AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ, ಮರ್ಮಾಂಗ ತುಳಿದು ಹಲ್ಲೆ: ರೇಣುಕಾಸ್ವಾಮಿ ರೀತಿ ಮಾಡುತ್ತೇವೆ ಎಂದ ಆರೋಪಿಗಳು

ಕಳೆದ ವರ್ಷ ಬೆಂಗಳೂರಿನ ಪಟ್ಟಣಗೆರೆ ಶೆಡ್​ನಲ್ಲಿ ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿ, ಕೊಲೆ ಮಾಡಲಾಗಿತ್ತು. ಈ ಪ್ರಕರಣ ಮಾಸುವ ಮುನ್ನವೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಇಂತಹದ್ದೇ ಪ್ರಕರಣ ನಡೆದಿದೆ. ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ ರೀತಿಯಲ್ಲೇ ಓರ್ವ ಯುವಕನ ಮೇಲೆ ಹಲ್ಲೆ ಮಾಡಲಾಗಿದೆ.

ವಿವೇಕ ಬಿರಾದಾರ
|

Updated on:Jul 07, 2025 | 12:03 PM

Share

ನೆಲಮಂಗಲ, ಜುಲೈ 07: ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ನೆಲಮಂಗಲ (Nelamangala) ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದೆ. ಕುಶಾಲ್ ಹಲ್ಲೆಗೊಳಗಾದ ಯುವಕ. ಪ್ರಕರಣ ಸಂಬಂಧ ಸೋಲದೇವನಹಳ್ಳಿ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕಾಲೇಜಿನ ದಿನಗಳಲ್ಲಿ ಕುಶಾಲ್ ಮತ್ತು ಯುವತಿ ಮಧ್ಯೆ ಪ್ರೀತಿ ಅರಳಿತ್ತು. ಎರಡು ವರ್ಷದ ಪ್ರೀತಿ ಕೆಲವು ತಿಂಗಳ ಹಿಂದೆ ಮುರಿದು ಬಿದ್ದಿತ್ತು. ಈ ವೇಳೆ ಯುವತಿಗೆ ಬೇರೊಬ್ಬ ಹುಡುಗನ ಪರಿಚಯವಾಗಿತ್ತು. ಇದನ್ನು ಸಹಿಸಲಾಗದೆ ಕುಶಾಲ್, ಯುವತಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದನು. ಹೀಗಾಗಿ, ಯುವತಿಯ ಗೆಳೆಯ ಮತ್ತು ಆತನ ಸ್ನೇಹಿತರು ಸೇರಿಕೊಂಡು ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಅಂತ ಕುಶಾಲ್​ನನ್ನು ಬಾಗಲಗುಂಟೆಯ ಎಜಿಪಿ ಲೇಔಟ್​ಗೆ ಕರೆಸಿಕೊಂಡು ಅಪಹರಿಸಿದ್ದಾರೆ.

ಇದನ್ನೂ ಓದಿ: ಶಾಸಕರ ಮನೆಯ ಹಿಂಭಾಗದ ರಸ್ತೆಯಲ್ಲಿ ನಿಲ್ಲಿಸಿದ್ದ 20 ವಾಹನಗಳ ಮೇಲೆ ದುಷ್ಕರ್ಮಿಗಳಿಂದ ದಾಳಿ

ಇದನ್ನೂ ಓದಿ
Image
ಸಂಚಾರ ಮಾಡದಿದ್ದರೂ ಬಿಎಂಟಿಸಿ ಬಸ್​ಗೆ ಬೇಕಂತೆ ಡೀಸೆಲ್! ಡೀಸೆಲ್ ಹಣ ಲೂಟಿ
Image
ಪತ್ನಿಯ ಕುತ್ತಿಗೆ, ಮುಖಕ್ಕೆ 20 ಕ್ಕೂ ಹೆಚ್ಚು ಬಾರಿ ಇರಿದು ಕೊಂದ ಪತಿ
Image
ಶಿವಮೊಗ್ಗದಲ್ಲಿ ಹಿಂದೂ ದೇವರಿಗೆ ಅಪಮಾನ: ಇಬ್ಬರು ಕಿಡಿಗೇಡಿಗಳು ಅಂದರ್
Image
ಗೆಳತಿಯ ಪತಿಯನ್ನು ಕೊಲೆ ಮಾಡಿದ ಶಾಲಾ ವಾಹನ ಚಾಲಕ? ಅನೈತಿಕ ಸಂಬಂಧ ಶಂಕೆ

ಬಳಿಕ, ಆರೋಪಿಗಳು ಕುಶಾಲ್​ನನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಕುಶಾಲ್​ನ ಬಟ್ಟೆ ಬಿಚ್ಚಿ ಮರ್ಮಾಂಗ ತುಳಿದು ವಿಕೃತಿ ಮೆರೆದಿದ್ದಾರೆ. ಕುಶಾಲ್​ನ​ ಬಟ್ಟೆ ಬಿಚ್ಚಿ ಹಲ್ಲೆ ಮಾಡಿರುವುದನ್ನು ಆರೋಪಿಗಳು ವಿಡಿಯೋ ಮಾಡಿಕೊಂಡಿದ್ದಾರೆ. ವಿಡಿಯೋದಲ್ಲಿ ಆರೋಪಿಗಳು, ರೇಣುಕಾಸ್ವಾಮಿ ಕೊಲೆ ಕೇಸ್​ನಂತೆ ಇದೂ ಆಗುತ್ತೆ. ಎ1 ಹೇಮಂತ ಎ2 ನಾನು ಎಂದು ವಿಡಿಯೋದಲ್ಲಿ ಹೇಳಿದ್ದಾರೆ. ಬಳಿಕ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಕುಶಾಲ್​ಗೆ ಆರೋಪಿಗಳು ಬೆದರಿಕೆ ಹಾಕಿದ್ದಾರೆ.

ಈ ಘಟನೆ ಸಂಬಂಧ ಸೋಲದೇವನಹಳ್ಳಿ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಹೇಮಂತ್, ಯಶವಂತ್​, ಶಿವಶಂಕರ್, ಶಶಾಂಕ್ ಗೌಡ ಬಂಧಿತರು. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ: ಮಂಜುನಾಥ್, ಟಿವಿ9 ನೆಲಮಂಗಲ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:55 am, Mon, 7 July 25

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?