AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್​ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದು ದರ್ಪ: ಬಿಎಂಟಿಸಿ ಕಂಡಕ್ಟರ್ ಸಸ್ಪೆಂಡ್!

BMTC Conductor Suspended: ನೆಲಮಂಗಲ ಟೋಲ್ ಬಳಿ ಬಸ್ ಹತ್ತಲು ಬಂದಿದ್ದ ಭಿಕ್ಷುಕನಿಗೆ ಒದ್ದ ಬಿಎಂಟಿಸಿ ಕಂಡಕ್ಟರ್​​ನ್ನು ಅಮಾನತುಗೊಳಿಸಲಾಗಿದೆ. ಈ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಬೆನ್ನಲ್ಲೇ ಬಿಎಂಟಿಸಿ ಈ ಕಠಿಣ ಕ್ರಮ ಕೈಗೊಂಡಿದೆ. ಘಟನೆ ಕುರಿತು ಇಲಾಖಾ ತನಿಖೆಗೆ ಆದೇಶಿಸಲಾಗಿದೆ.

ಬಸ್​ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದು ದರ್ಪ: ಬಿಎಂಟಿಸಿ ಕಂಡಕ್ಟರ್ ಸಸ್ಪೆಂಡ್!
ಬಸ್​​ ಕಂಡಕ್ಟರ್ ಸಸ್ಪೆಂಡ್Image Credit source: tv9 kannada
ಕಿರಣ್​ ಸೂರ್ಯ
| Edited By: |

Updated on:Aug 04, 2026 | 7:27 PM

Share

ನೆಲಮಂಗಲ, ಆಗಸ್ಟ್​​ 04: ಬಸ್ ಹತ್ತಲು ಬಂದಿದ್ದ ಭಿಕ್ಷುಕ ನನ್ನು ಕಾಲಿನಿಂದ ಒದ್ದು ದರ್ಪ ಮೆರೆದಿದ್ದ ಕಂಡಕ್ಟರ್​​ ಕೃಷ್ಣಮೂರ್ತಿಯನ್ನು ಅಮಾನತು (Suspension) ಮಾಡಿ ಬಿಎಂಟಿಸಿ (BMTC) ಮಂಗಳವಾರ ಆದೇಶ ಹೊರಡಿಸಿದೆ. ಈ ಘಟನೆ ಕುರಿತಾಗಿ ಟಿವಿ9 ವರದಿ ಪ್ರಸಾರ ಮಾಡಿತ್ತು. ಈ ಬೆನ್ನಲ್ಲೇ ಇದೀಗ ಬಿಎಂಟಿಸಿ ಆಡಳಿತ ಮಂಡಳಿಯು ತಕ್ಷಣವೇ ಈ ಕಠಿಣ ಕ್ರಮಕೈಗೊಂಡಿದೆ.

ಮಾಧ್ಯಮ ಪ್ರಕಟಣೆಯಲ್ಲಿ ಏನಿದೆ?

ಈ ಕುರಿತಾಗಿ ಬಿಎಂಟಿಸಿ ಸಂಸ್ಥೆಯು ಅಧಿಕೃತ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಶಿವನ್‌ಪುರ ಡಿಪೋಗೆ ಸೇರಿದ ವಾಹನ ಸಂಖ್ಯೆ (KA-57 F-1104) ಬಸ್​ನಲ್ಲಿ ಕೃಷ್ಣಮೂರ್ತಿ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ವರ್ತನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋವನ್ನು ಸಂಸ್ಥೆಯು ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ಪ್ರಕರಣದ ಕುರಿತು ತಕ್ಷಣವೇ ಇಲಾಖಾ ಮಟ್ಟದ ವಿಚಾರಣೆಗೆ ಆದೇಶಿಸಲಾಗಿದ್ದು, ಸತ್ಯಾಂಶವನ್ನು ನಿಷ್ಪಕ್ಷಪಾತವಾಗಿ ಪರಿಶೀಲಿಸಲು ಸಂಬಂಧಿತ ನಿರ್ವಾಹಕರನ್ನು ಇಂದಿನಿಂದ ಜಾರಿಗೆ ಬರುವಂತೆ ವಿಚಾರಣಾಪೂರ್ವ ಅಮಾನತ್ತಿನಲ್ಲಿ ಇರಿಸಲಾಗಿದೆ.

