮೊಬೈಲ್ ಅಂಗಡಿಗಳಿಗೆ ಬೆಂಕಿ ತಗುಲುತ್ತಿದ್ದಂತೆ ಭೀತಿಗೊಂಡ ಜನರು ಅಂಗಡಿಗಳಿಂದ ಹೊರಬಂದಿದ್ದಾರೆ. ಕೂಡಲೇ ಎಚ್ಚೆತ್ತ ಸ್ಥಳೀಯರು ಹಾಗೂ ಪೊಲೀಸರು ಟ್ಯಾಂಕರ್ ಮೂಲಕ ಬೆಂಕಿ ನಂದಿಸಿದ್ದಾರೆ. ಅದಾಗ್ಯೂ, ಅಂಗಡಿಯಲ್ಲಿದ್ದ ಮೊಬೈಲ್​ಗಳು ಸಂಪೂರ್ಣ ಸುಟ್ಟು ಕರಕಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:34 pm, Fri, 24 February 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?