AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯದ ಪಾರ್ಟಿ ಬಳಿಕ ಕೊಲೆ? ಜನನಿಬಿಡ ಪ್ರದೇಶದಲ್ಲಿ ನಿರ್ಮಾಣ ಕಟ್ಟಡದಲ್ಲಿ ವಿವಸ್ತ್ರಗೊಳಿಸಿ ಕೈಕಾಲು ಕಟ್ಟಿ ವ್ಯಕ್ತಿಯ ಹತ್ಯೆ

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಯಾರಂಡಹಳ್ಳಿ ಗ್ರಾಮದಲ್ಲಿ ಜನನಿಬಿಡ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮದ್ಯದ ಪಾರ್ಟಿ ಬಳಿಕ ವಿವಸ್ತ್ರಗೊಳಿಸಿ ಕೈಕಾಲು ಕಟ್ಟಿ ವ್ಯಕ್ತಿಯ ಹತ್ಯೆ

ಮದ್ಯದ ಪಾರ್ಟಿ ಬಳಿಕ ಕೊಲೆ? ಜನನಿಬಿಡ ಪ್ರದೇಶದಲ್ಲಿ ನಿರ್ಮಾಣ ಕಟ್ಟಡದಲ್ಲಿ ವಿವಸ್ತ್ರಗೊಳಿಸಿ ಕೈಕಾಲು ಕಟ್ಟಿ ವ್ಯಕ್ತಿಯ ಹತ್ಯೆ
ನಿರ್ಮಾಣ ಹಂತದ ಕಟ್ಟಡದಲ್ಲಿ ವಿವಸ್ತ್ರಗೊಳಿಸಿ ಕೈಕಾಲು ಕಟ್ಟಿ ಹತ್ಯೆ
ರಾಮು, ಆನೇಕಲ್​
| Updated By: ಸಾಧು ಶ್ರೀನಾಥ್​|

Updated on:Jul 27, 2023 | 3:28 PM

Share

ಆನೇಕಲ್, ಜುಲೈ 27:​ ಅದು ಜನನಿಬಿಡ ಪ್ರದೇಶದಲ್ಲಿರುವ ನಿರ್ಮಾಣ ಹಂತದ ಕಟ್ಟಡ.. ಕಾರ್ಮಿಕರು ಎಂದಿನಂತೆ ಕೆಲಸ ಮಾಡ್ತಿರುವಾಗ ಗಬ್ಬು ವಾಸನೆ ಮೂಗಿಗೆ ಬಡಿಯೋಕೆ ಶುರುವಾಗಿತ್ತು.. ಅಲ್ಲಿನ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ವಾಸನೆ ಬರ್ತಿದ್ದ ಜಾಗಕ್ಕೆ ಹೋಗಿ ಏನಾಗಿದೆ ಎಂದು ನೋಡಿದ್ದಾರೆ. ಆ ಘೋರ ದೃಶ್ಯ ಕಂಡು ಅಲ್ಲಿದ್ದ ಜನರೆಲ್ಲ ಭಯಭೀತರಾಗಿದ್ರು.. ಬೆಂಗಳೂರಿನ ಹೊರವಲಯದಲ್ಲಿ ನಡೆಯಿತೊಂದು ಭೀಕರ ಹತ್ಯೆ (Murder)… ಹೀಗೆ ನಿರ್ಮಾಣ ಹಂತದ ಕಟ್ಟಡದಲ್ಲಿ ಅತ್ಯಂತ ಭೀಕರವಾಗಿ ಕೊಲೆಯಾಗಿರುವ ಅಪರಿಚಿತ ವ್ಯಕ್ತಿಯ ಮೃತದೇಹ.. ಇನ್ನೊಂದೆಡೆ ಸಾಕ್ಷ್ಯ ಕಲೆಹಾಕುತ್ತಿರುವ ವಿಧಿವಿಜ್ಞಾನ ಪ್ರಯೋಗಾಲಯ ತಜ್ಞರು ಹಾಗೂ ಬೆರಳಚ್ಚು ತಜ್ಞರ ತಂಡ.. ಈ ಎಲ್ಲಾ ದೃಶ್ಯ ಕಂಡು ಬಂದಿದ್ದು, ಬೆಂಗಳೂರು ಹೊರವಲಯ (Bangalore outskirts) ಆನೇಕಲ್ ತಾಲ್ಲೂಕಿನ (Anekal) ಯಾರಂಡಹಳ್ಳಿ ಗ್ರಾಮದಲ್ಲಿ..

