AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಮಕ್ಕಳಾಗಿಲ್ಲ ಎಂದು ಮನನೊಂದು ನೀರಿನ ಸಂಪ್‌ಗೆ ಬಿದ್ದು ಗೃಹಿಣಿ ಆತ್ಮಹತ್ಯೆ

ನೆಲಮಂಗಲ ತಾಲೂಕಿನ ವೀರ ರಾಘವನಪಾಳ್ಯದಲ್ಲಿ ನೀರಿನ ಸಂಪ್‌ಗೆ ಬಿದ್ದು ಗೃಹಿಣಿವೊಬ್ಬರು ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ನಡೆದಿದೆ. ಈ ಕುರಿತು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲಮಂಗಲ: ಮಕ್ಕಳಾಗಿಲ್ಲ ಎಂದು ಮನನೊಂದು ನೀರಿನ ಸಂಪ್‌ಗೆ ಬಿದ್ದು ಗೃಹಿಣಿ ಆತ್ಮಹತ್ಯೆ
ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ
Follow us
ಬಿ ಮೂರ್ತಿ, ನೆಲಮಂಗಲ
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 02, 2023 | 3:15 PM

ಬೆಂಗಳೂರು ಗ್ರಾಮಾಂತರ, ಡಿ.02: ಮಕ್ಕಳಾಗಿಲ್ಲವೆಂದು ಮನನೊಂದು ನೀರಿನ ಸಂಪ್‌ಗೆ ಬಿದ್ದು ಗೃಹಿಣಿವೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆಯ ನೆಲಮಂಗಲ ತಾಲೂಕಿನ ವೀರ ರಾಘವನಪಾಳ್ಯದಲ್ಲಿ ನಡೆದಿದೆ.  ಸವಿತಾ(38) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. 12 ವರ್ಷದ ಹಿಂದೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೆರೆಗೂಡು ಗ್ರಾಮದ ರವಿಕುಮಾರ್ ಎಂಬುವವರ ಜೊತೆ ಮದುವೆಯಾಗಿತ್ತು. ಇನ್ನು ಕಳೆದ ಎರಡು ವರ್ಷಗಳಿಂದ ನೆಲಮಂಗಲದಲ್ಲಿ ದಂಪತಿ ವಾಸವಿದ್ದರು.

ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣು

ಇನ್ನು 12 ವರ್ಷವಾದರೂ ಮಕ್ಕಳಾಗಿಲ್ಲವೆಂಬ ಕೊರಗು ಹೊಂದಿದ್ದ ಗೃಹಿಣಿ ಸವಿತಾ, ಪತಿ ಬಳಿ ಮಕ್ಕಳಿಲ್ಲದ ವಿಷಯ ಪದೇ ಪದೇ ಪ್ರಸ್ತಾಪ ಮಾಡುತ್ತಿದ್ದರು. ಇದರಿಂದ ತೀವ್ರ ಮನನೊಂದಿದ್ದ ಅವರು, ಇಂದು(ಡಿ.02) ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನೇಕ ಬಾರಿ ಪತ್ನಿಗೆ ಪೋನ್ ಮಾಡಿದರೂ ಕರೆ ಸ್ವೀಕರಿಸದ ಹಿನ್ನಲೆ ಮನೆ ಬಳಿ ಬಂದು ಹುಡುಕುವ ವೇಳೆ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಪುರುಷರಲ್ಲಿ ಹೆಚ್ಚಿನ ಆತ್ಮಹತ್ಯೆ ದರಗಳಿಗೆ ಆರ್ಥಿಕ ಬಿಕ್ಕಟ್ಟುಗಳು ಕಾರಣವಾಗುತ್ತಿವೆ: ಅಧ್ಯಯನ

ಸಾಲಬಾಧೆ ತಾಳಲಾರದೆ ಉದ್ಯೋಗಿ ಆತ್ಮಹತ್ಯೆ

ಉತ್ತರ ಕನ್ನಡ: ಜಿಲ್ಲೆಯ ಕಾರವಾರದ ಪದ್ಮನಾಭನಗರದಲ್ಲಿ ಸಾಲಬಾಧೆ ತಾಳಲಾರದೆ ಬಿಣಗಾದ ಆದಿತ್ಯ ಬಿರ್ಲಾ ಕಂಪನಿ ಉದ್ಯೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಜಯ್ ಕಾಮತ್(39) ಆತ್ಮಹತ್ಯೆ ಮಾಡಿಕೊಂಡ ಯುವಕ. ಈ ಕುರಿತು ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್