AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಕೋಟೆ ನೀಲಗಿರಿ ತೋಪಿನಲ್ಲಿ ಯುವತಿ ಮೇಲೆ ರೇಪ್, 10 ದಿನ ಆದರೂ ನ್ಯಾಯ ಸಿಕ್ಕಿಲ್ಲ ಎಂದು ಪೋಷಕರ ಕಣ್ಣೀರು

38 ವರ್ಷದ ಇನ್ನೂ ಮದುವೆಯಿಲ್ಲದೆ ಯುವತಿಯ ಮೇಲೆ ಅಪರಿಚಿತರು ಪೈಶ್ಯಾಚಿಕ ಕೃತ್ಯ ಮೆರೆದಿದ್ದಾರೆ. ನವೆಂಬರ್ 14 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಹೊಸಕೋಟೆ ನೀಲಗಿರಿ ತೋಪಿನಲ್ಲಿ ಯುವತಿ ಮೇಲೆ ರೇಪ್, 10 ದಿನ ಆದರೂ ನ್ಯಾಯ ಸಿಕ್ಕಿಲ್ಲ ಎಂದು ಪೋಷಕರ ಕಣ್ಣೀರು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Nov 26, 2021 | 2:13 PM

Share

ದೇವನಹಳ್ಳಿ: ಡ್ರಾಪ್ ಕೊಡುವುದಾಗಿ ಹೇಳಿ ಬೈಕ್ನಲ್ಲಿ ಕರೆದೊಯ್ದು ಇಬ್ಬರು ಅಪರಿಚಿತರು ಯುವತಿ ಮೇಲೆ ಅತ್ಯಾಚಾರ ನಡೆಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಹೊರವಲಯದಲ್ಲಿ ನಡೆದಿದೆ. ಹೊಸಕೋಟೆ ಬಳಿಯ ನೀಲಗಿರಿ ತೋಪಿನ ಬಳಿ ಕರೆದೊಯ್ದು ದುಷ್ಕೃತ್ಯ ಎಸಗಲಾಗಿದೆ.

38 ವರ್ಷದ ಇನ್ನೂ ಮದುವೆಯಿಲ್ಲದೆ ಯುವತಿಯ ಮೇಲೆ ಅಪರಿಚಿತರು ಪೈಶ್ಯಾಚಿಕ ಕೃತ್ಯ ಮೆರೆದಿದ್ದಾರೆ. ನವೆಂಬರ್ 14 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕಳೆದ 14 ರ ಸಂಜೆ ವಾಕಿಂಗ್ ಹೋಗಿ ಮನೆಗೆ ವಾಪಸ್ಸಾಗುತ್ತಿದ್ದ ಸಂತ್ರಸ್ಥೆಯನ್ನು ಮನೆ ಬಳಿ ಬಿಡೋದಾಗಿ ನಂಬಿಸಿ ಬೈಕ್ನಲ್ಲಿ ಕೂರಿಸಿಕೊಂಡು ಕರೆದೊಯ್ದು ಅತ್ಯಾಚಾರ ಮಾಡಲಾಗಿದೆ. ಕೃತ್ಯದ ನಂತರ ಸಂತ್ರಸ್ಥೆಯನ್ನ ನೀಲಗಿರಿ ತೂಪಿನಲ್ಲೇ ಬಿಟ್ಟು ಕಾಮುಕರು ಪರಾರಿಯಾಗಿದ್ದಾರೆ. ಸದ್ಯ ಸ್ಥಳೀಯರ ಸಹಾಯದಿಂದ ಸಂತ್ರಸ್ಥೆ ಮನೆಗೆ ವಾಪಸ್ ಬಂದಿದ್ದಾರೆ.

ಘಟನೆ ನಡೆದ ರಾತ್ರಿ ಹತ್ತು ಗಂಟೆಯಾದರೂ ಮಗಳು ಮನೆಗೆ ಬಾರದ ಕಾರಣ ಮಗಳು ನಾಪತ್ತೆಯಾಗಿರೋ ಬಗ್ಗೆ ಸಂತ್ರಸ್ಥೆಯ ತಂದೆ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಂತರ ಮುಂಜಾನೆ ಮೂರು ಗಂಟೆಗೆ ಮಗಳು ಮನೆಗೆ ಬಂದದನ್ನು ಕಂಡು ವಿಚಾರಿಸಿದ್ದಾಗ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ಥೆ ತಂದೆಯಿಂದ ಇದೇ 15 ರಂದು ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನ.16 ರಂದು ಸಂತ್ರಸ್ಥೆಗೆ ಮೆಡಿಕಲ್ ಟೆಸ್ಟ್ ಮಾಡಿಸಿ ಪೊಲೀಸರಿಂದ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗಿ 10 ದಿನ ಕಳೆದ್ರು ಕ್ರಮ ಕೈಗೊಂಡಿಲ್ಲ ಅಂತ ಸಂತ್ರಸ್ಥೆ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ. ನ್ಯಾಯಕ್ಕಾಗಿ ನೊಂದ ಪೋಷಕರು ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ತಾಯಿಗೆ ಮೊಬೈಲ್‌ ಮೆಸೇಜ್ ಕಳುಹಿಸಿ ಕೆರೆಗೆ ಹಾರಿದ್ದ ಬಾಲಕಿ ಸೇಫ್​

Published On - 2:07 pm, Fri, 26 November 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