AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ ಏರ್​​ಪೋರ್ಟ್​​​​ ಸಮೀಪ ಆರು ಗುಂಟೆ ಜಮೀನು ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಕಿರಿಕ್, ಮಾರಾಮಾರಿ, ಆಸ್ಪತ್ರೆಯಲ್ಲಿ ನರಳಾಟ!

Devanahalli: ದೇವನಹಳ್ಳಿ ಬಳಿ ಯಾವಾಗ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಂತೋ ಆಗ ಅದರ ಆಸುಪಾಸು ಜಮೀನು ಬೆಲೆಗಳು ಗಗನಕ್ಕೆ ಚಿಮ್ಮಿದವು. ಅದರಿಂದ ಒಂದಿಂಚೂ ಜಮೀನಿಗೂ ಅಲ್ಲಿನ ಜನ ಹೊಡೆದಾಟ-ಬಡಿದಾಟಗಳಿಗೆ ಇಳಿದಿದ್ದಾರೆ.

ದೇವನಹಳ್ಳಿ ಏರ್​​ಪೋರ್ಟ್​​​​ ಸಮೀಪ ಆರು ಗುಂಟೆ ಜಮೀನು ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಕಿರಿಕ್, ಮಾರಾಮಾರಿ, ಆಸ್ಪತ್ರೆಯಲ್ಲಿ ನರಳಾಟ!
ಆರು ಗುಂಟೆ ಜಮೀನು ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಕಿರಿಕ್
TV9 Web
| Edited By: |

Updated on:Apr 10, 2023 | 1:30 PM

Share

ಅದು ಒಂದೇ ಗ್ರಾಮದಲ್ಲಿ ಅಕ್ಕಪಕ್ಕದಲ್ಲಿರುವ (Neighbour) ಎರಡು ಕುಟಂಬಗಳು, ಸಾಕಷ್ಟು ವರ್ಷಗಳಿಂದ ಆತ್ಮೀಯರಂತಿದ್ದ ಆ ಇಬ್ಬರ ನಡುವೆ ಕಳೆದ ಕೆಲ ತಿಂಗಳುಗಳಿಂದ ಸಣ್ಣ ಭೂಮಿ ವಿಚಾರಕ್ಕೆ ಕಿರಿಕ್ ಶುರುವಾಗಿತ್ತು. ಆದ್ರೆ ಇದೇ ಕಿರಿಕ್ ಇಂದು ಕಸದ ವಿಚಾರಕ್ಕೆ ದೊಡ್ಡ ಹೈಡ್ರಾಮವನ್ನೆ ಸೃಷ್ಟಿಸಿದ್ದು ಹಾಡಹಗಲೆ ಪರಸ್ಪರ ದೊಣ್ಣೆಗಳಿಂದ ಹೊಡೆದಾಡಿಕೊಳ್ಳುವಂತೆ ಮಾಡಿದೆ! ಅದರಲ್ಲೂ ದೇವನಹಳ್ಳಿ (Devanahalli) ಬಳಿ ಯಾವಾಗ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Devanahalli Airport) ಬಂತೋ ಆಗ ಅದರ ಆಸುಪಾಸು ಜಮೀನು ಬೆಲೆಗಳು ಗಗನಕ್ಕೆ ಚಿಮ್ಮಿದವು. ಅದರಿಂದ ಒಂದಿಂಚು ಜಮೀನಿಗೂ (Land Dispute) ಅಲ್ಲಿನ ಜನ ಹೊಡೆದಾಟ-ಬಡಿದಾಟಗಳಿಗೆ ಇಳಿದಿದ್ದಾರೆ (Fight).

