AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್‌ ಹತ್ತುವ ಮುನ್ನ ಇರಲಿ ಎಚ್ಚರ; ಬಿಎಂಟಿಸಿಯಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳ್ಳತನ

ಬಿಎಂಟಿಸಿ ರೂಟ್ ಸಂಖ್ಯೆ 401ರ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯಲಹಂಕದ ಸಾವಿತ್ರಮ್ಮ ಕುಣಿಗಲ್‌ನ ಕಾರ್ಯಕ್ರಮಕ್ಕೆ ಹೋಗುತ್ತಿದ್ದರು. ಕಾರ್ಯಕ್ರಮದಲ್ಲಿ ಚಿನ್ನ ಹಾಕಿಕೊಳ್ಳಲು ತನ್ನ ಚಿನ್ನವನ್ನು ಬ್ಯಾಗ್ನಲ್ಲಿ ಹೊತ್ತೊಯ್ಯುತ್ತಿದ್ದರು. ಬಿಎಂಟಿಸಿ ಬಸ್‌ನಲ್ಲಿದ್ದಾಗಲೇ ಬ್ಯಾಗ್‌ನಲ್ಲಿದ್ದ ಚಿನ್ನ ಕಳ್ಳತನವಾಗಿದೆ.

ಬಸ್‌ ಹತ್ತುವ ಮುನ್ನ ಇರಲಿ ಎಚ್ಚರ; ಬಿಎಂಟಿಸಿಯಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳ್ಳತನ
ಬಿಎಂಟಿಸಿ (ಸಾಂದರ್ಭಿಕ ಚಿತ್ರ)
TV9 Web
| Updated By: ಆಯೇಷಾ ಬಾನು|

Updated on:Aug 22, 2021 | 1:11 PM

Share

ನೆಲಮಂಗಲ: ಇತ್ತೀಚೆಗೆ ಖತರ್ನಾಕ್ ಕಳ್ಳರು ಬಸ್ನಲ್ಲಿ ಪ್ರಯಾಣಿಸುವ ಪ್ರಯಾಣಿಕರನ್ನು ಹೆಚ್ಚಾಗಿ ಟಾರ್ಗೆಟ್ ಮಾಡುತ್ತಿದ್ದಾರೆ. ಈ ಮೊದಲು ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯಲ್ಲಿ ಬಸ್ ಹತ್ತುವಾಗ ಅದೆಷ್ಟೂ ಮಂದಿ ಪರ್ಸ್, ಮೊಬೈಲ್, ಹಣ ಕಳೆದುಕೊಂಡಿದ್ದಾರೆ. ಅದೇ ರೀತಿ ಯಲಹಂಕದ ಸಾವಿತ್ರಮ್ಮ ಎನ್ನವವರು ಬಿಎಂಟಿಸಿ ಬಸ್‌ನಲ್ಲಿ ತನ್ನ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳೆದುಕೊಂಡಿದ್ದಾರೆ.

ಬಿಎಂಟಿಸಿ ರೂಟ್ ಸಂಖ್ಯೆ 401ರ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯಲಹಂಕದ ಸಾವಿತ್ರಮ್ಮ ಕುಣಿಗಲ್‌ನ ಕಾರ್ಯಕ್ರಮಕ್ಕೆ ಹೋಗುತ್ತಿದ್ದರು. ಕಾರ್ಯಕ್ರಮದಲ್ಲಿ ಚಿನ್ನ ಹಾಕಿಕೊಳ್ಳಲು ತನ್ನ ಚಿನ್ನವನ್ನು ಬ್ಯಾಗ್ನಲ್ಲಿ ಹೊತ್ತೊಯ್ಯುತ್ತಿದ್ದರು. ಬಿಎಂಟಿಸಿ ಬಸ್‌ನಲ್ಲಿದ್ದಾಗಲೇ ಬ್ಯಾಗ್‌ನಲ್ಲಿದ್ದ ಚಿನ್ನ ಕಳ್ಳತನವಾಗಿದೆ. ಜಾಲಹಳ್ಳಿಯಲ್ಲಿ ಬಸ್ ಬದಲಿಸುವಾಗ ಬ್ಯಾಗ್ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಚಿನ್ನಾಭರಣ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾವಿತ್ರಮ್ಮನ ಬ್ಯಾಗ್ನಲ್ಲಿ ಒಂದೂವರೆ ಲಕ್ಷ ಬೆಲೆಬಾಳುವ 35ಗ್ರಾಂ ಚಿನ್ನಾಭರಣಗಳಿದ್ದವು ಎನ್ನಲಾಗಿದೆ. ತಮ್ಮ ತವರೂರಾದ ಕುಣಿಗಲ್ನಲ್ಲಿ ತಮ್ಮನ ಪತ್ನಿ ಗೀತಾ ಅವರ ಸೀಮಂತ ಕಾರ್ಯಕ್ರಮ ಇತ್ತು. ಬಸ್ನಲ್ಲಿ ಚಿನ್ನಾಭರಣ ಧರಿಸಿ ಪ್ರಯಾಣಿಸುವುದು ಅಪಾಯವೆಂದು ಬ್ಯಾಗ್ನಲ್ಲಿ ಇಟ್ಟಿದ್ದರು. ಆದರೆ ಬಸ್ನಲ್ಲಿ ನೂಕು ನುಗ್ಗಲು ಮಾಡಿ ಕಳ್ಳತನ ಮಾಡಿದ್ದಾರೆ. ಇನ್ನು ಬಸ್ ನಂ 401ರಲ್ಲಿ ಇಂತಹ ಘಟನೆಗಳು ಹೆಚ್ಚಾಗಿ ನಡೆಯುತ್ತಿವೆ. ಈಗಾಗಲೇ ಈ ಬಸ್ನಲ್ಲಿ ಪ್ರಯಾಣಿಸುವ ಅನೇಕ ಮಂದಿ ತಮ್ಮ ವಸ್ತುಗಳನ್ನು ಕಳೆದುಕೊಂಡಿದ್ದಾರೆ. ಬಸ್ ಚಾಲಕ ಹಾಗೂ ನಿರ್ವಾಹಕನಿಗೆ ಈ ಬಗ್ಗೆ ಮಾಹಿತಿ ಇದ್ದರೂ ಪ್ರಕರಣ ದಾಖಲಿಸಲು ಮುಂದಾಗಿಲ್ಲ. ಸದ್ಯ ಚಿನ್ನಾಭರಣ ಕಳೆದುಕೊಂಡ ಸಾವಿತ್ರಮ್ಮ ಪ್ರಕರಣ ದಾಖಲಿಸಿದ್ದು ಆದಷ್ಟು ಬೇಗ ಪೊಲೀಸರು ಈ ಬಗ್ಗೆ ತನಿಖೆ ನಡೆಸಿ ಕಳ್ಳರ ಗ್ಯಾಂಗ್ ಅರೆಸ್ಟ್ ಮಾಡಬೇಕಿದೆ.

ಇದನ್ನೂ ಓದಿ: ಕಳ್ಳತನ, ಕೊರೊನಾ ನಿಯಮ ಉಲ್ಲಂಘನೆಗೆ ಬ್ರೇಕ್ ಹಾಕಲು ವಿನೂತನ ಪ್ರಯತ್ನ; ಅಶರೀರ ವಾಣಿಯಿಂದ ಬರುತ್ತೆ ಎಚ್ಚರಿಕೆ

Published On - 11:46 am, Sun, 22 August 21

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