AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ ಹೆಸರಲ್ಲಿ ಅತ್ಯಾಚಾರಕ್ಕೆ ಪ್ಲ್ಯಾನ್​: ಬಾಲಕಿ ಕರೆದೊಯ್ಯುತ್ತಿದ್ದ ವೇಳೆ ನಡೆದಿದ್ದು ದುರಂತ

ಬೈಕ್​ ಅಪಘಾತದಲ್ಲಿ ಬಾಲಕಿ ದುರ್ಮರಣ ಹೊಂದಿರುವ ಘಟನೆ ಹೊಸಕೋಟೆ ಪಟ್ಟಣ ಬಳಿ ನಡೆದಿದೆ. ಒಂದೇ ಬೈಕ್​ನಲ್ಲಿ ಮೂವರು ಪ್ರಯಾಣಿಸುವಾಗ ಅಪಘಾತ ನಡೆದಿದ್ದು, ಅಪ್ರಾಪ್ತೆಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಉದ್ದೇಶದಿಂದ ಬಲವಂತವಾಗಿ ಕರೆದೊಯ್ಯಲಾಗುತ್ತಿತ್ತು ಎಂಬ ವಿಷಯ ತನಿಖೆ ವೇಳೆ ಗೊತ್ತಾಗಿದೆ. ಘಟನೆ ಸಂಬಂಧ 4 ಜನ ಆರೋಪಿಗಳನ್ನ ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಪ್ರೀತಿ ಹೆಸರಲ್ಲಿ ಅತ್ಯಾಚಾರಕ್ಕೆ ಪ್ಲ್ಯಾನ್​: ಬಾಲಕಿ ಕರೆದೊಯ್ಯುತ್ತಿದ್ದ ವೇಳೆ ನಡೆದಿದ್ದು ದುರಂತ
ಸಾಂದರ್ಭಿಕ ಚಿತ್ರ
ರಾಮು, ಆನೇಕಲ್​
| Edited By: |

Updated on: Oct 28, 2025 | 3:19 PM

Share

ಬೆಂಗಳೂರು, ಅಕ್ಟೋಬರ್​ 28: ಅತ್ಯಾಚಾರ ಎಸಗುವ ಉದ್ದೇಶದಿಂದ ಅಪ್ರಾಪ್ತೆಯನ್ನು ಬಲವಂತವಾಗಿ ಕರೆದೊಯ್ಯುವ ವೇಳೆ ಡಿವೈಡರ್​ಗೆ ಬೈಕ್​ ಡಿಕ್ಕಿಯಾಗಿ  ಬಾಲಕಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪಟ್ಟಣ ಬಳಿ ನಡೆದಿದೆ. ಪ್ರೀತಿ ಹೆಸರಿನಲ್ಲಿ ಸರ್ಕಾರಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಬಾಲಕಿ ಹಿಂದೆ ಬಿದ್ದಿದ್ದ ಅಜಯ್​ ಎಂಬಾತ ತನ್ನ ಸಹಚರರ ಜೊತೆಗೂಡಿ ಬಾಲಕಿಯನ್ನ ಲೈಂಗಿಕವಾಗಿ ಬಳಸಿಕೊಳ್ಳಲು ಕರೆದೊಯ್ಯುತ್ತಿದ್ದ ಎನ್ನಲಾಗಿದೆ.

ಆರೋಪಿಗಳು ಒಟ್ಟು 2 ಬೈಕ್​ನಲ್ಲಿ ತೆರಳಿದ್ದು, ಆ ಪೈಕಿ ಒಂದು ಬೈಕ್​ನಲ್ಲಿ ಅಜಯ್​, ಬಾಲಕಿ ಮತ್ತು ಇನ್ನೊಬ್ಬ ಇದ್ದ ಎನ್ನಲಾಗಿದೆ. ಹೊಸಕೋಟೆ ಮಾರ್ಗವಾಗಿ ಬಾಲಕಿಯನ್ನು ಕರೆದೊಯ್ಯುತ್ತಿದ್ದ ವೇಳೆ ಅಪಘಾತ ನಡೆದಿದ್ದು, ಈ ವೇಳೆ ಬಾಲಕಿ ಸಾವನ್ನಪ್ಪಿದ್ದಾಳೆ. ಬೈಕ್​ನಲ್ಲಿದ್ದ ಉಳಿದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಕ್ಟೋಬರ್​​ 24ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇನ್ನು ಶಾಲೆಗೆ ಹೋದ ಬಾಲಕಿ ಮನೆಗೆ ವಾಪಾಸ್ ಬಾರದೆ ಇದ್ದಾಗ ಪೋಷಕರು ಕಂಗಾಲಾಗಿದ್ದು, ಈ ಬಗ್ಗೆ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಕೇಸ್ ದಾಖಲಿಸಿದ್ದರು. ಅದೇ ದಿನ ಸಂಜೆ ಹೊಸಕೋಟೆ ಪೊಲೀಸರಿಂದ ಬಾಲಕಿ ಪೋಷಕರಿಗೆ ಕರೆ ಬಂದಿದ್ದು, ನಿಮ್ಮ ಮಗಳು ಅಪಘಾತದಲ್ಲಿ ಮೃತಪಟ್ಟಿದ್ದಾಳೆಂದು ಮಾಹಿತಿ ನೀಡಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬ್ರೆಜಿಲ್ ಮಾಡೆಲ್​​​ಗೆ ಲೈಂಗಿಕ ಕಿರುಕುಳ: ಆಗಿದ್ದೇನು?

ಬಲವಂತವಾಗಿ ಕರೆದೊಯ್ದು ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನ ಆರೋಪ ಹಿನ್ನಲೆ ಅಜಯ್ ಅಲಿಯಾಸ್ ಮನೋಜ್, ಇರ್ಫಾನ್, ಮುಬಾರಕ್ ಸೇರಿ ಓರ್ವ ಅಪ್ರಾಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಅಪಹರಣ ಹಾಗೂ ಪೋಕ್ಸೋ ಪ್ರಕರಣದಡಿ ಆರೋಪಿಗಳನ್ನ ಅರೆಸ್ಟ್​ ಮಾಡಲಾಗಿದ್ದು, ಬಂಧಿತರನ್ನ ಜೈಲಿಗೆ ಅಟ್ಟಲಾಗಿದೆ. ಬದುಕಿ ಬಾಳಬೇಕಿದ್ದ ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ತಾಯಿಗೆ ಬೈದಿದ್ದಕ್ಕೆ ಸಂಬಂಧಿ ಯುವಕನ ಹತ್ಯೆ

ತಾಯಿಗೆ ಬೈದಿದ್ದಾನೆ ಎಂಬ ಕಾರಣಕ್ಕೆ ಸಂಬಂಧಿ ಯುವಕನನ್ನ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಉಲ್ಲಾಳ ಉಪನಗರದ ರಾಮಚಂದ್ರಪ್ಪ ಲೇಔಟ್​ನಲ್ಲಿ ನಡೆದಿದೆ. ಅವಿನಾಶ್​(36) ಮೃತ ಯುವಕನಾಗಿದ್ದು, ಕುಡಿದು ಬಂದು ಅವಾಚ್ಯ ಶಬ್ದದಿಂದ ಬೈದಿದ್ದಲ್ಲದೆ ಕಬ್ಬಿಣದ ರಾಡ್​ನಿಂದ ಹೊಡೆದು ಕಾರ್ತಿಕ್​ ಎಂಬಾತ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಜ್ಞಾನಭಾರತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!