ಹಾಡಹಗಲಲ್ಲಿ ಅಕ್ಕಪಕ್ಕದ ಮನೆಯವರು ಎಂದಿನಂತೆ ಅವರವರ ಕೆಲಸದಲ್ಲಿ ನಿರತರಾಗಿದ್ದರು. ಆದರೆ ಕಸದ ಸಣ್ಣ ವಿಚಾರದ ಬಗ್ಗೆ ಇವರದ್ದು ಯಾವಾಗಲೂ ಇದ್ದದ್ದೆ ಅಂತಲೆ ನೆರೆಹೊರೆಯವರು ಅಂದುಕೊಂಡಿದ್ದರು. ಆದ್ರೆ ಸಣ್ಣ ವಿಚಾರಕ್ಕೆ ಶುರುವಾದ ಕಿರಿಕ್ ನೋಡ ನೋಡ್ತಿದ್ದಂತ ದೊಣ್ಣೆ ಕಲ್ಲುಗಳಿಂದ ಹೊಡೆದಾಡುವ ಹಂತಕ್ಕೆ ತಲುಪಿದ್ದು ಶಾಂತವಾಗಿದ್ದ ಗ್ರಾಮ ಕ್ಷಣ ಮಾತ್ರದಲ್ಲಿ ರಣರಂಗವಾಗಿ ಮಾರ್ಪಟ್ಟಿದೆ. ಎಲ್ಲೆಡೆ ಕೂಗಾಟ ಚೀರಾಟ ಜೊತೆಗೆ ನೆತ್ತರು ಹರಿದಿದ್ದು ಮನೆಯಲ್ಲಿರಬೇಕಾದವರು ಆಸ್ವತ್ರೆಯ ಬೆಡ್ ಮೇಲೆ ಮಲಗಿ ನರಳಾಡುತ್ತಿದ್ದಾರೆ. ಅಷ್ಟಕ್ಕೂ ಇಷ್ಟೆಲ್ಲ ಅವಾಂತರಕ್ಕೆ ಕಾರಣವಾಗಿದ್ದುಆ ಒಂದು ಚಿಕ್ಕ (ಆರು ಗುಂಟೆ) ಜಮೀನು.

ಅಂದಹಾಗೆ ಇಂತಹ ಹೊಡಿಬಡಿ ದೃಶ್ಯಗಳಿಗೆ ಕಾರಣವಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಹಳಿಯೂರು ಗ್ರಾಮ, ಹೌದು ಅಂದಹಾಗೆ ಗ್ರಾಮದ ನಾರಾಯಣಸ್ವಾಮಿ ಮತ್ತು ಮುನಿ ಆಂಜಿನಪ್ಪ ನಡುವೆ ಕಳೆದ ಕೆಲ ತಿಂಗಳುಗಳಿಂದ ಮನೆ ಮುಂದಿನ ಆರು ಗುಂಟೆ ಜಮೀನು ವಿಚಾರಕ್ಕೆ ಕಲಹ ನಡೆಯುತ್ತಿದ್ದು ಹಲವು ಭಾರಿ ಗಲಾಟೆ ಮಾಡಿಕೊಂಡು ಎರಡೂ ಕುಟುಂಬದವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ರಂತೆ.

