AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಧಿ ಆಸೆಗಾಗಿ ಹೊಲದಲ್ಲಿ ವಾಮಾಚಾರ; ಮೇಕೆ ಮತ್ತು ನಾಗರ ಹಾವು ಬಲಿ ಕೊಟ್ಟ ಕಿಡಿಗೇಡಿಗಳು, ಜನರಲ್ಲಿ ಆತಂಕ

ದೇವನಹಳ್ಳಿಯಲ್ಲಿ ನಿಧಿ ಆಸೆಗಾಗಿ ಮೇಕೆ ಮತ್ತು ನಾಗರಹಾವನ್ನು ಬಲಿ ಕೊಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಸೀಗೆಹಳ್ಳಿಯಲ್ಲಿ ನಡೆದಿದೆ.

ನಿಧಿ ಆಸೆಗಾಗಿ ಹೊಲದಲ್ಲಿ ವಾಮಾಚಾರ; ಮೇಕೆ ಮತ್ತು ನಾಗರ ಹಾವು ಬಲಿ ಕೊಟ್ಟ ಕಿಡಿಗೇಡಿಗಳು, ಜನರಲ್ಲಿ ಆತಂಕ
ನಿಧಿ ಆಸೆಗಾಗಿ ಹೊಲದಲ್ಲಿ ವಾಮಾಚಾರ
TV9 Web
| Edited By: |

Updated on:Sep 28, 2021 | 12:58 PM

Share

ದೇವನಹಳ್ಳಿ: ಇತ್ತೀಚೆಗೆ ನಿಧಿ ಆಸೆಗಾಗಿ ಅನೇಕ ವಾಮಾಚಾರ ಕೃತ್ಯಗಳು ನಡೆಯುತ್ತಿರುವುದು ಹೆಚ್ಚಾಗಿದೆ. ನಿಧಿ ಆಸೆಗಾಗಿ ಜನ ಮಕ್ಕಳನ್ನು ಸಹ ಬಲಿ ಕೊಡಲು ಹಿಂದೆ ಮುಂದೆ ನೋಡಲ್ಲ. ಆದ್ರೆ ದೇವನಹಳ್ಳಿಯಲ್ಲಿ ನಿಧಿ ಆಸೆಗಾಗಿ ಮೇಕೆ ಮತ್ತು ನಾಗರಹಾವನ್ನು ಬಲಿ ಕೊಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಸೀಗೆಹಳ್ಳಿಯಲ್ಲಿ ನಡೆದಿದೆ.

ಕಿಡಿಗೇಡಿಗಳು ನಿಧಿಗಾಗಿ ಹೊಲದಲ್ಲಿ ವಾಮಾಚಾರ ಮಾಡಿಸಿದ್ದಾರೆ. ಮೇಕೆ ಮತ್ತು ನಾಗರಹಾವನ್ನ ಬಲಿ ನೀಡಿ ವಾಮಾಚಾರ ಮಾಡಿಸಿದ್ದಾರೆ. ಗ್ರಾಮದ ಮುನೇಗೌಡ ಎಂಬುವವರ ಹೊಲದಲ್ಲಿ ಸುಮಾರು 6 ಅಡಿಗೂ ಹೆಚ್ಚು ಆಳಕ್ಕೆ ಗುಂಡಿ ತೆಗೆದು, ಹೊಲದ ಪಕ್ಕದಲ್ಲೇ ಇದ್ದ ಹುತ್ತ ಹೊಡೆದು ಹಾವಿನಲ್ಲಿ ಮಣಿ ಸಿಗಬಹುದೆಂದು ನಾಗರ ಹಾವನ್ನು ಸಾಯಿಸಿ ಹಾವನ್ನು ಎರಡು ಭಾಗವಾಗಿ ಸೀಳಿ ವಿಕೃತಿ ಮೆರೆದಿದ್ದಾರೆ. ಘಟನೆ ಬಗ್ಗೆ ಗ್ರಾಮದಲ್ಲಿ ಸುದ್ದಿ ಹರಡುತ್ತಿದ್ದಂತೆ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಿಡಿಗೇಡಿಗಳು ಗ್ರಾಮದ ಸುತ್ತಾಮುತ್ತ ವಾಮಾಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಊರಿನ ಸುತ್ತಾ ದಿಗ್ಬಂದನ ಹಾಕಿ ನಂತರ ನಿಧಿ ಶೋಧ ಮಾಡಿದ್ದಾರೆ ಎನ್ನಲಾಗುತ್ತಿದೆ. ಸುಮಾರು 50 ವರ್ಷಗಳಿಂದ ಇದ್ದಂತಹ ಹುತ್ತ ಮತ್ತು ವೀರಗಲ್ಲುಗಳನ್ನ ಕೆಡವಿ ವಾಮಾಚಾರ ಮಾಡಿದ್ದಾರೆ. ಸುಮಾರು 15 ದಿನಗಳಿಂದ ಪೂಜೆ ಪುನಸ್ಕಾರ ಮಾಡಿ ನಿಧಿ ತೆಗೆದುಕೊಂಡು ಹೋಗಿದ್ದಾರೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ವಾಮಾಚಾರ ಮಾಡಿರುವ ಸ್ಥಳದಲ್ಲಿ ಬಾಡಿದ ಹೂ, ಬಾಳೆಹಣ್ಣು, ಅಕ್ಕಿ ಸೇರಿದಂತೆ ಹಲವು ಪೂಜಾ ಸಾಮಾಗ್ರಿಗಳು ಪತ್ತೆಯಾಗಿವೆ. ನಿಧಿಗಳ್ಳರ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ನಿಧಿ ಆಸೆಗಾಗಿ ದಾವಣಗೆರೆ ಹನುಮ ದೇವಾಲಯಕ್ಕೆ ವಾಮಾಚಾರ; ಗ್ರಾಮಸ್ಥರ ಆರೋಪ

ಅಪ್ಪನ ಮೇಲಿನ ಸಿಟ್ಟಿಗೆ ಪುಟ್ಟ ಮಗುವನ್ನೇ ನೇಣಿಗೆ ಏರಿಸಿದ ತಾಲಿಬಾನಿಗಳು; ವಿಡಿಯೋದಲ್ಲಿ ಸೆರೆಯಾದ ದುಷ್ಕೃತ್ಯ

Published On - 11:25 am, Tue, 28 September 21

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?