AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲದಲ್ಲಿ ಫಾರ್ಚೂನರ್ ಕಾರು ಅಪಘಾತ: ಕಾರಿನಲ್ಲಿ ಶಾಸಕರಿಲ್ಲ, ಆದರೆ ಪಾಸ್ ಪತ್ತೆ

ನೆಲಮಂಗಲ ತಾಲೂಕಿನ ಕೆಬಿಡಿ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಾರು ಮತ್ತು ಬೈಕ್​ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತಕ್ಕೊಳಗಾದ ಕಾರ್​ನಲ್ಲಿ ಶಾಸಕ ಭೀಮಾನಾಯ್ಕ್‌ಗೆ ಸೇರಿದ ಪಾಸ್‌ ಪತ್ತೆಯಾಗಿದೆ.

ನೆಲಮಂಗಲದಲ್ಲಿ ಫಾರ್ಚೂನರ್ ಕಾರು ಅಪಘಾತ: ಕಾರಿನಲ್ಲಿ ಶಾಸಕರಿಲ್ಲ, ಆದರೆ ಪಾಸ್ ಪತ್ತೆ
ಶಾಸಕ ಭೀಮಾನಾಯ್ಕ್‌ ಆಪ್ತನ ಕಾರು ಅಪಘಾತ
TV9 Web
| Edited By: |

Updated on: Nov 20, 2022 | 9:47 PM

Share

ನೆಲಮಂಗಲ: ನೆಲಮಂಗಲ (Nelamangala) ತಾಲೂಕಿನ ಕೆಬಿಡಿ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಾರು ಮತ್ತು ಬೈಕ್​ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ, ಷರಾಪುರಪಾಳ್ಯದ ನಿವಾಸಿ ಸಿದ್ದಪ್ಪ (55) ಅವರಿಗೆ ಗಂಭೀರ ಗಾಯವಾಗಿದೆ. ಗಾಯಾಳುವನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಳಿಕ ಕಾರು ಚಾಲಕ ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಅಪಘಾತವಾದ ಕಾರಿನಲ್ಲಿ ಶಾಸಕರ ಪಾಸ್‌ ಪತ್ತೆ

ಅಪಘಾತಕ್ಕೊಳಗಾದ ಫಾರ್ಚೂನರ್ ಕಾರಿನಲ್ಲಿ (KA24 M4365) ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ಕಾಂಗ್ರೆಸ್​ ಶಾಸಕ ಭೀಮಾನಾಯ್ಕ್‌ಗೆ ಸೇರಿದ ಪಾಸ್‌ ಪತ್ತೆಯಾಗಿದೆ. ಕಾರಿನಲ್ಲಿ ಶಾಸಕ ಭೀಮಾನಾಯ್ಕ್‌ ಅವರ KA29 N1221 ಸಂಖ್ಯೆಯ ಪಾಸ್ ಪತ್ತೆಯಾಗಿದೆ.

ಅಪಘಾತವಾದ ಕಾರಿನಲ್ಲಿ ಶಾಸಕರ ಪಾಸ್‌ ಪತ್ತೆ: ಶಾಸಕ ಭೀಮಾನಾಯ್ಕ್‌ ಸ್ಪಷ್ಟನೆ

ಅಪಘಾತಕ್ಕೊಳಗಾದ ಫಾರ್ಚೂನರ್ ಕಾರು ಆಪ್ತ ನಾಗರಾಜ್‌ಗೆ ಸೇರಿದ್ದು. ನಾಗರಾಜ್‌ ನನ್ನ ಕಾರಿನ ಪಾಸ್ ಕೇಳಿ ಪಡೆದಿದ್ದನು. ಹೀಗಾಗಿ ಪಕ್ಷದ ಕೆಲಸ ಸೇರಿದಂತೆ ಕ್ಷೇತ್ರದ ಕೆಲಸಕ್ಕೆ ಬಳಸಲು ನಾನೇ ಎಂಎಲ್​ಎ ಪಾಸ್​​ ನೀಡಿದ್ದೇನೆ. ನಾನು ಕೊಪ್ಪಳದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ನೆಲಮಂಗಲದ ಅಪಘಾತದ ವಿಚಾರ ನನಗೆ ತಡವಾಗಿ ಮಾಹಿತಿ ದೊರೆತಿದೆ  ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್