ಹೀಗಾಗಿ ಪೊಲೀಸರು ಸಹ ಹಲವು ಬಾರಿ ರಾಜಿ ಪಂಚಾಯ್ತಿ ಮಾಡಿ ಕೋರ್ಟ್ ಗೆ ಹೋಗುವಂತೆ ಹೇಳಿದ್ದು ಇದೇ ವಿಚಾರಕ್ಕೆ ಕೋರ್ಟ್ ನಲ್ಲಿ ಎರಡೂ ಕಡೆಯವರು ವ್ಯಾಜ್ಯ ನಡೆಸುತ್ತಿದ್ದಾರಂತೆ. ಈ ನಡುವೆ ಮೊನ್ನೆ ಶನಿವಾರ ಸಂಜೆ ಮನೆ ಮುಂದಿನ ಖಾಲಿ ಜಮೀನಿನಲ್ಲಿ ಕಸ ಹಾಕ್ತಿದ್ದಾರೆ, ಕೇಳಿದ್ರೆ ಗಲಾಟೆ ಮಾಡ್ತಿದ್ದಾರೆ ಅಂತ ನಾರಾಯಣಸ್ವಾಮಿ ಕುಟುಂಬಸ್ಥರು ಮನೆ ಮುಂದೆ ಸಿಸಿ ಕ್ಯಾಮರಾ ಅಳವಡಿಕೆ ಮಾಡಲು ಮುಂದಾಗಿದ್ದಾರೆ. ಈ ವೇಳೇ ಇದೇ ವಿಚಾರಕ್ಕೆ ಇಬ್ಬರ ನಡುವೆ ಕಿರಿಕ್ ನಡೆದಿದ್ದ ಮಾತುಗಳಿಂದ ಶುರುವಾದ ಜಗಳ ನೋಡನೋಡ್ತಿದ್ದಂತೆ ಇಬ್ಬರು ಪರಸ್ಪರ ಬಡಿದಾಡಿಕೊಳ್ಳುವ ಹಂತಕ್ಕೆ ಬಂದಿದೆ.

ಇದನ್ನೂ ಓದಿ:

ಆನೇಕಲ್ ಹೆಬ್ಬಗೋಡಿ ವ್ಯಾಪ್ತಿಯಲ್ಲಿ ಯುವಕರು ಬುಲ್ಲೆಟ್ ಬೈಕುಗಳನ್ನು ಖರೀದಿ ಮಾಡಲು ಒಲ್ಲೆ ಅನ್ನುತ್ತಿದ್ದಾರೆ! ಯಾಕೆ ಗೊತ್ತಾ?

ಸಿಸಿ ಕ್ಯಾಮರಾ ಹಾಕಬಾರದು ವ್ಯಾಜ್ಯ ಮುಗಿಯುವವರೆಗೂ ಎಂದಿನಂತೆ ಯಥಾಸ್ಥಿತಿ ಮುಂದುವರೆಸಿ ಅಂತ ಅಧಿಕಾರಿಗಳು ಹೇಳಿದ್ದರೂ, ರಕ್ಷಣೆಗೆ ಇರಲಿ ಅಂತ ನಾರಾಯಣಸ್ವಾಮಿ ಕುಟುಂಬಸ್ಥರು ಸಿಸಿ ಕ್ಯಾಮರಾ ಅಳವಡಿಕೆಗೆ ಮುಂದಾಗಿದ್ರಂತೆ. ಆದ್ರೆ ಇದೇ ವಿಚಾರವೆ ಪರಸ್ಪರ ದೊಣ್ಣೆಗಳಿಂದ ಹೊಡೆದಾಡಿಕೊಳ್ಳುವಂತೆ ಮಾಡಿದ್ದು ಹೊಡೆದಾಟದ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ಅಲ್ಲದೆ ಗಲಾಟೆಯಲ್ಲಿ ಎರಡೂ ಕುಟುಂಬಸ್ಥರು ಹೊಡೆದಾಡಿಕೊಂಡ ಕಾರಣ ತಲೆಗೆ ಪೆಟ್ಟಾಗಿದ್ದು 6 ಜನ ಆಸ್ವತ್ರೆ ಪಾಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ ಬಗ್ಗೆ ಎರಡು ಕುಟುಂಬಸ್ಥರು ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಒಟ್ಟಾರೆ ಸಣ್ಣ ಜಮೀನು ವಿಚಾರದ ವ್ಯಾಜ್ಯ ಕೋರ್ಟ್ ನಲ್ಲಿ ನಡೆಯುತ್ತಿದ್ದರೂ ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳದಿಂದ ಪರಸ್ಪರ ಹಲ್ಲೆ ಮಾಡಿಕೊಳ್ಳುವ ಹಂತಕ್ಕೆ ತಲುಪಿದ್ದು ಮಾತ್ರ ನಿಜಕ್ಕೂ ದುರಂತ. ಇನ್ನು ಈ ಸಂಬಂಧ ವಿಜಯಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದು ಮತ್ತೊಮ್ಮೆ ಇಂತಹ ಘಟನೆಗಳು ನಡೆಯದಂತೆ ಎಚ್ಚರವಹಿಸುವ ಕೆಲಸ ಮಾಡಬೇಕಿದೆ.

