AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ವಾಟರ್​ ಹೀಟರ್​​​ನಿಂದ ವಿದ್ಯುತ್​ ಪ್ರವಹಿಸಿ ತಾಯಿ, 4 ವರ್ಷದ ಮಗು ಸಾವು

ಶೌಚಾಲಯಕ್ಕೆ ಬಾಲಕ ಹೋಗಿದ್ದು ಹೀಟರನ್ನು ಮೈಮೇಲೆ ಬೀಳಿಸಿಕೊಂಡಿದ್ದಾನೆ. ಆಗ ಕರೆಂಟ್ ಶಾಕ್ ಹೊಡೆದಿದೆ. ಶಾಕ್​ನಿಂದ ಒದ್ದಾಡುತ್ತಿದ್ದ ಮಗನನ್ನು ರಕ್ಷಿಸಲು ಹೋದ ತಾಯಿಗೂ ವಿದ್ಯುತ್​ ಪ್ರವಹಿಸಿದ್ದು ತಾಯಿ-ಮಗ ಇಬ್ಬರೂ ಮೃತಪಟ್ಟಿದ್ದಾರೆ.

ದೇವನಹಳ್ಳಿ: ವಾಟರ್​ ಹೀಟರ್​​​ನಿಂದ ವಿದ್ಯುತ್​ ಪ್ರವಹಿಸಿ ತಾಯಿ, 4 ವರ್ಷದ ಮಗು ಸಾವು
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on:Feb 27, 2023 | 10:16 AM

Share

ದೇವನಹಳ್ಳಿ: ವಾಟರ್​ ಹೀಟರ್​​​ನಿಂದ ವಿದ್ಯುತ್​ ಪ್ರವಹಿಸಿ ತಾಯಿ, ಮಗು ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಕನಕ ನಗರದಲ್ಲಿ ನಡೆದಿದೆ. ರಾಯಚೂರು ಮೂಲದ ತಾಯಿ ಜ್ಯೋತಿ, ಮಗ ಜಯಾನಂದ್(4) ಮೃತ ದುರ್ದೈವಿಗಳು.

ನಿನ್ನೆ(ಫೆ.26) ಮಧ್ಯಾಹ್ನ ಜ್ಯೋತಿ ಅವರು ಶೌಚಾಲಯದಲ್ಲಿ ನೀರು ಕಾಯಿಸಲು ಹೀಟರ್ ಹಾಕಿದ್ದರು. ಈ ವೇಳೆ ಶೌಚಾಲಯಕ್ಕೆ ಬಾಲಕ ಹೋಗಿದ್ದು ಹೀಟರನ್ನು ಮೈಮೇಲೆ ಬೀಳಿಸಿಕೊಂಡಿದ್ದಾನೆ. ಆಗ ಕರೆಂಟ್ ಶಾಕ್ ಹೊಡೆದಿದೆ. ಶಾಕ್​ನಿಂದ ಒದ್ದಾಡುತ್ತಿದ್ದ ಮಗನನ್ನು ರಕ್ಷಿಸಲು ಹೋದ ತಾಯಿಗೂ ವಿದ್ಯುತ್​ ಪ್ರವಹಿಸಿದ್ದು ತಾಯಿ-ಮಗ ಇಬ್ಬರೂ ಮೃತಪಟ್ಟಿದ್ದಾರೆ. ದಂಪತಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ, ಆನ್​​ಲೈನ್ ರಮ್ಮಿ ಚಟಕ್ಕೆ ಬ್ಯಾಂಕಿನ 2 ಕೋಟಿ ಹಣ ದುರ್ಬಳಕೆ -ಐಸಿಐಸಿಐ ಬ್ಯಾಂಕ್ ಮ್ಯಾನೇಜರ್ ಅರೆಸ್ಟ್​

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ, ಆರೋಪಿ ಅರೆಸ್ಟ್

ಬೆಂಗಳೂರು: ವಿದೇಶಗಳಲ್ಲಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ನೈಜೀರಿಯಾ ಪ್ರಜೆ ನೋಕೊಚಾ. ಯುಕೆಯಲ್ಲಿ ಉದ್ಯೋಗ ಕೊಡಿಸುವುದಾಗಿ ದೊಡ್ಡಗುಬ್ಬಿ ಮೂಲದ ಮಹಿಳೆ ಬಳಿ 37 ಲಕ್ಷ ಹಣ ಪಡೆದು ವಂಚಿಸಿದ್ದ. ಮಹಿಳೆ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನಿಂದ ಲ್ಯಾಪ್​ಟಾಪ್​​​​​, 6 ಮೊಬೈಲ್​, ಸಿಮ್​​ಕಾರ್ಡ್, ಪಾಸ್​ಪೋರ್ಟ್ ಜಪ್ತಿ ಮಾಡಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:11 am, Mon, 27 February 23

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​