AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಾಚ್ಯ ಶಬ್ದದಿಂದ ನಿಂದಿಸಿದ ಅತ್ತೆಗೆ ಅಳಿಯನಿಂದ ಥಳಿತ: ಮನನೊಂದು ಆತ್ಮಹತ್ಯೆಗೆ ಶರಣಾದ ಮಗಳು

ಅದೊಂದು ಪುಟ್ಟ ಸಂಸಾರ, ಪ್ರೀತಿಸಿ ಮದುವೆಯಾಗಿದ್ದವರ ಪ್ರೀತಿಗೆ ಕುಂದು ಕೊರೆತೆ ಇರಲಿಲ್ಲ. ಪ್ರೀತಿಯ ಪ್ರತೀಕವಾಗಿ ಅರಗಿಣಿಯಂತ ಇಬ್ಬರು ಮುದ್ದಾದ ಮಕ್ಕಳಿದ್ದರು. ಆದರೆ, ಈ ಸಂಸಾರದಲ್ಲಿ ಅತ್ತೆ ಅಳಿಯನ ಕಿರಿಕ್​ಗೆ ಬೇಸತ್ತ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಅಷ್ಟಕ್ಕೂ ಅಂಥದ್ದೇನಾಯ್ತು ಅಂತೀರಾ? ಇಲ್ಲಿದೆ ನೋಡಿ.

ಅವಾಚ್ಯ ಶಬ್ದದಿಂದ ನಿಂದಿಸಿದ ಅತ್ತೆಗೆ ಅಳಿಯನಿಂದ ಥಳಿತ: ಮನನೊಂದು ಆತ್ಮಹತ್ಯೆಗೆ ಶರಣಾದ ಮಗಳು
ಆತ್ಮಹತ್ಯೆಗೆ ಶರಣಾದ ಮಹಿಳೆ
Follow us
ಬಿ ಮೂರ್ತಿ, ನೆಲಮಂಗಲ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 21, 2023 | 7:36 PM

ಬೆಂಗಳೂರು ಗ್ರಾಮಾಂತರ, ಸೆ.21: ಈ ಫೋಟೋದಲ್ಲಿರುವ ಯುವತಿಯ ಹೆಸರು ಆಶಾ(25), ಕಳೆದ 9 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ, ಪತಿಯ ಜೊತೆ ಬಹಳ ಅನ್ಯೋನ್ಯವಾಗಿದ್ದರು. ಪತಿ ಮತ್ತು ಆಕೆಯ ತಾಯಿ ಜಗಳದಿಂದ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೌದು, ಆಶಾ ಮತ್ತು ಲಕ್ಷ್ಮಿಪತಿ ಪ್ರೀತಿಸಿ ಮದುವೆಯಾದವರು. ಮದುವೆಯ ಬಳಿಕ ಬೆಂಗಳೂರು ಗ್ರಾಮಾಂತರ(Bengaluru Rural) ಜಿಲ್ಲೆಯ ನೆಲಮಂಗಲ ತಾಲೂಕಿನ ಬೈರಶೆಟ್ಟಿಹಳ್ಳಿಯಲ್ಲಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ನೆಮ್ಮದಿಯಾಗಿದ್ದರು. ಆದರೆ, ಅತ್ತೆ ಮಂಜುಳ ಅಳಿಯನ ಮನೆಗೆ ಬಂದಿದ್ದಳು. ಆಗ ಅಳಿಯ ಲಕ್ಷ್ಮಿಪತಿ ಊರಲ್ಲಿ ಕೂರಿಸಿದ್ದ ಗಣಪತಿ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡಲು ಹೋಗಿದ್ದವ ಮನೆಗೆ ಬಂದಿದ್ದ. ಅಲ್ಲಿಂದಲೇ ಕಿರಿಕ್ ಶುರುವಾಗಿತ್ತು. ಅವಾಚ್ಯ ಶಬ್ದದಿಂದ ಅತ್ತೆ ನಿಂದಿಸುತ್ತಿದ್ದಳು. ಇದರಿಂದ ಬೇಸತ್ತ ಲಕ್ಷ್ಮಿಪತಿ ಅತ್ತೆಗೆ ಬೈದು, ಎರಡು ಬಿಟ್ಟು ಹೋಗಿದ್ದಾನೆ. ಅಷ್ಟೇ ಅತ್ತೆ ಅಳಿಯನ ಜಗಳಕ್ಕೆ ಬೇಸತ್ತ ಆಶಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇನ್ನು ಲಕ್ಷ್ಮೀಪತಿ ಎಂದಿನಂತೆ ಸೆಕ್ಯೂರಿಟಿ ಕೆಲಸಕ್ಕೆ ಹೋಗಿದ್ದ. ಪತಿಗೆ ಆಶಾ ಪ್ರತಿದಿನ ಟಿಫನ್ ತೆಗೆದುಕೊಂಡು ಹೋಗುತ್ತಿದ್ದಳು. ಆದರೆ‌, ಆಶಾ ಬೆಳಗ್ಗೆ 10 ಗಂಟೆಯಾದರು ಟಿಫನ್ ಪತಿಗೆ ತಲುಪಿಸಿಲ್ಲ. ಇದರಿಂದ ಪತಿಯೆ ಮನೆಗೆ ಬಂದು ಬಾಗಿಲು ಬಡಿದರು, ಆಶಾ ಬಾಗಿಲು ತೆಗೆದಿಲ್ಲ. ಕಿಟಕಿಯಲ್ಲಿ ಇಣುಕಿ‌ನೋಡಿದಾಗ ಆಶಾ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಸದ್ಯ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಶಾ ತನ್ನ ತಾಯಿಯನ್ನು ಸುಮ್ಮನಿರಿಸಲಾರದೇ ಪತಿ ಬಗೆಗಿನ ಹಲ್ಲೆ ಹಾಗೂ ನಿಂದನೆಯನ್ನು ಕೇಳಲಾರದೇ ಸಾವಿನ ದಾರಿ ಹುಡುಕಿದ್ದು ದುರಂತವೇ ಸರಿ.

