Anekal: ವೀರಾಂಜನೇಯ ಸ್ವಾಮಿಗೆ ನಮಿಸಿ ಪ್ರಾಣಬಿಟ್ಟ ಕೋತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್​ ತಾಲೂಕಿನ ಸರ್ಜಾಪುರದ ರಾಮನಾಯಕನಹಳ್ಳಿಯಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ರಾಮನಾಯಕನಹಳ್ಳಿ ಗ್ರಾಮದ ವೀರಾಂಜನೇಯ ಸ್ವಾಮಿ ದೇವಾಲಯದ ಬಾಗಿಲಿನಲ್ಲಿ ಕೋತಿ ಪ್ರಾಣ ಬಿಟ್ಟಿದೆ.

Anekal: ವೀರಾಂಜನೇಯ ಸ್ವಾಮಿಗೆ ನಮಿಸಿ ಪ್ರಾಣಬಿಟ್ಟ ಕೋತಿ
ಕೋತಿ ಸಾವು
Follow us
| Updated By: ವಿವೇಕ ಬಿರಾದಾರ

Updated on:Jul 18, 2023 | 12:05 PM

ಆನೇಕಲ್: ಬೆಂಗಳೂರು ಗ್ರಾಮಾಂತರ (Bengaluru Urban) ಜಿಲ್ಲೆಯ ಆನೇಕಲ್​ ತಾಲೂಕಿನ ಸರ್ಜಾಪುರದ ರಾಮನಾಯಕನಹಳ್ಳಿಯಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ರಾಮನಾಯಕನಹಳ್ಳಿ ಗ್ರಾಮದ ವೀರಾಂಜನೇಯ ಸ್ವಾಮಿ (Anjaneya Swamy) ದೇವಾಲಯದ ಬಾಗಿಲಿನಲ್ಲಿ ಕೋತಿ (Monkey) ಪ್ರಾಣ ಬಿಟ್ಟಿದೆ. ವಿಶೇಷ ಅಂದರೆ ಕೋತಿಯ ನಡೆ ವಿಸ್ಮಯ ಹಾಗೂ ಪವಾಡಕ್ಕೆ ಸಾಕ್ಷಿಯಾಗಿದೆ. ಕೋತಿ ದಿನನಿತ್ಯ ದೇವಾಲಯದ ಬಳಿಯೇ ಓಡಾಡಿಕೊಂಡಿತ್ತು.

ನಿನ್ನೆ (ಜು.17) ಭೀಮನ ಅಮಾವಾಸೆ ಹಿನ್ನೆಲೆ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಾಯಂಕಾಲ ದೇವಾಲಯ ಬಾಗಿಲು ಹಾಕಿಕೊಂಡು ಅರ್ಚಕ ರಾಮಕೃಷ್ಣಯ್ಯ ಮನೆ ಹೋಗಿದ್ದಾರೆ. ಮರುದಿನ ಅರ್ಚಕರು ದೇವಸ್ಥಾನಕ್ಕೆ ಬಂದಾಗ ಕೋತಿ ಬಾಗಿಲ ಬಳಿ ಮಲಗಿತ್ತು. ಹತ್ತಿರ ಬಂದು ನೋಡಿದಾಗ ಕೈಮುಗಿದ ರೀತಿಯಲ್ಲಿ ಕೋತಿ ಪ್ರಾಣ ಬಿಟ್ಟಿತ್ತು.

ಇದನ್ನೂ ಓದಿ:  13 ದಿನದ ನವಜಾತ ಶಿಶುವಿನ ಮೇಲೆ ಕೋತಿ ದಾಳಿ; ಜಿಲ್ಲಾಸ್ಪತ್ರೆಗೆ ದಾಖಲು

ಕೋತಿ ದೇವಾಲಯದ ಮುಖ್ಯದ್ವಾರದ ಬಳಿ ತಲೆ ಇಟ್ಟು ಆಂಜನೇಯನಿಗೆ ನಮಿಸಿ ಕೊನೆಯುಸಿರು ಎಳೆದಿದೆ. ವಿಷಯ ತಿಳಿದು ಗ್ರಾಮಸ್ಥರು ದೇವಾಲಯದ ಬಳಿ ಜಮಾಯಿಸಿದ್ದಾರೆ. ನಂತರ ಕೋತಿಗೆ ಪೂಜೆ ಮಾಡಿ ದೇವಾಲಯದ ಬಲ ಭಾಗದಲ್ಲಿ ಅಂತಿಮಸಂಸ್ಕಾರ ನೆರವೇರಿಸಿದ್ದಾರೆ.

ನೂರು ವರ್ಷಗಳ ಇತಿಹಾಸವಿರುವ ದೇವಾಲಯ

ಸುಮಾರು ನೂರು ವರ್ಷಗಳ ಹಿಂದೆ ಕೊತ್ತೊಳ್ಳು ಮುನಯ್ಯ ಎಂಬುವರು ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನಕ್ಕೆ ಜಮೀನನ್ನು ದಾನವಾಗಿ ನೀಡಿದ್ದರು. ಬಳಿಕ ಕೊತ್ತೊಳ್ಳು ಮುನಯ್ಯ ಹಾಗೂ ದಂಪತಿ ಕಾಶಿಗೆ ಹೊರಟು ಹೋದರು. ನಂತರ ಊರಿನ ಅರ್ಚಕರಾದ ರಾಮಕೃಷ್ಣಯ್ಯ ಎನ್ನುವವರು ಪೂಜೆ ಮಾಡಿಕೊಂಡು ಬಂದಿದ್ದರು. ನಂತರ ಇವರ ಕುಟುಂಬದ ಅರ್ಚಕ ಸುದರ್ಶನ್ ಪೂಜೆ ಸಲ್ಲಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:05 pm, Tue, 18 July 23

ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು