AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದನಪುರ ಗ್ರಾಮದಲ್ಲಿ ವಾಟರ್ ಫಿಲ್ಟರ್ ಪಾಲಿಟಿಕ್ಸ್: ಸಚಿವ ಎಂಟಿಬಿ ನಾಗರಾಜ್ ಮತ್ತು ಶಾಸಕ ಶರತ್ ಬೆಂಬಲಿಗರ ಮಧ್ಯೆ ಗಲಾಟೆ

MTB Nagaraj: ಸಚಿವ ನಾಗರಾಜ್ ಬೆಂಬಲಿಗ ಸಂತೋಷ್ ಗಲಾಟೆ ಬಳಿಕ, ಶಾಸಕರ ಸಹಯೋಗದೊಂದಿಗೆ ವಾಟರ್ ಫಿಲ್ಟರ್ ಕಟ್ಟಡ ಕಟ್ಟುತ್ತಿದ್ದರೂ ರಾಜಕೀಯ ಮಾಡ್ತಿದ್ದಾರೆ ಅಂತಾ ಶರತ್ ಬೆಂಬಲಿಗರು ಆಕ್ರೋಶಗೊಂಡಿದ್ದಾರೆ.

ಸಿದ್ದನಪುರ ಗ್ರಾಮದಲ್ಲಿ ವಾಟರ್ ಫಿಲ್ಟರ್ ಪಾಲಿಟಿಕ್ಸ್: ಸಚಿವ ಎಂಟಿಬಿ ನಾಗರಾಜ್ ಮತ್ತು ಶಾಸಕ ಶರತ್ ಬೆಂಬಲಿಗರ ಮಧ್ಯೆ ಗಲಾಟೆ
ಸಿದ್ದನಪುರ ಗ್ರಾಮದಲ್ಲಿ ವಾಟರ್ ಫಿಲ್ಟರ್ ಪಾಲಿಟಿಕ್ಸ್: ಸಚಿವ ಎಂಟಿಬಿ ನಾಗರಾಜ್ ಮತ್ತು ಶಾಸಕ ಶರತ್ ಬೆಂಬಲಿಗರ ಮಧ್ಯೆ ಗಲಾಟೆ
TV9 Web
| Edited By: |

Updated on: Aug 07, 2021 | 9:50 AM

Share

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸಿದ್ದನಪುರ ಗ್ರಾಮದಲ್ಲಿ ಸಚಿವ ಎಂಟಿಬಿ ನಾಗರಾಜ್ ಮತ್ತು ಶಾಸಕ ಶರತ್ ಬೆಂಬಲಿಗರ ಮಧ್ಯೆ ಗಲಾಟೆ ವಾಟರ್ ಫಿಲ್ಟರ್ ಪಾಲಿಟಿಕ್ಸ್ ನಡೆದಿದೆ. ಇದರಿಂದ ಎರಡು ಗುಂಪುಗಳ ನಡುವೆ ಗಲಾಟೆಗಳು ನಡೆದಿವೆ.

ರಸ್ತೆ ಜಾಗದಲ್ಲಿ ವಾಟರ್ ಫಿಲ್ಟರ್ ಕಟ್ಟುತ್ತಿರುವ ಆರೋಪ ಕೇಳಿಬಂದಿದೆ. ಇದನ್ನು ವಿರೋಧಿಸಿ ವಾಟರ್ ಫಿಲ್ಟರ್ ಕಟ್ಟಡದ ಗೋಡೆ ಒಡೆದು ಗಲಾಟೆ ಮಾಡಲಾಗಿದೆ. ಸಚಿವ ಎಂಟಿಬಿ ನಾಗರಾಜ್ ಬೆಂಬಲಿಗರಿಂದ ಗಲಾಟೆ ನಡೆದಿದೆ. ಆಗ ಎಂಟಿಬಿ ನಾಗರಾಜ್ ಬೆಂಬಲಿಗರ ನಡೆಗೆ ಶರತ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಶಾಸಕ‌ ಶರತ್ ಬೆಂಬಲಿಗರು ರಸ್ತೆ ಬದಿಯ ಖಾಲಿ ನಿವೇಶನದಲ್ಲಿ ವಾಟರ್ ಫಿಲ್ಟರ್ ಕಟ್ಟಡ‌ ಕಟ್ಟಿಸುತ್ತಿದ್ದರು. ಈ‌ ವೇಳೆ, ಅದು ರಸ್ತೆ ಜಾಗ ಎಂದು ಬಿಎಂಆರ್​​ಡಿಎ ಸದಸ್ಯ ಮತ್ತು ಸಚಿವ ಎಂಟಿಬಿ ನಾಗರಾಜ್ ಬೆಂಬಲಿಗ ಸಂತೋಷ್ ಗಲಾಟೆ ಮಾಡಿದ್ದಾನೆ, ರಸ್ತೆ ಜಾಗದಲ್ಲಿ ಕಟ್ತಿದ್ದೀರಾ? ಅಂತಾ ಗಡಾರಿ‌ಯಿಂದ ಗೋಡೆ ಹೊಡೆದು ಗಲಾಟೆ ಎಬ್ಬಿಸಿದ್ದಾನೆ. ಗೋಡೆ ಹೊಡೆಯುವ ದೃಶ್ಯ ಸ್ಥಳಿಯರ ಮೊಬೈಲ್‌ ನಲ್ಲಿ ಸೆರೆಯಾಗಿದೆ.

ಸಚಿವ ನಾಗರಾಜ್ ಬೆಂಬಲಿಗ ಸಂತೋಷ್ ಗಲಾಟೆ ಬಳಿಕ, ಶಾಸಕರ ಸಹಯೋಗದೊಂದಿಗೆ ವಾಟರ್ ಫಿಲ್ಟರ್ ಕಟ್ಟಡ ಕಟ್ಟುತ್ತಿದ್ದರೂ ರಾಜಕೀಯ ಮಾಡ್ತಿದ್ದಾರೆ ಅಂತಾ ಶರತ್ ಬೆಂಬಲಿಗರು ಆಕ್ರೋಶಗೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಎಸ್ಪಿ ಕೋನವಂಶಿ ಕೃಷ್ಣಗೆ ನೂತನ ಸಚಿವ ಎಂಟಿಬಿ ನಾಗರಾಜ್ ಫುಲ್​ ಕ್ಲಾಸ್

(Minister MTB Nagaraj and MLA Sharath Bachegowda supporters indulge in fight at siddapura hoskote)

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