ಇದನ್ನೂ ಓದಿ:ಮದುವೆಯಾದ ನಾಲ್ಕೇ ತಿಂಗಳಲ್ಲಿ ಮಸಣ ಸೇರಿದ ಗೃಹಿಣಿ: ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ, ಹೆತ್ತವರ ಆಕ್ರಂದನ

ಲಾಂಗ್ ಮಚ್ಚುಗಳಿಂದ ಅಟ್ಟಾಡಿಸಿ ಕೊಲೆಗೆ ಯತ್ನ; ಆರೋಪಿಗಳು ಅರೆಸ್ಟ್​

ಚಿಕ್ಕಬಳ್ಳಾಪುರ: ನಗರದಲ್ಲಿ ಲಾಂಗ್ ಮಚ್ಚುಗಳಿಂದ ಅಟ್ಟಾಡಿಸಿ ಕೊಲೆಗೆ ಯತ್ನಿಸಿದ ಆರೋಪಿಗಳನ್ನು ಚಿಕ್ಕಬಳ್ಳಾಪುರ ನಗರಠಾಣೆ ಪೊಲೀಸರು ಬಂಧಿಸಿದ್ದಾರೆ. ಜಿಮ್ ಕೋಚರ್ ಬಿ.ಎನ್.ನರಸಿಂಹಮೂರ್ತಿ ಅಲಿಯಾಸ್ ವಿಕ್ಕಿ ಎಂಬುವವರನ್ನು ಎಲ್‌ಎಲ್‌ಬಿ ವಿದ್ಯಾರ್ಥಿ ಚಂದ್ರಶೇಖರ್ ತಂಡದವರಾದ ಚೆಂಡೂರು ಗ್ರಾಮದ ಅರವಿಂದ್​, ಹರೀಶ್​, ಪೈಯೂರು ಗ್ರಾಮದ ಪ್ರಸಾದ್, ಬೀಚಗಾನಹಳ್ಳಿ ಕ್ರಾಸ್ ಹರೀಶ್ ಎನ್ನುವವರು ಕೊಲೆಗೆ ಯತ್ನಿಸಿದ್ದರು. ಇನ್ನು ಕೊಲೆಗೆ ಚಂದ್ರಶೇಖರ್ ಎಂಬಾತ ಸುಫಾರಿ ನೀಡಿದ್ದಾಗಿ ಆರೋಪಿಗಳು ಹೇಳಿದ್ದಾರೆ. ಆರೋಪಿಗಳ ಕೃತ್ಯ ಸ್ಥಳೀಯ ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
ನಮ್ಮ ಆಚರಣೆ ನಮ್ಮ ಹಕ್ಕು, ಎಲ್ಲಿದ್ದರೂ ಹಿಂದೂಗಳೇ ಎಂದ ಪಾಕ್​ ಹಿಂದೂಗಳು
ನಮ್ಮ ಆಚರಣೆ ನಮ್ಮ ಹಕ್ಕು, ಎಲ್ಲಿದ್ದರೂ ಹಿಂದೂಗಳೇ ಎಂದ ಪಾಕ್​ ಹಿಂದೂಗಳು
ಕಾನೂನು ಪ್ರಕ್ರಿಯೆ ಮೂಲಕ ಜನಾರ್ಧನ ರೆಡ್ಡಿಗೆ ರಿಲೀಫ್: ಶ್ರೀರಾಮುಲು
ಕಾನೂನು ಪ್ರಕ್ರಿಯೆ ಮೂಲಕ ಜನಾರ್ಧನ ರೆಡ್ಡಿಗೆ ರಿಲೀಫ್: ಶ್ರೀರಾಮುಲು
ವಿಡಿಯೋ ಮಾಡೋದು ನಿಲ್ಲಿಸು; ಡ್ರಗ್ ಪಾರ್ಟಿ ವೇಳೆ ಪೊಲೀಸರಿಗೆ ಮಂಗ್ಲಿ ಆವಾಜ್
ವಿಡಿಯೋ ಮಾಡೋದು ನಿಲ್ಲಿಸು; ಡ್ರಗ್ ಪಾರ್ಟಿ ವೇಳೆ ಪೊಲೀಸರಿಗೆ ಮಂಗ್ಲಿ ಆವಾಜ್