AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದನಪುರ ಗ್ರಾಮದಲ್ಲಿ ವಾಟರ್ ಫಿಲ್ಟರ್ ಪಾಲಿಟಿಕ್ಸ್: ಸಚಿವ ಎಂಟಿಬಿ ನಾಗರಾಜ್ ಮತ್ತು ಶಾಸಕ ಶರತ್ ಬೆಂಬಲಿಗರ ಮಧ್ಯೆ ಗಲಾಟೆ

MTB Nagaraj: ಸಚಿವ ನಾಗರಾಜ್ ಬೆಂಬಲಿಗ ಸಂತೋಷ್ ಗಲಾಟೆ ಬಳಿಕ, ಶಾಸಕರ ಸಹಯೋಗದೊಂದಿಗೆ ವಾಟರ್ ಫಿಲ್ಟರ್ ಕಟ್ಟಡ ಕಟ್ಟುತ್ತಿದ್ದರೂ ರಾಜಕೀಯ ಮಾಡ್ತಿದ್ದಾರೆ ಅಂತಾ ಶರತ್ ಬೆಂಬಲಿಗರು ಆಕ್ರೋಶಗೊಂಡಿದ್ದಾರೆ.

ಸಿದ್ದನಪುರ ಗ್ರಾಮದಲ್ಲಿ ವಾಟರ್ ಫಿಲ್ಟರ್ ಪಾಲಿಟಿಕ್ಸ್: ಸಚಿವ ಎಂಟಿಬಿ ನಾಗರಾಜ್ ಮತ್ತು ಶಾಸಕ ಶರತ್ ಬೆಂಬಲಿಗರ ಮಧ್ಯೆ ಗಲಾಟೆ
ಸಿದ್ದನಪುರ ಗ್ರಾಮದಲ್ಲಿ ವಾಟರ್ ಫಿಲ್ಟರ್ ಪಾಲಿಟಿಕ್ಸ್: ಸಚಿವ ಎಂಟಿಬಿ ನಾಗರಾಜ್ ಮತ್ತು ಶಾಸಕ ಶರತ್ ಬೆಂಬಲಿಗರ ಮಧ್ಯೆ ಗಲಾಟೆ
TV9 Web
| Edited By: ಸಾಧು ಶ್ರೀನಾಥ್​|

Updated on: Aug 07, 2021 | 9:50 AM

Share

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸಿದ್ದನಪುರ ಗ್ರಾಮದಲ್ಲಿ ಸಚಿವ ಎಂಟಿಬಿ ನಾಗರಾಜ್ ಮತ್ತು ಶಾಸಕ ಶರತ್ ಬೆಂಬಲಿಗರ ಮಧ್ಯೆ ಗಲಾಟೆ ವಾಟರ್ ಫಿಲ್ಟರ್ ಪಾಲಿಟಿಕ್ಸ್ ನಡೆದಿದೆ. ಇದರಿಂದ ಎರಡು ಗುಂಪುಗಳ ನಡುವೆ ಗಲಾಟೆಗಳು ನಡೆದಿವೆ.

ರಸ್ತೆ ಜಾಗದಲ್ಲಿ ವಾಟರ್ ಫಿಲ್ಟರ್ ಕಟ್ಟುತ್ತಿರುವ ಆರೋಪ ಕೇಳಿಬಂದಿದೆ. ಇದನ್ನು ವಿರೋಧಿಸಿ ವಾಟರ್ ಫಿಲ್ಟರ್ ಕಟ್ಟಡದ ಗೋಡೆ ಒಡೆದು ಗಲಾಟೆ ಮಾಡಲಾಗಿದೆ. ಸಚಿವ ಎಂಟಿಬಿ ನಾಗರಾಜ್ ಬೆಂಬಲಿಗರಿಂದ ಗಲಾಟೆ ನಡೆದಿದೆ. ಆಗ ಎಂಟಿಬಿ ನಾಗರಾಜ್ ಬೆಂಬಲಿಗರ ನಡೆಗೆ ಶರತ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಶಾಸಕ‌ ಶರತ್ ಬೆಂಬಲಿಗರು ರಸ್ತೆ ಬದಿಯ ಖಾಲಿ ನಿವೇಶನದಲ್ಲಿ ವಾಟರ್ ಫಿಲ್ಟರ್ ಕಟ್ಟಡ‌ ಕಟ್ಟಿಸುತ್ತಿದ್ದರು. ಈ‌ ವೇಳೆ, ಅದು ರಸ್ತೆ ಜಾಗ ಎಂದು ಬಿಎಂಆರ್​​ಡಿಎ ಸದಸ್ಯ ಮತ್ತು ಸಚಿವ ಎಂಟಿಬಿ ನಾಗರಾಜ್ ಬೆಂಬಲಿಗ ಸಂತೋಷ್ ಗಲಾಟೆ ಮಾಡಿದ್ದಾನೆ, ರಸ್ತೆ ಜಾಗದಲ್ಲಿ ಕಟ್ತಿದ್ದೀರಾ? ಅಂತಾ ಗಡಾರಿ‌ಯಿಂದ ಗೋಡೆ ಹೊಡೆದು ಗಲಾಟೆ ಎಬ್ಬಿಸಿದ್ದಾನೆ. ಗೋಡೆ ಹೊಡೆಯುವ ದೃಶ್ಯ ಸ್ಥಳಿಯರ ಮೊಬೈಲ್‌ ನಲ್ಲಿ ಸೆರೆಯಾಗಿದೆ.

ಸಚಿವ ನಾಗರಾಜ್ ಬೆಂಬಲಿಗ ಸಂತೋಷ್ ಗಲಾಟೆ ಬಳಿಕ, ಶಾಸಕರ ಸಹಯೋಗದೊಂದಿಗೆ ವಾಟರ್ ಫಿಲ್ಟರ್ ಕಟ್ಟಡ ಕಟ್ಟುತ್ತಿದ್ದರೂ ರಾಜಕೀಯ ಮಾಡ್ತಿದ್ದಾರೆ ಅಂತಾ ಶರತ್ ಬೆಂಬಲಿಗರು ಆಕ್ರೋಶಗೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಎಸ್ಪಿ ಕೋನವಂಶಿ ಕೃಷ್ಣಗೆ ನೂತನ ಸಚಿವ ಎಂಟಿಬಿ ನಾಗರಾಜ್ ಫುಲ್​ ಕ್ಲಾಸ್

(Minister MTB Nagaraj and MLA Sharath Bachegowda supporters indulge in fight at siddapura hoskote)

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್