ಇದನ್ನೂ ಓದಿ: KSRTC, BMTC ಸೇರಿದಂತೆ 4 ನಿಗಮಗಳ ಬಸ್ ಟಿಕೆಟ್ ‌ದರ ಏರಿಕೆ ಫಿಕ್ಸ್: ಎಷ್ಟು, ಯಾವಾಗಿನಿಂದ?

ಘಟನೆಯ ನಿಖರವಾದ ವಾಸ್ತವಾಂಶವನ್ನು ತಿಳಿದುಕೊಳ್ಳುವ ಉದ್ದೇಶದಿಂದ ಸಂಬಂಧಿತ ನಿರ್ವಾಹಕ, ಪ್ರಯಾಣಿಕ, ಪ್ರತ್ಯಕ್ಷದರ್ಶಿಗಳ ಹೇಳಿಕೆಗಳು, ಬಸ್‌ನಲ್ಲಿರುವ ಸಿಸಿಟಿವಿ ದೃಶ್ಯಾವಳಿ ಹಾಗೂ ಇತರ ಸಂಬಂಧಿತ ಸಾಕ್ಷಾಧಾರಗಳನ್ನು ಪರಿಶೀಲಿಸಿ ಸಮಗ್ರ ತನಿಖೆ ನಡೆಸಲಾಗುವುದು ಎಂದು ತಿಳಿಸಲಾಗಿದೆ.

ನಡೆದಿದ್ದೇನು?

ನೆಲಮಂಗಲ ತಾಲೂಕಿನ ಹರಿಶಿನಕುಂಟೆ ಬಳಿ ಈ ಘಟನೆ ನಡೆದಿದೆ. ವೈರಲ್​ ವಿಡಿಯೋ ಪ್ರಕಾರ, ಬಿಎಂಟಿಸಿ ಕಂಡಕ್ಟರ್ ಬಿಕ್ಷುಕನೋರ್ವನಿಗೆ ಕಾಲಿನಿಂದ ಒದ್ದಿದ್ದಾರೆ. ಮೇಲ್ನೋಟಕ್ಕೆ ಬಿಕ್ಷುಕ ಬಸ್ ಹತ್ತಲು ಮುಂದಾಗಿದ್ದಾನೆ. ಈ ವೇಳೆ ಕಂಡಕ್ಟರ್ ಜೊತೆ ಮಾತಿಗೆ ಮಾತು ಬೆಳೆದಿದ್ದು, ಬಳಿಕ ಕಂಡಕ್ಟರ್ ಕಾಲಿನಿಂದ ಒದ್ದಿದ್ದಾನೆ. ನಂತರ ಆತನನ್ನ ತಳ್ಳಿ ಕೆಳಗೆ ಬೀಳಿಸಿ ದರ್ಪ ಮೆರೆದಿದ್ದಾರೆ.

ಯಾರೇ ಆದರೂ ಕಾಲಿನಿಂದ ಒದೆಯುವುದು ತಪ್ಪು ಎಂದ ಸ್ಥಳಿಯರು

ಇನ್ನು ಈ ಬಗ್ಗೆ ಸ್ಥಳಿಯರಾದ ನಂಜುಂಡಯ್ಯ ಎನ್ನುವವರು ಮಾತನಾಡಿದ್ದು, ‘ಆತ ಕೆಳಗೆ ಬೀಳುವುದನ್ನ ಮಾತ್ರ ನೋಡಿದೆ. ಏಕೆ, ಏನು ಅಂತ ಗೊತ್ತಾಗಲಿಲ್ಲ. ನಮ್ಮ ಬಳಿ ಬಂದು ಏನು ಹೇಲಿಕೊಳ್ಳಲಿಲ್ಲ, ಹೇಳಿದ್ದರೆ ಏನಾದರೂ ಸಹಾಯ ಮಾಡಬಹುದಿತ್ತು. ಮೊದಲು ನಾನು ಹುಡುಗಿ ಅಂದುಕೊಂಡಿದ್ದೆ, ವಿಡಿಯೋ ನೋಡಿದಾಗ ಬಿಕ್ಷುಕನ ರೀತಿ ಇರುವುದು ಗೊತ್ತಾಯಿತು. ಯಾರೇ ಆದರೂ ಕಾಲಿನಿಂದ ಒದೆಯುವುದು ತಪ್ಪು. ತಪ್ಪು ಮಾಡಿದ್ದರೆ ಪೊಲೀಸರು ಇದ್ದರು, ಯಾರಿಗಾದರೂ ಹೇಳಬಹುದಿತ್ತು ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:23 pm, Tue, 4 August 26

Follow Us
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ರು ಕಾರಣ
ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ರು ಕಾರಣ