AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಗಳಿಂದ ಬೆಂಗಳೂರಿಗೆ ಇಂದು 2,634ಕ್ಕೂ ಹೆಚ್ಚು ಜನ ಆಗಮನ; ಕೆಂಪೇಗೌಡ ಏರ್​ಪೋರ್ಟ್​ನಲ್ಲಿ 43 ಸಿಬ್ಬಂದಿ ನಿಯೋಜನೆ

ಹೈರಿಸ್ಕ್ ದೇಶಗಳು ಸೇರಿದಂತೆ ವಿದೇಶಗಳಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಹೀಗಾಗಿ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಮಾಡಲು ಏರ್​ಪೋರ್ಟ್​ನಲ್ಲಿ ಸುಮಾರು 43 ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ವಿದೇಶಗಳಿಂದ ಬೆಂಗಳೂರಿಗೆ ಇಂದು 2,634ಕ್ಕೂ ಹೆಚ್ಚು ಜನ ಆಗಮನ; ಕೆಂಪೇಗೌಡ ಏರ್​ಪೋರ್ಟ್​ನಲ್ಲಿ 43 ಸಿಬ್ಬಂದಿ ನಿಯೋಜನೆ
ಕೆಂಪೇಗೌಡ ವಿಮಾನ ನಿಲ್ದಾಣ
TV9 Web
| Edited By: |

Updated on:Dec 05, 2021 | 9:18 AM

Share

ಬೆಂಗಳೂರು: ಕೊರೊನಾ ರೂಪಾಂತರಿ ಒಮಿಕ್ರಾನ್ (Omicron) ಆತಂಕದ ನಡುವೆ ಇಂದು (ನ.5) ರಾಜ್ಯಕ್ಕೆ ಸಾವಿರಾರು ವಿದೇಶಿ ಪ್ರಯಾಣಿಕರು ಆಗಮಿಸಲಿದ್ದಾರೆ. ಹೈರಿಸ್ಕ್ ದೇಶಗಳು ಸೇರಿದಂತೆ ವಿದೇಶಗಳಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಹೀಗಾಗಿ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಮಾಡಲು ಏರ್​ಪೋರ್ಟ್​ನಲ್ಲಿ ಸುಮಾರು 43 ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. 19 ವಿಮಾನಗಳಲ್ಲಿ 2,634ಕ್ಕೂ ಹೆಚ್ಚು ಜನ ಆಗಮಿಸಲಿದ್ದು, ವಿದೇಶದಿಂದ ಬರುವ ಎಲ್ಲರಿಗೂ ಟೆಸ್ಟ್ ಮಾಡಲು ಸಿದ್ಧತೆ ನಡೆಯುತ್ತಿದೆ.

ದೋಹ, ಶಾರ್ಜಾ, ಮಲೈ, ದುಬೈ, ಮಸ್ಕಟ್, ಸಿಂಗಾಪುರ, ಶ್ರೀಲಂಕಾ ಸೇರಿದಂತೆ ಹಲವು ದೇಶಗಳಿಂದ 19 ವಿಮಾನಗಳು ಕೆಂಪೇಗೌಡ ಏರ್​ಪೋರ್ಟ್​ಗೆ ಆಗಮಿಸಲಿವೆ. ಎಲ್ಲಾ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಟ್ಟಿರುವ ಆರೋಗ್ಯ ಇಲಾಖೆ, ಟೆಸ್ಟ್ ಮಾಡಲು ಸಿದ್ಧತೆ ನಡೆಸಿಕೊಳ್ಳುತ್ತಿದೆ. ಪ್ರತಿಯೊಬ್ಬ ಪ್ರಯಾಣಿಕನಿಗೂ ಆರ್​ಟಿಪಿಸಿಆರ್ ಟೆಸ್ಟ್ ಮಾಡಲಾಗುತ್ತದೆ. ಟೆಸ್ಟ್ ರಿಸಲ್ಟ್ ಬರುವವರೆಗೂ ವೈಟಿಂಗ್ ರೂಂಮಲ್ಲಿ ಕೂರಿಸಲಾಗುವುದು.

ಫ್ರೀ ವೈ-ಫೈ ವ್ಯವಸ್ಥೆ ವಿಮಾನ ನಿಲ್ದಾಣದಲ್ಲಿ ಅಲರ್ಟ್ ಮಾಡಲಾಗಿದೆ. ಕೊವಿಡ್ ಟೆಸ್ಟ್ ಮಾಡುವುದಕ್ಕೆ 4 ಪ್ರತ್ಯೇಕ ಕೌಂಟರ್ ಓಪನ್ ಮಾಡಲಾಗಿದೆ. ಟೆಸ್ಟ್ ವರದಿ ಬರುವವರೆಗೂ ಪ್ರಯಾಣಿಕರು ಕಾಯಬೇಕು. ಹೀಗಾಗಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ  ಪ್ರಯಾಣಿಕರು ಸಮಯ ಕಳೆಯಲು ಫ್ರೀ ವೈ-ಫೈ ವ್ಯವಸ್ಥೆ ಮಾಡಲಾಗಿದ್ದು, ಜೊತೆಗೆ ಅಂತರ ಪಾಲಿಸಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ

ಜಾಕ್ವೆಲಿನ್​ಗೆ 36 ಲಕ್ಷ ರೂಪಾಯಿ ಬೆಲೆಯ ಬೆಕ್ಕನ್ನು ಗಿಫ್ಟ್​ ನೀಡಿದ್ದ ಬಹುಕೋಟಿ ವಂಚನೆ ಆರೋಪಿ ಸುಕೇಶ್​

ಮೀಸೆ ಚಿಗುರದ ವಯಸ್ಸಲ್ಲೇ ಗಾಂಜಾ ಸೇವನೆ; ಮತ್ತಿನಲ್ಲಿ ಗೂಂಡಾಗಿರಿ, ಮೂವರು ಅಪ್ರಾಪ್ತರು ಅರೆಸ್ಟ್

Published On - 9:14 am, Sun, 5 December 21

Follow Us
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್