AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದನಪುರ ಗ್ರಾಮದಲ್ಲಿ ವಾಟರ್ ಫಿಲ್ಟರ್ ಪಾಲಿಟಿಕ್ಸ್: ಸಚಿವ ಎಂಟಿಬಿ ನಾಗರಾಜ್ ಮತ್ತು ಶಾಸಕ ಶರತ್ ಬೆಂಬಲಿಗರ ಮಧ್ಯೆ ಗಲಾಟೆ

MTB Nagaraj: ಸಚಿವ ನಾಗರಾಜ್ ಬೆಂಬಲಿಗ ಸಂತೋಷ್ ಗಲಾಟೆ ಬಳಿಕ, ಶಾಸಕರ ಸಹಯೋಗದೊಂದಿಗೆ ವಾಟರ್ ಫಿಲ್ಟರ್ ಕಟ್ಟಡ ಕಟ್ಟುತ್ತಿದ್ದರೂ ರಾಜಕೀಯ ಮಾಡ್ತಿದ್ದಾರೆ ಅಂತಾ ಶರತ್ ಬೆಂಬಲಿಗರು ಆಕ್ರೋಶಗೊಂಡಿದ್ದಾರೆ.

ಸಿದ್ದನಪುರ ಗ್ರಾಮದಲ್ಲಿ ವಾಟರ್ ಫಿಲ್ಟರ್ ಪಾಲಿಟಿಕ್ಸ್: ಸಚಿವ ಎಂಟಿಬಿ ನಾಗರಾಜ್ ಮತ್ತು ಶಾಸಕ ಶರತ್ ಬೆಂಬಲಿಗರ ಮಧ್ಯೆ ಗಲಾಟೆ
ಸಿದ್ದನಪುರ ಗ್ರಾಮದಲ್ಲಿ ವಾಟರ್ ಫಿಲ್ಟರ್ ಪಾಲಿಟಿಕ್ಸ್: ಸಚಿವ ಎಂಟಿಬಿ ನಾಗರಾಜ್ ಮತ್ತು ಶಾಸಕ ಶರತ್ ಬೆಂಬಲಿಗರ ಮಧ್ಯೆ ಗಲಾಟೆ
TV9 Web
| Updated By: ಸಾಧು ಶ್ರೀನಾಥ್​|

Updated on: Aug 07, 2021 | 9:50 AM

Share

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸಿದ್ದನಪುರ ಗ್ರಾಮದಲ್ಲಿ ಸಚಿವ ಎಂಟಿಬಿ ನಾಗರಾಜ್ ಮತ್ತು ಶಾಸಕ ಶರತ್ ಬೆಂಬಲಿಗರ ಮಧ್ಯೆ ಗಲಾಟೆ ವಾಟರ್ ಫಿಲ್ಟರ್ ಪಾಲಿಟಿಕ್ಸ್ ನಡೆದಿದೆ. ಇದರಿಂದ ಎರಡು ಗುಂಪುಗಳ ನಡುವೆ ಗಲಾಟೆಗಳು ನಡೆದಿವೆ.

ರಸ್ತೆ ಜಾಗದಲ್ಲಿ ವಾಟರ್ ಫಿಲ್ಟರ್ ಕಟ್ಟುತ್ತಿರುವ ಆರೋಪ ಕೇಳಿಬಂದಿದೆ. ಇದನ್ನು ವಿರೋಧಿಸಿ ವಾಟರ್ ಫಿಲ್ಟರ್ ಕಟ್ಟಡದ ಗೋಡೆ ಒಡೆದು ಗಲಾಟೆ ಮಾಡಲಾಗಿದೆ. ಸಚಿವ ಎಂಟಿಬಿ ನಾಗರಾಜ್ ಬೆಂಬಲಿಗರಿಂದ ಗಲಾಟೆ ನಡೆದಿದೆ. ಆಗ ಎಂಟಿಬಿ ನಾಗರಾಜ್ ಬೆಂಬಲಿಗರ ನಡೆಗೆ ಶರತ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಶಾಸಕ‌ ಶರತ್ ಬೆಂಬಲಿಗರು ರಸ್ತೆ ಬದಿಯ ಖಾಲಿ ನಿವೇಶನದಲ್ಲಿ ವಾಟರ್ ಫಿಲ್ಟರ್ ಕಟ್ಟಡ‌ ಕಟ್ಟಿಸುತ್ತಿದ್ದರು. ಈ‌ ವೇಳೆ, ಅದು ರಸ್ತೆ ಜಾಗ ಎಂದು ಬಿಎಂಆರ್​​ಡಿಎ ಸದಸ್ಯ ಮತ್ತು ಸಚಿವ ಎಂಟಿಬಿ ನಾಗರಾಜ್ ಬೆಂಬಲಿಗ ಸಂತೋಷ್ ಗಲಾಟೆ ಮಾಡಿದ್ದಾನೆ, ರಸ್ತೆ ಜಾಗದಲ್ಲಿ ಕಟ್ತಿದ್ದೀರಾ? ಅಂತಾ ಗಡಾರಿ‌ಯಿಂದ ಗೋಡೆ ಹೊಡೆದು ಗಲಾಟೆ ಎಬ್ಬಿಸಿದ್ದಾನೆ. ಗೋಡೆ ಹೊಡೆಯುವ ದೃಶ್ಯ ಸ್ಥಳಿಯರ ಮೊಬೈಲ್‌ ನಲ್ಲಿ ಸೆರೆಯಾಗಿದೆ.

ಸಚಿವ ನಾಗರಾಜ್ ಬೆಂಬಲಿಗ ಸಂತೋಷ್ ಗಲಾಟೆ ಬಳಿಕ, ಶಾಸಕರ ಸಹಯೋಗದೊಂದಿಗೆ ವಾಟರ್ ಫಿಲ್ಟರ್ ಕಟ್ಟಡ ಕಟ್ಟುತ್ತಿದ್ದರೂ ರಾಜಕೀಯ ಮಾಡ್ತಿದ್ದಾರೆ ಅಂತಾ ಶರತ್ ಬೆಂಬಲಿಗರು ಆಕ್ರೋಶಗೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಎಸ್ಪಿ ಕೋನವಂಶಿ ಕೃಷ್ಣಗೆ ನೂತನ ಸಚಿವ ಎಂಟಿಬಿ ನಾಗರಾಜ್ ಫುಲ್​ ಕ್ಲಾಸ್

(Minister MTB Nagaraj and MLA Sharath Bachegowda supporters indulge in fight at siddapura hoskote)

ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ರಾಹುಲ್ ಗಾಂಧಿ ತಮ್ಮ ಆಕಾಂಕ್ಷೆಯನ್ನು ತ್ಯಾಗಮಾಡಬಹುದು: ರಾಯರೆಡ್ಡಿ
ರಾಹುಲ್ ಗಾಂಧಿ ತಮ್ಮ ಆಕಾಂಕ್ಷೆಯನ್ನು ತ್ಯಾಗಮಾಡಬಹುದು: ರಾಯರೆಡ್ಡಿ