ಹೌದು ಗ್ರಾಮದ ಜನನಿಬಿಡ ಪ್ರದೇಶದಲ್ಲಿ ಅರ್ಧಕ್ಕೆ ನಿಂತಿದ್ದ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಇಂದು ಮಧ್ಯಾಹ್ನ ದುರ್ವಾಸನೆಯೊಂದು ಬಂದಿದೆ. ಅಲ್ಲಿನ ಸುತ್ತಮುತ್ತಲಿನ ಜನರು ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ. ಅಲ್ಲಿಗೆ ಬಂದ ಪೋಲೀಸರು ನಿರ್ಮಾಣ ಹಂತದ ಕಟ್ಟಡದ ಒಳಗೆ ಹೋಗಿ ನೋಡಿದಾಗ ಕೊಳೆತ ಸ್ಥಿತಿಯಲ್ಲಿ ಮೈಮೇಲೆ ಬಟ್ಟೆ ಇಲ್ಲದೆ ಕೈಕಾಲು ಕಟ್ಟಿದ್ದ ವ್ಯಕ್ತಿಯ ಮೃತ ದೇಹ ಪತ್ತೆಯಾಗಿದೆ. ಇನ್ನು, ಈ ಘಟನೆ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ನಡೆದಿದ್ದು, ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದೆ, ದುಷ್ಕರ್ಮಿಗಳು ವ್ಯಕ್ತಿಯನ್ನ ಘೋರವಾಗಿ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ. ಜನನಿಬಿಡ ಪ್ರದೇಶದಲ್ಲಿ ಇಂಥದೊಂದು ಘಟನೆಯನ್ನ ಕಂಡ ಅಲ್ಲಿನ ಸುತ್ತಮುತ್ತಲಿನ ಜನರು ಭಯಭೀತರಾಗಿದ್ದಾರೆ.

ಬೊಮ್ಮಸಂದ್ರ- ಜಿಗಣಿ ಕೈಗಾರಿಕಾ ಪ್ರದೇಶಕ್ಕೆ ಸಮೀಪದಲ್ಲಿರುವ ಯಾರಂಡಹಳ್ಳಿ ಗ್ರಾಮದಲ್ಲಿ ಹೊರರಾಜ್ಯದ ಜನರೇ ಅತಿಹೆಚ್ಚಾಗಿದ್ದಾರೆ. ಕಳೆದ ನಾಲ್ಕೈದು ದಿನಗಳ ಹಿಂದೆ ಅರ್ಧಕ್ಕೆ ನಿಂತಿದ್ದ ನಿರ್ಮಾಣ ಹಂತದ ಕಟ್ಟಡಕ್ಕೆ ಬಂದಿದ್ದ ಅಸಾಮಿಗಳು ಮದ್ಯದ ಪಾರ್ಟಿ ಮಾಡಿ ಬಳಿಕ ಕೊಲೆ ಮಾಡಿದ್ದಾರೆ.

ಅದಲ್ಲದೇ ವ್ಯಕ್ತಿಯನ್ನ ಸಂಪೂರ್ಣ ವಿವಸ್ತ್ರ ಗೊಳಿಸಿ ಕೈಕಾಲುಗಳನ್ನ ಕಟ್ಟಿಹಾಕಿ ಅತ್ಯಂತ ಭೀಕರವಾಗಿ ಹತ್ಯೆ ಮಾಡಲಾಗಿದೆ. ಕೊಲೆ ಮಾಡಿದ ಬಳಿಕ ಮೃತ ದೇಹದ ಮೇಲೆ ಹಳೆಯ ಚಾಪೆಯೊಂದನ್ನ ಹೊದಿಸಿ ಆರೋಪಿಗಳು ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಅಲ್ಲಿನ ಸುತ್ತಮುತ್ತಲಿನ ಜನರಿಗೆ ದುರ್ವಾಸನೆ ಬಂದಾಗ ಕೂಡಲೇ ಸೂರ್ಯನಗರ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದು, ಸ್ಥಳಕ್ಕೆ ಬಂದು ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ.

ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಜ್ಞರು, ಬೆರಳಚ್ಚು ತಜ್ಞರು, ಡಾಗ್ ಸ್ಕ್ವಾಡ್ ಭೇಟಿ ನೀಡಿ ಸಾಕ್ಷ್ಯ ಕಲೆಹಾಕಿದ್ದಾರೆ. ಬೆಂಗಳೂರು ಗ್ರಾಮಾಂತರ ಅಡಿಷನಲ್ ಎಸ್ಪಿ ಪುರುಷೋತ್ತಮ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಸೂರ್ಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕೊಲೆಯಾದ ವ್ಯಕ್ತಿ ಯಾರೆಂದು ಪತ್ತೆ ಹಚ್ಚಿ, ಬಳಿಕ ಕೊಲೆ ಮಾಡಿದ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 11:40 am, Thu, 27 July 23

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