AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anekal: ವೀರಾಂಜನೇಯ ಸ್ವಾಮಿಗೆ ನಮಿಸಿ ಪ್ರಾಣಬಿಟ್ಟ ಕೋತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್​ ತಾಲೂಕಿನ ಸರ್ಜಾಪುರದ ರಾಮನಾಯಕನಹಳ್ಳಿಯಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ರಾಮನಾಯಕನಹಳ್ಳಿ ಗ್ರಾಮದ ವೀರಾಂಜನೇಯ ಸ್ವಾಮಿ ದೇವಾಲಯದ ಬಾಗಿಲಿನಲ್ಲಿ ಕೋತಿ ಪ್ರಾಣ ಬಿಟ್ಟಿದೆ.

Anekal: ವೀರಾಂಜನೇಯ ಸ್ವಾಮಿಗೆ ನಮಿಸಿ ಪ್ರಾಣಬಿಟ್ಟ ಕೋತಿ
ಕೋತಿ ಸಾವು
TV9 Web
| Edited By: |

Updated on:Jul 18, 2023 | 12:05 PM

Share

ಆನೇಕಲ್: ಬೆಂಗಳೂರು ಗ್ರಾಮಾಂತರ (Bengaluru Urban) ಜಿಲ್ಲೆಯ ಆನೇಕಲ್​ ತಾಲೂಕಿನ ಸರ್ಜಾಪುರದ ರಾಮನಾಯಕನಹಳ್ಳಿಯಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ರಾಮನಾಯಕನಹಳ್ಳಿ ಗ್ರಾಮದ ವೀರಾಂಜನೇಯ ಸ್ವಾಮಿ (Anjaneya Swamy) ದೇವಾಲಯದ ಬಾಗಿಲಿನಲ್ಲಿ ಕೋತಿ (Monkey) ಪ್ರಾಣ ಬಿಟ್ಟಿದೆ. ವಿಶೇಷ ಅಂದರೆ ಕೋತಿಯ ನಡೆ ವಿಸ್ಮಯ ಹಾಗೂ ಪವಾಡಕ್ಕೆ ಸಾಕ್ಷಿಯಾಗಿದೆ. ಕೋತಿ ದಿನನಿತ್ಯ ದೇವಾಲಯದ ಬಳಿಯೇ ಓಡಾಡಿಕೊಂಡಿತ್ತು.

ನಿನ್ನೆ (ಜು.17) ಭೀಮನ ಅಮಾವಾಸೆ ಹಿನ್ನೆಲೆ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಾಯಂಕಾಲ ದೇವಾಲಯ ಬಾಗಿಲು ಹಾಕಿಕೊಂಡು ಅರ್ಚಕ ರಾಮಕೃಷ್ಣಯ್ಯ ಮನೆ ಹೋಗಿದ್ದಾರೆ. ಮರುದಿನ ಅರ್ಚಕರು ದೇವಸ್ಥಾನಕ್ಕೆ ಬಂದಾಗ ಕೋತಿ ಬಾಗಿಲ ಬಳಿ ಮಲಗಿತ್ತು. ಹತ್ತಿರ ಬಂದು ನೋಡಿದಾಗ ಕೈಮುಗಿದ ರೀತಿಯಲ್ಲಿ ಕೋತಿ ಪ್ರಾಣ ಬಿಟ್ಟಿತ್ತು.

ಇದನ್ನೂ ಓದಿ:  13 ದಿನದ ನವಜಾತ ಶಿಶುವಿನ ಮೇಲೆ ಕೋತಿ ದಾಳಿ; ಜಿಲ್ಲಾಸ್ಪತ್ರೆಗೆ ದಾಖಲು

ಕೋತಿ ದೇವಾಲಯದ ಮುಖ್ಯದ್ವಾರದ ಬಳಿ ತಲೆ ಇಟ್ಟು ಆಂಜನೇಯನಿಗೆ ನಮಿಸಿ ಕೊನೆಯುಸಿರು ಎಳೆದಿದೆ. ವಿಷಯ ತಿಳಿದು ಗ್ರಾಮಸ್ಥರು ದೇವಾಲಯದ ಬಳಿ ಜಮಾಯಿಸಿದ್ದಾರೆ. ನಂತರ ಕೋತಿಗೆ ಪೂಜೆ ಮಾಡಿ ದೇವಾಲಯದ ಬಲ ಭಾಗದಲ್ಲಿ ಅಂತಿಮಸಂಸ್ಕಾರ ನೆರವೇರಿಸಿದ್ದಾರೆ.

ನೂರು ವರ್ಷಗಳ ಇತಿಹಾಸವಿರುವ ದೇವಾಲಯ

ಸುಮಾರು ನೂರು ವರ್ಷಗಳ ಹಿಂದೆ ಕೊತ್ತೊಳ್ಳು ಮುನಯ್ಯ ಎಂಬುವರು ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನಕ್ಕೆ ಜಮೀನನ್ನು ದಾನವಾಗಿ ನೀಡಿದ್ದರು. ಬಳಿಕ ಕೊತ್ತೊಳ್ಳು ಮುನಯ್ಯ ಹಾಗೂ ದಂಪತಿ ಕಾಶಿಗೆ ಹೊರಟು ಹೋದರು. ನಂತರ ಊರಿನ ಅರ್ಚಕರಾದ ರಾಮಕೃಷ್ಣಯ್ಯ ಎನ್ನುವವರು ಪೂಜೆ ಮಾಡಿಕೊಂಡು ಬಂದಿದ್ದರು. ನಂತರ ಇವರ ಕುಟುಂಬದ ಅರ್ಚಕ ಸುದರ್ಶನ್ ಪೂಜೆ ಸಲ್ಲಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:05 pm, Tue, 18 July 23

ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಒಂದು ಹಂತ ಮೇಲಕ್ಕೆ ಹೋದ ಯಶ್ ಫ್ಯಾನ್ಸ್; ಮೆಟ್ರೋದಲ್ಲೂ ಮಿಂಚಿದ ರಾಕಿ ಭಾಯ್
ಒಂದು ಹಂತ ಮೇಲಕ್ಕೆ ಹೋದ ಯಶ್ ಫ್ಯಾನ್ಸ್; ಮೆಟ್ರೋದಲ್ಲೂ ಮಿಂಚಿದ ರಾಕಿ ಭಾಯ್
56 ರನ್​ಗೆ 7 ವಿಕೆಟ್​… ಆದರೂ ಪಂದ್ಯ ಗೆದ್ದ ಸಿಡ್ನಿ ಸಿಕ್ಸರ್ಸ್
56 ರನ್​ಗೆ 7 ವಿಕೆಟ್​… ಆದರೂ ಪಂದ್ಯ ಗೆದ್ದ ಸಿಡ್ನಿ ಸಿಕ್ಸರ್ಸ್