AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೈಂಗೆ ತವರಾಗುತ್ತಿರುವ ಆನೇಕಲ್! ಕೇಂದ್ರ ಸಚಿವರ ಮನೆಯ ಮುಂದೆಯೇ ಕಾರು ಅಡ್ಡಗಟ್ಟಿ ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ

ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಮನೆ ಮುಂದೆಯೇ ಈ ಕೊಲೆ ನಡೆದಿದೆ. ಇನ್ನು ಕೊಲೆಯಾದ ರಾಜಶೇಖರ್ ರೆಡ್ಡಿ, ಹಲವು ದಾಖಲೆಗಳನ್ನು ಕೊಂಡೊಯ್ಯುತ್ತಿದ್ದರಂತೆ. ಈ ವೇಳೆ, ದುಷ್ಕರ್ಮಿಗಳು ದಾಳಿ ಮಾಡಿ ಕೊಂದಿರೋದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಕ್ರೈಂಗೆ ತವರಾಗುತ್ತಿರುವ ಆನೇಕಲ್! ಕೇಂದ್ರ ಸಚಿವರ ಮನೆಯ ಮುಂದೆಯೇ ಕಾರು ಅಡ್ಡಗಟ್ಟಿ ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ
Murder: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಮನೆ ಮುಂದೆಯೇ ಕಾರು ಅಡ್ಡಗಟ್ಟಿ ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ
TV9 Web
| Updated By: ಸಾಧು ಶ್ರೀನಾಥ್​|

Updated on:Jan 06, 2022 | 11:41 AM

Share

ಆನೇಕಲ್… ರಾಜಧಾನಿ ಬೆಂಗಳೂರಿಗೆ ಅಂಟಿಕೊಂಡಿರುವ ಪುಟ್ಟ ತಾಲೂಕು ಕೇಂದ್ರ. ಆದರೆ ಈ ಆನೇಕಲ್​ನಲ್ಲಿ ಪಾತಕಿಗಳು ಕಾಲೂರಿದ್ದಾರೆ. ದಿನೇ ದಿನೆ ಇಲ್ಲಿ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿವೆ. ರಿಯಲ್​ ಎಸ್ಟೇಟ್​ಗೆ ಪ್ರಶಸ್ತವಾಗಿರುವ ಆನೇಕಲ್​ ಅದರಿಂದಲೇ ಅಪರಾಧ ಕೃತ್ಯಗಳಿಗೆ ಕುಮ್ಮಕ್ಕು ಪಡೆಯುತ್ತಿದೆ. ಆನೇಕಲ್​ನಲ್ಲಿ ಸರಣಿ ಹತ್ಯಾ ಪ್ರಕರಣಗಳು ಅಬಾಧಿತವಾಗಿ ನಡೆದಿದ್ದು, ತಾಜಾ ಆಗಿ ಕೇಂದ್ರ ಸಚಿವರ ಮನೆಯೆದುರೇ ರಿಯಲ್ ಎಸ್ಟೇಟ್ ಉದ್ಯಮಿಯ ಭಯಾನಕ ಹತ್ಯೆಯಾಗಿದೆ. ಕಾರು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್​ನಲ್ಲಿ ನಡೆದಿದೆ. ರಾಜಶೇಖರ್ ರೆಡ್ಡಿ ಕೊಲೆಯಾದ ವ್ಯಕ್ತಿ.

ರಾತ್ರಿ 8 ಗಂಟೆ ಸಮಯದಲ್ಲಿ ಬೆಂಗಳೂರು ನಗರ ಜಿಲ್ಲೆ ಆನೇಕಲ್ ನಿವಾಸಿಗಳು ಬೆಚ್ಚಿ ಬಿದ್ದಿದ್ರು. ಯಾಕಂದ್ರೆ, ಆನೇಕಲ್ನ ಶಿವಾಜಿ ವೃತದ ಬಳಿ ರಿಯಲ್ ಎಸ್ಟೇಟ್ ಉದ್ಯಮಿಯ ಹೆಣ ಬಿದ್ದಿತ್ತು. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ ರಾಜಶೇಖರ್ ರೆಡ್ಡಿ ಕಾರಿನಲ್ಲಿ ಹೋಗ್ತಿದ್ರು. ರಸ್ತೆ ಮಧ್ಯೆ ಕಾರನ್ನು ಅಡ್ಡಗಟ್ಟಿದ ಗ್ಯಾಂಗ್, ದಿಢೀರ್ ದಾಳಿ ಮಾಡಿತ್ತು. ಸ್ವಿಫ್ಟ್ ಕಾರಿನ ಗಾಜು ಒಡೆದು ಚಾಕು, ಮಚ್ಚು, ರಾಡ್ಗಳಿಂದ ರಾಜಶೇಖರ್ ರೆಡ್ಡಿ ಮೇಲೆ ಹಲ್ಲೆ ಮಾಡಿ ಗ್ಯಾಂಗ್ ಎಸ್ಕೇಪ್ ಆಗಿತ್ತು. ಇದ್ರಿಂದಾಗಿ ಗಂಭೀರ ಗಾಯಗೊಂಡಿದ್ದ ರಾಜಶೇಖರ್ ರೆಡ್ಡಿ ಜೀವ ಸ್ಥಳದಲ್ಲೇ ಹಾರಿ ಹೋಗಿದೆ.

ವಿಚಿತ್ರ ಅಂದ್ರೆ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಮನೆ ಮುಂದೆಯೇ ಈ ಕೊಲೆ ನಡೆದಿದೆ. ಇನ್ನು ಕೊಲೆಯಾದ ರಾಜಶೇಖರ್ ರೆಡ್ಡಿ, ಹಲವು ದಾಖಲೆಗಳನ್ನು ಕೊಂಡೊಯ್ಯುತ್ತಿದ್ದರಂತೆ. ಈ ವೇಳೆ, ದುಷ್ಕರ್ಮಿಗಳು ದಾಳಿ ಮಾಡಿ ಕೊಂದಿರೋದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಘಟನೆ ನಡೆದ ಸ್ಥಳಕ್ಕೆ ಹೆಚ್ಚುವರಿ ಆಯುಕ್ತ ಲಕ್ಷ್ಮೀ ಗಣೇಶ್ ಹಾಗೂ ಡಿವೈಎಸ್ಪಿ ಮಲ್ಲೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ನಡೆದ ಸ್ಥಳದಲ್ಲಿರುವ ಸಿಸಿಟಿವಿ ದೃಶ್ಯ ಪರಿಶೀಲಿಸಿ ಹಂತಕರಿಗೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಆನೇಕಲ್: ಕಾರು ಅಡ್ಡಗಟ್ಟಿ ಗುಂಡಿಕ್ಕಿ, ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

Published On - 11:08 am, Thu, 6 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