AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಹಲಸಿನಹಣ್ಣು ಕೀಳಲು ಹೋಗಿ ಮರದಿಂದ ಬಿದ್ದು ಬಿಎಂಟಿಸಿ ಚಾಲಕ ಸಾವು

ಹಲಸಿನ ಹಣ್ಣು ಕೀಳುವಾಗ ಮರದ ಮೇಲಿಂದ ಬಿದ್ದು ಬಿಎಂಟಿಸಿ(BMTC) ಬಸ್ ಚಾಲಕ ಸಾವನ್ನಪ್ಪಿದ ಧಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ(Nelamangala) ತಾಲೂಕಿನ ಅರಳಸಂದ್ರ ಗ್ರಾಮದಲ್ಲಿ ನಡೆದಿದೆ.

ನೆಲಮಂಗಲ: ಹಲಸಿನಹಣ್ಣು ಕೀಳಲು ಹೋಗಿ ಮರದಿಂದ ಬಿದ್ದು ಬಿಎಂಟಿಸಿ ಚಾಲಕ ಸಾವು
ಮೃತ ವ್ಯಕ್ತಿ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Mar 30, 2024 | 7:34 PM

Share

ಬೆಂಗಳೂರು ಗ್ರಾಮಾಂತರ, ಮಾ.30: ಜಿಲ್ಲೆಯ ನೆಲಮಂಗಲ(Nelamangala) ತಾಲೂಕಿನ ಅರಳಸಂದ್ರ ಗ್ರಾಮದಲ್ಲಿ ಹಲಸಿನ ಹಣ್ಣು ಕೀಳುವಾಗ ಮರದ ಮೇಲಿಂದ ಬಿದ್ದು ಬಿಎಂಟಿಸಿ(BMTC) ಬಸ್ ಚಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ಮಂಜುನಾಥ್(43) ಮೃತ ರ್ದುದೈವಿ. ಇವರು ಕಳೆದ 15 ವರ್ಷಗಳಿಂದ ಪೀಣ್ಯದ ಬಿಎಂಟಿಸಿ ಡಿಪೋ 9ರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಇದೀಗ ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸಾರ್ವಜನಿಕ ಅಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ. ಈ ಕುರಿತು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಹಿಟ್ ಆ್ಯಂಡ್​ ರನ್​ಗೆ ಮಾವ, ಅಳಿಯ ಬಲಿ

ಹಾಸನ: ಜಿಲ್ಲೆಯಲ್ಲಿ ಹಿಟ್ ಆ್ಯಂಡ್​ ರನ್​ಗೆ ಮಾವ ಮತ್ತು ಅಳಿಯ ಕೊನೆಯುಸಿರೆಳೆದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶೆಟ್ಟಿಹಳ್ಳಿ ಬೈಪಾಸ್​​ನಲ್ಲಿ ನಡೆದಿದೆ. ಅರಸೀಕೆರೆ ತಾಲೂಕಿನ ನಾಗೇನಹಳ್ಳಿ ನಿವಾಸಿ ಮಧು(35) ಹಾಗೂ ಬೇಲೂರು ತಾಲೂಕಿನ ದೇವಿಹಳ್ಳಿ ನಿವಾಸಿ ಜವರಯ್ಯ(65) ಮೃತ ರ್ದುದೈವಿಗಳು. ಬೆಂಗಳೂರಿನಿಂದ ಮಾವ, ಪತ್ನಿ ಜೊತೆ ಕಾರಿನಲ್ಲಿ ಬರುತ್ತಿದ್ದ ಮಧು, ಶೆಟ್ಟಿಹಳ್ಳಿ ಬೈಪಾಸ್​​ನಲ್ಲಿ ಕಾರಿನ ಟೈರ್​​​ ಪಂಚರ್ ​​ಆದ ಹಿನ್ನೆಲೆ ಟೈರ್ ಬದಲಾಯಿಸುವಾಗ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ:ಬೆಂಗಳೂರು: BMTC ಬಸ್ ಹರಿದು ಇಂಜಿನಿಯರ್ ವಿದ್ಯಾರ್ಥಿ ಸಾವು, 10 ದಿನಗಳಲ್ಲಿ ಬಿಎಂಟಿಸಿಗೆ ಮೂರನೇ ಬಲಿ

ಹೌದು, ಈ ವೇಳೆ ಬೆಂಗಳೂರು ಕಡೆಯಿಂದ ವೇಗವಾಗಿ ಬರುತ್ತಿದ್ದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಮಧು ಸ್ಥಳದಲ್ಲೇ ಸಾವನ್ನಪ್ಪಿದರೆ, ತೀವ್ರವಾಗಿ ಗಾಯಗೊಂಡಿದ್ದ ಜವರಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಧು ಪತ್ನಿ ಗೀತಾಗೆ ಚನ್ನರಾಯಪಟ್ಟಣ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇತ್ತ ಲಾರಿ ನಿಲ್ಲಿಸದೆ ಚಾಲಕ ಎಸ್ಕೇಪ್ ಆಗಿದ್ದಾನೆ. ಈ ಕುರಿತು ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