ವರದಿ: ನವೀನ್, ಟಿವಿ 9, ದೇವನಹಳ್ಳಿ

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:43 pm, Mon, 10 April 23

ವಿಜಯಪುರ ರಾಬರಿ: ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!
ವಿಜಯಪುರ ರಾಬರಿ: ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!
10ನೇ ದಿನ ಉತ್ಖನನ ವೇಳೆ ಲಕ್ಕುಂಡಿಯಲ್ಲಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!
10ನೇ ದಿನ ಉತ್ಖನನ ವೇಳೆ ಲಕ್ಕುಂಡಿಯಲ್ಲಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!
ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ
ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ
ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು?
ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು?
ಶಿವಮೊಗ್ಗ: ಶಾಲೆಯಲ್ಲಿ ನೀಡಿದ ಮಾತ್ರೆ ನುಂಗಿ 59 ವಿದ್ಯಾರ್ಥಿಗಳು ಅಸ್ವಸ್ಥ
ಶಿವಮೊಗ್ಗ: ಶಾಲೆಯಲ್ಲಿ ನೀಡಿದ ಮಾತ್ರೆ ನುಂಗಿ 59 ವಿದ್ಯಾರ್ಥಿಗಳು ಅಸ್ವಸ್ಥ
'ಮಿನಿ ಕಾಶ್ಮೀರ'ದಲ್ಲಿ ಮಕ್ಕಳ ಆಟ
'ಮಿನಿ ಕಾಶ್ಮೀರ'ದಲ್ಲಿ ಮಕ್ಕಳ ಆಟ
ಅರೆಸ್ಟ್​ ಆದ್ರೂ ಖುಷಿ ಖುಷಿಯಲ್ಲಿರುವ ರಾಜೀವ್ ಗೌಡ ಹೇಳಿದ್ದೇನು?
ಅರೆಸ್ಟ್​ ಆದ್ರೂ ಖುಷಿ ಖುಷಿಯಲ್ಲಿರುವ ರಾಜೀವ್ ಗೌಡ ಹೇಳಿದ್ದೇನು?
ಏಮ್ಸ್ ಆಸ್ಪತ್ರೆ ಲಿಫ್ಟ್‌ನಲ್ಲಿ ಸರಗಳ್ಳತನ
ಏಮ್ಸ್ ಆಸ್ಪತ್ರೆ ಲಿಫ್ಟ್‌ನಲ್ಲಿ ಸರಗಳ್ಳತನ
ರಾಜೀವ್​ ಗೌಡನಿಗೆ ಆಶ್ರಯ ನೀಡಿದ್ದ ಉದ್ಯಮಿ ಯಾರು? ಸಿಕ್ಕಿಬಿದ್ದಿದ್ದು ಹೇಗೆ?
ರಾಜೀವ್​ ಗೌಡನಿಗೆ ಆಶ್ರಯ ನೀಡಿದ್ದ ಉದ್ಯಮಿ ಯಾರು? ಸಿಕ್ಕಿಬಿದ್ದಿದ್ದು ಹೇಗೆ?
ಕತ್ತರಿಸಿದ ನಂತರವೂ ಸಾಯದೆ ಚಡಪಡಿಸುತ್ತಿರುವ ಮೀನು! ವಿಡಿಯೋ ನೋಡಿ
ಕತ್ತರಿಸಿದ ನಂತರವೂ ಸಾಯದೆ ಚಡಪಡಿಸುತ್ತಿರುವ ಮೀನು! ವಿಡಿಯೋ ನೋಡಿ