ಹೊಸಕೋಟೆ ಬ್ರಹ್ಮರಥೋತ್ಸವ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿ: ಬಿಜೆಪಿ ಆಕ್ರೋಶ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಟೌನ್​ ​ಕೋಟೆಯಲ್ಲಿರುವ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವದ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸುವ ಕಾರಣ ಸಮಿತಿ ರಚಿಸುವಂತೆ ಶಾಸಕ ಶರತ್ ಬಚ್ಚೇಗೌಡ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಅದರಂತೆ ಸರ್ಕಾರ 12 ಜನರ ಸಮಿತಿ ರಚಿಸಿದ್ದು, ಓರ್ವ ಮುಸ್ಲಿಂ ವ್ಯಕ್ತಿಯನ್ನು ಸದಸ್ಯ ಮಾಡಿದೆ. ಇದು ಬಿಜೆಪಿ ಆಕ್ರೋಶಕ್ಕೆ ಕಾರಣವಾಗಿದೆ.

ಹೊಸಕೋಟೆ ಬ್ರಹ್ಮರಥೋತ್ಸವ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿ: ಬಿಜೆಪಿ ಆಕ್ರೋಶ
ಶ್ರೀ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನ
Edited By: ವಿವೇಕ ಬಿರಾದಾರ

Updated on: May 08, 2024 | 1:11 PM

ಬೆಂಗಳೂರು, ಮೇ 08: ಲೋಕಸಭೆ ಚುನಾವಣೆಯ (Lok Sbha Election) ಕಾವು ರಾಜ್ಯದಲ್ಲಿ ತಣ್ಣಗಾಗಿದ್ದರೂ, ರಾಜಕೀಯ ಪಕ್ಷಗಳ ದೂರುವಿಕೆ ಮುಂದುವರೆದಿದೆ. ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ಹೊಸಕೋಟೆ ಟೌನ್​ (Hoskote) ​ಕೋಟೆಯಲ್ಲಿರುವ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವ ಸಮಿತಿಗೆ ಹಿಂದೂಯೇತರ ವ್ಯಕ್ತಿಯನ್ನು ಸದಸ್ಯನಾಗಿ ನೇಮಿಸಿದ ರಾಜ್ಯ ಕಾಂಗ್ರೆಸ್​ (Congress) ಸರ್ಕಾರದ ವಿರುದ್ಧ ಬಿಜೆಪಿ (BJP) ಹರಿಹಾಯ್ದಿದೆ. ಅವಿಮುಕ್ತೇಶ್ವರ ಬ್ರಹ್ಮರಥೋತ್ಸವದ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸುವ ಕಾರಣ ಸಮಿತಿ ರಚಿಸುವಂತೆ ಶಾಸಕ ಶರತ್ ಬಚ್ಚೇಗೌಡ ಸರ್ಕಾರಕ್ಕೆ ಮನವಿ ಮಾಡಿದ್ದರು. ಶಾಸಕರ ಮನವಿ ಮೇರೆಗೆ ತಹಶಿಲ್ದಾರ್ 12 ಜನ ಸದಸ್ಯರನ್ನು ನೇಮಕ ಮಾಡಿದ್ದಾರೆ. ಈ 12 ಜನರಲ್ಲಿ ನವಾಜ್​ ಎಂಬ ಓರ್ವ ಮುಸ್ಲಿಂ ವ್ಯಕ್ತಿಯನ್ನು ಆಯ್ಕೆ ಮಾಡಿದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತು ಟ್ವೀಟ್​ ಮಾಡಿರುವ ರಾಜ್ಯ ಬಿಜೆಪಿ ಘಟಕ ದೇವಸ್ಥಾನ ಸಮಿತಿ ಪದಾಧಿಕಾರಿಗಳ ಅಧಿಕೃತ ಜ್ಞಾಪನಾ ಪತ್ರ ಪೋಸ್ಟ್​ ಮಾಡಿ ಕಾಂಗ್ರೆಸ್​ ಬಗ್ಗೆ ಎಚ್ಚರ ಎಂದು ಬರೆದು ಬರೆದುಕೊಂಡಿದೆ.

ಅವಿಮುಕ್ತೇಶ್ವರ ಬ್ರಹ್ಮರಥೋತ್ಸವ ಸಮಿತಿ

 

ಇದನ್ನೂ ಓದಿ: ಆನೇಕಲ್ ಬ್ರಹ್ಮರಥೋತ್ಸವದಲ್ಲಿ ಡೊಳ್ಳುವಾದ್ಯಕ್ಕೆ ಹೆಜ್ಜೆಹಾಕಿದ ಹಿರಿಮಹಿಳೆ ದಳಪತಿ ಸಿನಿಮಾ ಹಾಡಿನ ದೃಶ್ಯವೊಂದನ್ನು ನೆನಪಿಸಿದರು!

ಬಿಜೆಪಿ ಟ್ವೀಟ್​

ಹೊಸಕೋಟೆಯ ಶ್ರೀ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮೋತ್ಸವ ಕಾರ್ಯಕ್ರಮದ ಮೇಲ್ವಿಚಾರಣೆಗೆ ಕಾಂಗ್ರೆಸ್ ‘ನವಾಜ್’ ಅವರನ್ನು ನೇಮಿಸಿದೆ. ನಮ್ಮ ದೇವಸ್ಥಾನಗಳನ್ನು ಲೂಟಿ ಮಾಡಲು ಯತ್ನಿಸಿದ ನಂತರ ಹಿಂದೂ ದ್ವೇಷಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಈಗ ಹಿಂದೂಯೇತರರನ್ನು ನೇಮಿಸುವ ಮೂಲಕ ದೇವಾಲಯಗಳು ಮತ್ತು ಅವುಗಳ ಸಂಪನ್ಮೂಲಗಳನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದೆ ಎಂದು ವಾಗ್ದಾಳಿ ಮಾಡಿದೆ.

ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಒಂದು ನಿರ್ದಿಷ್ಟ ಸಮುದಾಯದ ಪರವಾಗಿ ಇದ್ದು, ಹಿಂದೂಗಳ ಹಕ್ಕುಗಳನ್ನು ಕಸಿದುಕೊಳ್ಳುವ ರಾಹುಲ್ ಗಾಂಧಿಯವರ ಭ್ರಮೆಯ ಕಲ್ಪನೆಗಳನ್ನು ಕಾರ್ಯಗತಗೊಳಿಸಲು ಆತುರ ತೋರುತ್ತಿದೆ. ಇದು ಕರ್ನಾಟಕದಲ್ಲಿ ಕೇವಲ ಒಂದು ದೇವಾಲಯ, ನಾಳೆ ಅದು ಭಾರತದ ಪ್ರತಿಯೊಂದು ದೇವಾಲಯವಾಗಬಹುದು. ಜನರು ಕಾಂಗ್ರೆಸ್​ ಬಗ್ಗೆ ಎಚ್ಚರ ವಹಿಸಿ ಎಂದು ಹೇಳಿದೆ.

ಈ ಮೂಲಕ ರಾಜ್ಯ ಬಿಜೆಪಿ ಮತ್ತೆ ರಾಜ್ಯ ಕಾಂಗ್ರೆಸ್​ ವಿರುದ್ಧ ಹಿಂದೂ ಅಸ್ತ್ರ ಪ್ರಯೋಗಿಸಿದೆ. ಹಿಂದೂ ದೇವಾಲಯಕ್ಕೆ ಹಿಂದೂಯೇತರ ವ್ಯಕ್ತಿಯ ನೇಮಕವನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us